Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

ನಾನು ಯೋಗದ ''ಪರ್ಯಾಯ'' 50 ವರ್ಷಗಳಿಂದ ಮಾಡುತ್ತಿದ್ದೇನೆ...

Team Udayavani, Oct 24, 2024, 9:41 AM IST

1

ಉಡುಪಿ: ಯೋಗ ಎನ್ನುವುದು ಮಾಹಿತಿ ಅಲ್ಲ, ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಕೊಳ್ಳಬೇಕೆಂಬ ಆಕಾಂಕ್ಷೆ ಇದೆ ಎಂದು ಪತಂಜಲಿ ಯೋಗ ಪೀಠ ಹರಿದ್ವಾರದ ಸಂಸ್ಥಾಪಕ ಬಾಬಾ ರಾಮ್‌ದೇವ್‌ ಹೇಳಿದರು.

ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಗುರುವಾರ(ಅ24) ಬೆಳಗ್ಗೆ  51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ನಡೆದ ಪತಂಜಲಿ ಯೋಗ ಶಿಬಿರವನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳೊಂದಿಗೆ ಉದ್ಘಾಟಿಸಿ ರಾಮ್ ದೇವ್ ಅವರು ಯೋಗದ ಮಹತ್ವದ ಕುರಿತು ಅನೇಕ ಮಾಹಿತಿ ನೀಡಿದರು.

”ಸನಾತನ ಧರ್ಮದ ಶಾಶ್ವತ ಸಿದ್ದಾಂತದ ಪ್ರಮುಖ ಭಾಗ ಯೋಗ,ಅದು ನಮ್ಮ ಪೂರ್ವಜರ ವಿರಾಸತ್. ಋಷಿ ಮುನಿಗಳು ನಮಗೆ ನೀಡಿದ ಅಮೂಲ್ಯ ಸಂಪತ್ತು. ಜಗತ್ತಿಗೆ ಯೋಗದ ಮಹತ್ವಿಕೆಯ ಅರಿವಾಗಿದ್ದು, ಕೆಲವೇ ದಿನಗಳಲ್ಲಿ 80% ಜನರು ಯೋಗ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಯೋಗ ಮಾಡದೇ ಹೋದರೆ ಆಗಂತುಕರ ಆಗಮನ ದೇಹದಲ್ಲಿ ಆಗುತ್ತದೆ. ಜೀವನದಲ್ಲಿ ಸಂತುಲನ ಕಾಪಾಡಲು ಯೋಗಾಸನಗಳನ್ನು ಮಾಡುವುದು ಅತೀ ಅಗತ್ಯ. ಇಡೀ ಜಗತ್ತಿನಲ್ಲಿ ಯೋಗ ಪ್ರಸರಣವಾಗಿ ರೋಗ ಮುಕ್ತವಾಗಬೇಕು” ಎಂದರು.

”ಸ್ವಸ್ಥ ಸಮಾಜ ಸಮೃದ್ಧ ಸಮಾಜ ನಿರ್ಮಾಣವಾಗಬೇಕಾದ ಅನಿವಾರ್ಯತೆ ಇದೆ. ಅದಕ್ಕೆ ಯೋಗ ಮತ್ತು ಭಗವದ್ ಗೀತೆಯ ಪ್ರಸರಣವಾಗಬೇಕು. ಬದಲಾವಣೆ ತರಲು ಆ ಮಹತ್ವಿಕೆಗಳ ಅರಿವು ಜಗತ್ತಿಗೆ ಆಗಬೇಕಾಗಿದೆ” ಎಂದರು.

”ಕೋಟಿ ಗೀತಾ ಲೇಖನ ಯಜ್ಞದ ಮೂಲಕ ಪುತ್ತಿಗೆ ಶ್ರೀಗಳು ಜಗತ್ತಿಗೆ ಗೀತೆಯ ಸಾರ ಹೇಳಿಕೊಟ್ಟು ಮಹೋನ್ನತ ಕಾರ್ಯ ಮಾಡುತ್ತಿದ್ದಾರೆ. ವಿಶ್ವಕ್ಕೆ ಆದರ್ಶಪ್ರಾಯವಾದ ಕಾರ್ಯ ಇದು. ಅವರ ಈ ಪರ್ಯಾಯದ ಅವಧಿಯಲ್ಲಿ ಶ್ರೀ ಮಧ್ವಾಚಾರ್ಯರ ಪುಣ್ಯ ಭೂಮಿ ಉಡುಪಿಯಲ್ಲಿ  ಶ್ರೀಕೃಷ್ಣನ ದರ್ಶನ ಪಡೆದು, ಪುತ್ತಿಗೆ ಶ್ರೀಪಾದರ ಆಶೀರ್ವಾದ ಪಡೆದು ಯೋಗ ತರಬೇತಿ ನೀಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ” ಎಂದು ಬಾಬಾ ರಾಮ್ ದೇವ್ ಹೇಳಿದರು.

