Udupi; ಗ್ಯಾಂಗ್‌ವಾರ್‌ ಬಳಿಕ ಚುರುಕಾದ ಇಲಾಖೆ : ತಡರಾತ್ರಿ ಪೊಲೀಸ್‌ ಕಾರ್ಯಾಚರಣೆ

ನಾಗಾಸಾಧುಗಳ ವೇಷದಲ್ಲಿ ಉಪಟಳ!!

Team Udayavani, May 31, 2024, 6:20 AM IST

police crime

ಮಣಿಪಾಲ: ಉಡುಪಿಯಲ್ಲಿ ನಡೆದ ಗ್ಯಾಂಗ್‌ವಾರ್‌ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ತಡರಾತ್ರಿ ಗಸ್ತು ಚುರುಕುಗೊಳಿಸಿದ್ದು, ಮಣಿಪಾಲ, ಉಡುಪಿ ಸಹಿತ ಗ್ರಾಮಾಂತರ ಭಾಗದಲ್ಲಿಯೂ ಕಾರ್ಯಾಚರಣೆ ಆರಂಭಿಸಿದ್ದಾರೆ.

ತಡರಾತ್ರಿ ವರೆಗೂ ನಿರಂತರ ಗಸ್ತಿನಲ್ಲಿದ್ದ ಪೊಲೀಸರು ಸಮಯ ಮೀರಿ ವಹಿವಾಟು ನಡೆಸುತ್ತಿದ್ದ ಅಂಗಡಿ, ಹೊಟೇಲ್‌, ಬಾರ್‌, ಪಬ್‌ ಮಾಲಕರಿಗೆ ಸರಿಯಾದ ಸಮಯಕ್ಕೆ ಮುಚ್ಚುವಂತೆ ಎಚ್ಚರಿಕೆ ನೀಡಿದ್ದಾರೆ. ಸಣ್ಣಪುಟ್ಟ, ಅಂಗಡಿ ಮಾಲಕರು ಪೊಲೀಸರು ನಮಗೆ ಮಾತ್ರ ಎಚ್ಚರಿಕೆ ನೀಡಿದ್ದಾರೆ. ಸಮಯ ಮೀರಿ ನಡೆಯುತ್ತಿದ್ದ ಹೊಟೇಲ್‌, ಪಬ್‌-ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಸಣ್ಣಪುಟ್ಟ ಹೊಟೇಲ್‌ ಅಂಗಡಿಗಳನ್ನು ಮಾತ್ರ ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲೆಯ ಎಲ್ಲ ಕಡೆಗಳಲ್ಲಿ ಗಸ್ತು ಹೆಚ್ಚಿಸಿದ್ದು, ತಡರಾತ್ರಿ ಸಮಯ ಮೀರಿ ವಹಿವಾಟು ನಡೆಸುವ ಉದ್ಯಮಗಳನ್ನು ಪರಿಶೀಲಿಸಿ ಎಚ್ಚರಿಕೆ ನೀಡಲಾಗಿದೆ. ಸಣ್ಣಪುಟ್ಟ ಅಂಗಡಿಗಳಿಂದ ಪಬ್‌, ಬಾರ್‌ ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಕಾನೂನು ಉಲ್ಲಂ ಸಿದಲ್ಲಿ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ನಾಗಾಸಾಧುಗಳ ವೇಷದಲ್ಲಿ ಉಪಟಳ
ನಗರದಲ್ಲಿ ಇತ್ತೀಚೆಗೆ ನಾಗಸಾಧುಗಳ ವೇಷದಲ್ಲಿರುವರು ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ವಿಚಿತ್ರ ರೀತಿಯಲ್ಲಿ ಉಪಟಳ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ದಢೂತಿ ದೇಹ, ಮುಖಕ್ಕೆ ಬೂದಿ ಮೆತ್ತಿಕೊಂಡು, ವಿಕಾರ ರೀತಿಯಲ್ಲಿ ಜಡೆಯನ್ನು ಬಿಟ್ಟ ನಾಗಾಸಾಧುಗಳಂತೆ ತೋರುವ ವ್ಯಕ್ತಿಗಳು ಕಾರಿನಲ್ಲಿ ಆಗಮಿಸಿ ಅಂಗಡಿ ಎದುರು ನಿಲ್ಲಿಸಿ ಅಂಗಡಿ ಒಳಗೆ ನುಗ್ಗಿ ತಮಗೆ ಅಗತ್ಯ ಇರುವ ಸಾಮಗ್ರಿಗಳನ್ನು ತೆಗೆದುಕೊಂಡು ಹಣವನ್ನು ವಾಪಸು ನೀಡದೆ ಹಿಂದಿರುಗುವ ಘಟನೆ ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಕಿನ್ನಿಮೂಲ್ಕಿಯಲ್ಲಿ ಎಣ್ಣೆ ಮಾರಾಟ ಮಾಡುವ ಅಂಗಡಿಗೆ ನುಗ್ಗಿದ ಇವರು ಒಂದು ಕ್ಯಾನ್‌ ತೆಂಗಿನೆಣ್ಣೆ ತೆಗೆದುಕೊಂಡು ಹೋಗಿದ್ದಾರೆ. ಈ ನಡುವೆ ವ್ಯಾಪಾರಿ ಗಲಿಬಿಲಿಗೊಂಡಿದ್ದಾರೆ. ಸ್ಥಳದಲ್ಲಿಯೇ ಇದ್ದ ಒಬ್ಬರು ಗ್ರಾಹಕರ ಕಿಸೆಗೆ ಕೈಹಾಕಿ ಹಣ ಪಡೆಯಲು ಯತ್ನಿಸಿದ್ದಾರೆ. ವ್ಯಕ್ತಿಯ ವಿನಂತಿಯ ಮೇರೆಗೆ ಬಿಟ್ಟು ಕಾರಿನಲ್ಲಿ ತೆರಳಿದ್ದಾರೆ.

ಉಡುಪಿ, ಮಣಿಪಾಲ ಪರಿಸರದಲ್ಲಿ ಈ ರೀತಿ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಪೊಲೀಸರು ಇಂಥವರ ಬಗ್ಗೆ ನಿಗಾ ವಹಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.