Udupi; 252ನೇ ಪರ್ಯಾಯೋತ್ಸವಕ್ಕೆ ಶ್ರೀಕೃಷ್ಣ ಮಠ ಸಜ್ಜು


Team Udayavani, Jan 14, 2024, 7:00 AM IST

Udupi; 252ನೇ ಪರ್ಯಾಯೋತ್ಸವಕ್ಕೆ ಶ್ರೀಕೃಷ್ಣ ಮಠ ಸಜ್ಜು

ಉಡುಪಿ: ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಪೂಜಾ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಆರಂಭವಾಗುತ್ತಿದೆ. ನಿಜಾರ್ಥದಲ್ಲಿ ಜಾಗತಿಕ ಪರ್ಯಟನೆ ಮಾಡಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು 4ನೇ ಬಾರಿಯ ಪರ್ಯಾಯ ಪೂಜೆಗೆ ಅಣಿಯಾಗಿದ್ದಾರೆ. 252ನೇ ಪರ್ಯಾಯೋತ್ಸವ ಇದಾಗಿದೆ. 503ನೇ ವರ್ಷಕ್ಕೆ ಈ ಪದ್ಧತಿ ಕಾಲಿಡುತ್ತಿದೆ.

ಶ್ರೀ ಮಧ್ವಾಚಾರ್ಯರು (1238- 1317)
ಶ್ರೀಕೃಷ್ಣನ ಮೂರ್ತಿಯನ್ನು ಪ್ರತಿ ಷ್ಠಾಪಿಸಿ ಎರಡೆರಡು ತಿಂಗಳ ಅವಧಿ ಸರತಿ ಪೂಜೆಯ ವ್ಯವಸ್ಥೆ ಕಲ್ಪಿಸಿದ್ದು ಇದು 1522ರ ವರೆಗೆ ನಡೆಯಿತು. ಬಳಿಕ ಇದನ್ನು ದ್ವೈವಾರ್ಷಿಕವಾಗಿ ವಿಸ್ತರಿಸಲಾಯಿತು. ತೀರ್ಥ ಯಾತ್ರೆ, ತಣ್ತೀಪ್ರಸಾರ, ಆಡಳಿತಾತ್ಮಕ ದೃಷ್ಟಿಯಿಂದ ಶ್ರೀವಾದಿರಾಜರು ಈ ನಿರ್ಧಾರವನ್ನು ತೆಗೆದುಕೊಂಡರು. ಇದು ಪಲಿಮಾರು ಮಠದಿಂದ ಆರಂಭಗೊಂಡು ಅದಮಾರು, ಕೃಷ್ಣಾಪುರ, ಪುತ್ತಿಗೆ, ಶೀರೂರು, ಸೋದೆ, ಕಾಣಿಯೂರು ಅನಂತರ ಪೇಜಾವರ ಮಠದಲ್ಲಿ ಕೊನೆಗೊಳ್ಳುತ್ತದೆ.

1522ರಿಂದ 2024ರ ವರೆಗೆ
1522ರಲ್ಲಿ ಆರಂಭಗೊಂಡ ಈ ದ್ವೈವಾರ್ಷಿಕ ಪೂಜಾ ವ್ಯವಸ್ಥೆ ಪ್ರತೀ 16 ವರ್ಷಕ್ಕೊಮ್ಮೆ ಒಂದೊಂದೇ ಚಕ್ರವನ್ನು ಹಾದು 32ನೇ ಚಕ್ರದಲ್ಲಿದೆ. 32ನೇ ಚಕ್ರದಲ್ಲಿ ಮೂರನೆಯದಾದ 251ನೇ ಪರ್ಯಾಯ ಮುಗಿದು 252ನೇ ಪರ್ಯಾಯ ಆರಂಭಗೊಳ್ಳುತ್ತಿದೆ. ಈಗ ಜ. 18ರಂದು ಪರ್ಯಾಯ ವ್ಯವಸ್ಥೆ 503ನೇ ವರ್ಷಕ್ಕೆ ಪದಾರ್ಪಣೆಯಾಗುತ್ತಿದೆ.