”ನನಗೆ ಉಡುಪಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದು ಹೊಸ ರೀತಿಯ ಅನುಭೂತಿಯಾಯಿತು, ಪತಂಜಲಿ ಯೋಗಪೀಠದ ವತಿಯಿಂದ ಶ್ರೀಪಾದರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನಾನು 50 ವರ್ಷಗಳಿಂದ ಯೋಗದ ‘ಪರ್ಯಾಯ ಮಾಡುತ್ತಿದ್ದೇನೆ” ಎಂದು ಬಾಬಾ ರಾಮ್ ದೇವ್ ಹೇಳಿದರು.

‘ವಿಶ್ವದ ಎಲ್ಲ ಜನರ ಆಚರಣೆಗಳನ್ನು ನಾವು ಗೌರವಿಸುತ್ತೇವೆ, ರಷ್ಯಾ, ಚೀನಾ ಮಾತ್ರವಲ್ಲದೆ ಕಿಮ್ ಜಾಂಗ್ ಅವರ ಉತ್ತರಕೊರಿಯಾವೂ ಯೋಗಕ್ಕೆ ತಲೆಬಾಗಲಿದೆ’ ಎಂದು ರಾಮ್ ದೇವ್ ಹೇಳಿದರು.

ಯೋಗ ಸಮರ್ಪಣೆ
ಪರ್ಯಾಯ ಪುತ್ತಿಗೆ ಶ್ರೀಗಳು ಸಂಸ್ಕೃತದಲ್ಲೇ ಮಾತನಾಡಿ ” ಯೋಗೀಶ್ವರನಾದ ಕೃಷ್ಣನ ಸನ್ನಿಧಿಯಲ್ಲಿ ಯೋಗ ಸಮರ್ಪಣೆ ಮಾಡಲು ಬಾಬಾ ರಾಮ್ ದೇವ್ ಅವರು ಆಗಮಿಸಿದ್ದಾರೆ. ಸಮಸ್ತ ಲೋಕಕ್ಕೆ ತ್ರಿಲೋಕ ವಿಜಯಿಯಾದ ಅರ್ಜುನನಂತೆ ಯೋಗ ಪ್ರಚಾರ ಮಾಡುವ ಕಾರ್ಯ ಮಾಡುತ್ತಿದ್ದಾರೆ. ಸಮಗ್ರ ಜಗತ್ತಿಗೆ ಶಾಶ್ವತವಾದ ಯೋಗ ಸಂಪತ್ತು ಹಂಚುತ್ತಿದ್ದಾರೆ. ಯೋಗ ಮತ್ತು ಗೀತೆಯ ಸಾರ ಜಗತ್ತಿಗೆ ತಿಳಿಸಬೇಕು” ಎಂದರು.

ಪತಂಜಲಿ ಯೋಗ ಪೀಠದ ಅನೇಕ ಯೋಗ ಪಟುಗಳು ಕಠಿನ ಯೋಗಾಸನಗಳನ್ನು ಪ್ರದರ್ಶಿಸಿದರು.

ನಿತ್ಯ ಬೆಳಗ್ಗೆ ಪತಂಜಲಿ ಯೋಗ

ಅ.24ರಿಂದ 26ರವರೆಗೆ ಪ್ರತಿದಿನ ಬೆಳಗ್ಗೆ 5.30ರಿಂದ 7.30ರವರೆಗೆ ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್‌ ಪರಿಷತ್‌ ಆಶ್ರಯದಲ್ಲಿ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ನಿತ್ಯ ಬೆಳಗ್ಗೆ ಪತಂಜಲಿ ಯೋಗ ಇರಲಿದೆ.

ಈ ಶಿಬಿರದಲ್ಲಿ ಬಾಬಾ ರಾಮ್‌ದೇವ್‌ ಅವರು ಯೋಗ, ಆಸನ, ಪ್ರಾಣಾಯಾಮ ಸಹಿತ ಸುದೃಢ ಆರೋಗ್ಯಕ್ಕೆ ಪೂರಕವಾದ ಹಲವು ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ.

ಉಚಿತ ಪ್ರವೇಶ
ಯೋಗಕ್ಕೆ ಬರುವವರು ಯೋಗ ಮಾಡಲು ಪೂರಕವಾದ ಮ್ಯಾಟ್ರಸ್‌(ಹಾಸಿಗೆ) ತರಬೇಕು. ಯೋಗ ಶಿಬಿರವನ್ನು ಬಾಬಾ ರಾಮ್‌ದೇವ್‌ ನಡೆಸಿಕೊಡಲಿದ್ದಾರೆ. ಹೀಗಾಗಿ ಸರಿಯಾಗಿ ಬೆಳಗ್ಗೆ 5.30ರಿಂದ ಬೆಳಗ್ಗೆ 7.30ರವರೆಗೆ 2 ಗಂಟೆಗಳ ಕಾಲ ನಡೆಯಲಿದೆ. ಯಾರು ಬೇಕಾದರೂ ಪಾಲ್ಗೊಳ್ಳಬಹುದು ಮತ್ತು ಯಾವುದೇ ಶುಲ್ಕ ಇರುವುದಿಲ್ಲ.

ವರದಿ ಮತ್ತು ಚಿತ್ರಗಳು: ವಿಷ್ಣುದಾಸ್ ಪಾಟೀಲ್

ಟಾಪ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

kalla

Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು

manipal-marathon

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.