![CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ](https://www.udayavani.com/wp-content/uploads/2024/06/dk-cm-415x277.jpg)
Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು
Team Udayavani, Jun 27, 2024, 12:01 PM IST
![Udupi; ಬಸ್ ಗೆ ಡಿಕ್ಕಿ ಹೊಡೆದ ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು](https://www.udayavani.com/wp-content/uploads/2024/06/forrtu-620x342.jpg)
ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕ ನಿಲ್ಲಿಸಿದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನರ್ ಕಾರು ನಜ್ಜುಗುಜ್ಜಾಗಿದೆ. ಕಾರನ್ನು ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂ ಗೆ ಚಾಲಕ ಕೊಂಡೊಯ್ಯುತ್ತಿದ್ದ. ಉಡುಪಿ ಸಮೀಪದ ನಿಟ್ಟೂರು ಬಳಿ ಹೋಗುತ್ತಿದ್ದಂತೆ ಕಾರು ಚಾಲಕನ ನಿರ್ಲಕ್ಷ್ಯದಿಂದ ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಲು ನಿಲ್ಲಿಸಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ.
ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಕಾರು ಶೋರೂಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.
ಸಂಚಾರ ಠಾಣೆಯ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
![CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ](https://www.udayavani.com/wp-content/uploads/2024/06/dk-cm-415x277.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.