ಆಗಮನ-ನಿರ್ಗಮನ ಪೀಠಾಧೀಶರು
ಕೃಷ್ಣಾಪುರ ಮಠದ 34ನೇ ಯತಿ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನಿರ್ಗಮನ ಪೀಠಾಧೀಶರಾದರೆ, ಪುತ್ತಿಗೆ ಮಠದ 30ನೇ ಯತಿ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಆಗಮನ ಪೀಠಾಧೀಶರು. ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಪುತ್ತಿಗೆ ಮಠದ 31ನೇ ಯತಿಗಳು, ಕಿರಿಯ ಶ್ರೀಪಾದರು.

ಜಾಗತಿಕ ಮೆರುಗು
ಶ್ರೀ ಸುಗುಣೇಂದ್ರತೀರ್ಥರು ಜಾಗತಿಕವಾಗಿ ಸಂಚಾರ ಮಾಡಿದ ಪರಿಣಾಮ ಈ ಪರ್ಯಾಯಕ್ಕೆ ವಿಶೇಷ ಮೆರುಗು ಬಂದಿದೆ. ಇದಕ್ಕೆ ಬೇಕಾದ ಸಕಲ ವ್ಯವಸ್ಥೆಗಳೂ ರೂಪುಗೊಳ್ಳುತ್ತಿದೆ. ಈಗಾಗಲೇ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠದ ವಾರ್ಷಿಕ ಸಪ್ತೋತ್ಸವ ಆರಂಭಗೊಂಡಿದ್ದು ಜ. 14ರಂದು ಮಕರಸಂಕ್ರಾಂತಿ ಉತ್ಸವ ಸಂಪನ್ನಗೊಳ್ಳುತ್ತಿದೆ. ಮಕರಸಂಕ್ರಾಂತಿ ಉತ್ಸವಕ್ಕೆ ಹಿಂದಿನಿಂದಲೂ ಪ್ರಾಶಸ್ತ್ಯವಿದ್ದು ಜನಜಂಗುಳಿ ಕಂಡುಬರುತ್ತದೆ. ಈಗಾಗಲೇ ಭಕ್ತರ ಆಗಮನ ಆರಂಭಗೊಂಡಿದ್ದು, ಪರ್ಯಾಯಕ್ಕೆ ವಿದೇಶಗಳ ಗಣ್ಯರೂ ಆಗಮಿಸುತ್ತಿದ್ದಾರೆ. ಜ. 17ರ ರಾತ್ರಿಯೂ ಊಟದ ವ್ಯವಸ್ಥೆ ಇದ್ದು ಜ. 18ರ ಮಧ್ಯಾಹ್ನ 1 ಲಕ್ಷ ಭಕ್ತರಿಗೆ ಭೋಜನಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ಕಾಪು ದಂಡತೀರ್ಥದಲ್ಲಿ ಜ. 17ರ ಮಧ್ಯರಾತ್ರಿ ಬಳಿಕ ಭಾವೀ ಪರ್ಯಾಯ ಪೀಠಾಧೀಶರು ಸ್ನಾನ ಮಾಡಿ ಉಡುಪಿಗೆ ಸರ್ವಜ್ಞ ಪೀಠಾರೋಹಣ ಮಾಡಲು ಆಗಮಿಸಲಿದ್ದು ಕಾಪುವಿನಿಂದ ಉಡುಪಿಯವರೆಗೆ ವಿದ್ಯುದ್ದೀಪಾಲಂಕಾರ ಮಾಡ ಲಾಗಿದೆ. ಪರ್ಯಾಯ ಮೆರವಣಿಗೆ ಆರಂಭವಾಗುವ ಉಡುಪಿಯ ಜೋಡುಕಟ್ಟೆ ಬಳಿಯಿಂದ ರಥಬೀದಿ ವರೆಗೆ ಮಠದ ಹಿಂದಿನ ಸ್ವಾಮೀಜಿಯವರ ಹೆಸರಿನ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿದೆ. ಜ. 18ರ ಪ್ರಾತಃ ಕಾಲ 2.15ಕ್ಕೆ ಮೆರವಣಿಗೆ ಆರಂಭವಾಗಿ 5.50ಕ್ಕೆ ಸರ್ವಜ್ಞಪೀಠಾರೋಹಣ, 6.30ಕ್ಕೆ ಪರ್ಯಾಯ ದರ್ಬಾರ್‌ ಸಭೆ ಸಂಪನ್ನಗೊಳ್ಳಲಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.