Udupi; ಬಾಲ್ಯದಲ್ಲೇ ಮನೆಯಿಂದ ದೂರವಾಗಿದ್ದ ಯುವತಿಗೆ ಜಿಲ್ಲಾಡಳಿತದಿಂದ ವಿವಾಹ ಭಾಗ್ಯ
ಶ್ರಾವಣದ ಶುಭ ಶುಕ್ರವಾರ ಮಹಿಳಾ ನಿಲಯದ ಖುಷ್ಬುಗೆ ತಾಯಿಯ ಸ್ಥಾನದಲ್ಲಿ ನಿಂತು ಧಾರೆ ಎರೆದ ಜಿಲ್ಲಾಧಿಕಾರಿ...
Team Udayavani, Aug 23, 2024, 7:25 PM IST
ಉಡುಪಿ: ಚಿಕ್ಕ ವಯಸ್ಸಿನಲ್ಲಿಯೇ ಮನೆಯವರಿಂದ ದೂರವಾಗಿ ಸರಕಾರದ ಆಶ್ರಯದಲ್ಲಿ ಬೆಳೆದಿದ್ದ ಯುವತಿಗೆ ಜಿಲ್ಲಾಡಳಿತವೇ ಮುಂದೆ ನಿಂತು ಶುಕ್ರವಾರ (ಆ23) ಶುಭ ಮುಹೂರ್ತದಲ್ಲಿ ಮದುವೆ ಕಾರ್ಯ ನೆರವೇರಿಸಿದೆ.
ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆತ್ತವರ ಸ್ಥಾನದಲ್ಲಿ ನಿಲ್ಲುವ ಮೂಲಕ ಯುವತಿಯ ಸಾಂಸಾರಿಕ ಬದುಕಿಗೆ ದಾರಿ ಮಾಡಿಕೊಟ್ಟಿದ್ದಾರೆ. ಮಹಿಳಾ ನಿಲಯದ ಸಭಾಂಗಣದಲ್ಲಿ ಪ್ರಸನ್ನ ಭಟ್ ಮೂಡುಬೆಳ್ಳೆ ಅವರ ಪೌರೋಹಿತ್ಯದಲ್ಲಿ ಶಾಸ್ತ್ರೋಕ್ತವಾಗಿ ವಿವಾಹ ನೆರವೇರಿತು. ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರು ಧಾರೆ ಎರೆಯುವ ಮೂಲಕ ಹೆತ್ತಮ್ಮನ ಸ್ಥಾನ ತುಂಬಿದರು.
ಗುಜರಾತ್ ಮೂಲದ ಆರು ವರ್ಷದ ಬಾಲಕಿಯಿದ್ದಾಗ ಮನೆಯವರಿಂದ ದೂರವಾಗಿದ್ದ ಖುಷ್ಬು ಸುಮೇರ ಅವರು ಮೊದಲಿಗೆ ಕಾರವಾರದಲ್ಲಿದ್ದು, ಅನಂತರ ಉಡುಪಿ ಬಾಲಕಿಯರ ಮಂದಿರದಲ್ಲಿ ಆಶ್ರಯ ಪಡೆದಿದ್ದರು. ಪಿಯುಸಿವರೆಗೆ ಶಿಕ್ಷಣ ಪೂರೈಸಿದ್ದ ಇವರು ನಿಟ್ಟೂರು ಮಹಿಳಾ ನಿಲಯದಲ್ಲಿ ನಿವಾಸಿನಿಯಾಗಿ ಮಕ್ಕಳ ರಕ್ಷಣ ಘಟಕದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತೀರ್ಥಹಳ್ಳಿ ನಿವಾಸಿ ಮಧುರಾಜ್ ಎ. ಡಿ.ಅವರೊಂದಿಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಮಧುರಾಜ್ ಅವರು ತೀರ್ಥಹಳ್ಳಿಯಲ್ಲಿ 4 ಎಕ್ರೆ ಕೃಷಿ ಭೂಮಿ ಮತ್ತು ಸ್ವಂತ ಕ್ಯಾಟರಿಂಗ್ ಉದ್ಯಮವನ್ನು ನಡೆಸುತ್ತಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಗಣ್ಯರು, ಪತ್ರಕರ್ತರು, ವರನ ಕುಟುಂಬಸ್ಥರು ಸಾಕ್ಷಿಯಾಗಿ ಜೋಡಿಗಳಿಗೆ ಶುಭಹಾರೈಸಿದರು. ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ ಅವರ ಉಪಸ್ಥಿತಿಯೊಡನೆ ಉಪ ನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿ ಪ್ರಕ್ರಿಯೆ ನಡೆಯಿತು.
ಶಾಸಕ ಯಶ್ಪಾಲ್ ಸುವರ್ಣ, ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ. ಪುರುಷೊತ್ತಮ್, ಎಎಸ್ಪಿ ಸಿದ್ದಲಿಂಗಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ, ಇಲಾಖೆ ಅಧೀನದಲ್ಲಿ ವಿವಿಧ ಘಟಕದ ಅಧಿಕಾರಿ, ಸಿಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಕೊಡವೂರು ಹಿರಣ್ಯಧಾಮ ಲೇಔಟ್; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ
Udupi: ಜಿಲ್ಲೆಯಲ್ಲಿ ಮಾದಕ ಜಾಲ ವ್ಯಾಪಕ; ವರ್ಷದಲ್ಲಿ 28 ಮಾರಾಟ, 223 ಸೇವನೆ ಪ್ರಕರಣ
Parashurama Statue; ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಸಮಾಜ ಬಹಿಷ್ಕರಿಸಬೇಕು
Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು
Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.