![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 17, 2022, 12:05 PM IST
ಕಾಪು: ಕಳೆದ ಬುಧವಾರ ಉದ್ಯಾವರ ಸಮೀಪದ ಬೊಳ್ಜೆಯಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಕೊಪ್ಪ ನಿವಾಸಿ ರಘು ಪೂಜಾರಿ (65) ಎಂದು ಗುರುತಿಸಲಾಗಿದೆ.
ಕೊಪ್ಪ ಮೂಲದ ರಘು ಪೂಜಾರಿ ಉದ್ಯಾವರ ಸಂಪಿಗೆ ನಗರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಆಗಾಗ ಆಗಮಿಸುತ್ತಿದ್ದರು. ಮಾ. 10ರಂದು ಬೊಳ್ಜೆ ರೈಲ್ವೇ ಟ್ರ್ಯಾಕ್ನಲ್ಲಿ ಅವರ ಶವ ಪತ್ತೆಯಾಗಿತ್ತು.
ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಬೊಳ್ಜೆಗೆ ಹೋಗಿದ್ದು ಅಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ. ಸಂಪೂರ್ಣ ಛಿದ್ರ ಛಿದ್ರವಾಗಿದ್ದ ಮೃತದೇಹವನ್ನು ಕಾಪುವಿನ ಆಪದ್ಭಾಂಧವ ಸೂರಿ ಶೆಟ್ಟಿ ಅವರ ನೇತೃತ್ವದಲ್ಲಿ ಒಟ್ಟುಗೂಡಿಸಿ, ಉಡುಪಿ ಶವಾಗಾರಕ್ಕೆ ಸಾಗಿಸಲಾಗಿತ್ತು.
ಇದನ್ನೂ ಓದಿ:ರಸ್ತೆ ಒತ್ತುವರಿ ತೆರವಿಗೆ ಒತ್ತಾಯಿಸಿ ಮನವಿ ಸಲ್ಲಿಕೆ
ಮೃತ ವ್ಯಕ್ತಿ ವಿವಾಹಿತರಾಗಿದ್ದು ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ. ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.