Udupi; ರಾಮಮಂದಿರಕ್ಕೆ ಕಾಂಗ್ರೆಸ್ ವಿರೋಧ: ಶೋಭಾ ಕರಂದ್ಲಾಜೆ
Team Udayavani, Dec 31, 2023, 10:51 PM IST
ಉಡುಪಿ: ಕಾಂಗ್ರೆಸ್ ಕಳೆದ 70 ವರ್ಷಗಳಿಂದ ಅಯೋಧ್ಯೆಯ ವಿರುದ್ಧ ಹೋರಾಟ ಮಾಡಿತ್ತು. ಕಾಂಗ್ರೆಸ್ನ ಕಪಿಲ್ ಸಿಬಲ್ ಅಯೋಧ್ಯೆಯ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ಆಗಬಾರದು ಎಂದು ಕಾಂಗ್ರೆಸ್ ಉದ್ದೇಶವಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಇಂದ್ರಾಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಅಲ್ಪಸಂಖ್ಯಾಕರಿಗೆ ನೋವಾಗಬಾರ ದೆಂದು ಕಾಂಗ್ರೆಸ್ ರಾಮ ಮಂದಿರದ ವಿರುದ್ಧ ನಿಲುವು ಹೊಂದಿತ್ತು. ಆದರೆ 2014ರ ಅನಂತರ ನ್ಯಾಯಾಲಯಕ್ಕೆ ರಾಮ ಮಂದಿರದ ಕುರಿತಾದ ಎಲ್ಲ ಮಾಹಿತಿಯನ್ನು ಒದಗಿಸಲಾಯಿತು. ನ್ಯಾಯಾಲಯದಲ್ಲಿ ಜಯ ಆಗಿದೆ. ಈಗ ಭವ್ಯವಾದ ಮಂದಿರ ನಿರ್ಮಾಣವಾಗುತ್ತಿದೆ ಎಂದರು.
ಬಿಜೆಪಿ, ವಿಶ್ವಹಿಂದೂ ಪರಿಷತ್ ಯಾವುದೇ ರಾಜಕೀಯವನ್ನು ಮನಸ್ಸಿನಲ್ಲಿಟ್ಟುಕೊಂಡಿಲ್ಲ. ರಾಮಮಂದಿರದ ಪ್ರತಿಷ್ಠಾಪನೆಯಲ್ಲಿ ಎಲ್ಲರೂ ಭಾಗವಹಿಸಬೇಕು, ಎಲ್ಲರೂ ರಾಮನ ದರ್ಶನ ಮಾಡಬೇಕು. ಇದು ನಮ್ಮ ಅಸ್ಮಿತೆಯ ಪ್ರಶ್ನೆ. ಕಾಂಗ್ರೆಸ್ನವರು ಗೈರಾದರೆ ದೇಶಕ್ಕೆ ಮತ್ತು ನಮ್ಮ ಶ್ರದ್ಧೆಗೆ ಮಾಡಿದ ಅವಮಾನವಾಗಲಿದೆ. ಕಾಂಗ್ರೆಸ್ ನಾಯಕರು ಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯ ಸರಕಾರದ ವಿರುದ್ಧ ಹಲವಾರು ಮಂದಿ ಹೋರಾಟದ ಮೂಡ್ನಲ್ಲಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ದಮನ ನೀತಿಯ ಮೂಲಕ ಅವರ ಬಾಯಿ ಮುಚ್ಚಿಸುತ್ತಿದೆ ಎಂದು ಆರೋಪಿಸಿದರು.
ಹೋರಾಟಗಾರರ ಮಾತುಗಳನ್ನು ನಿಲ್ಲಿಸುವ ಕೆಲಸಕ್ಕೆ ಕೈ ಹಾಕಿದೆ. ಕನ್ನಡದ ಹೋರಾಟಗಾರರು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ತಪ್ಪು, ಸರಿಗಳು ಎಲ್ಲ ಸಂದರ್ಭಗಳಲ್ಲೂ ನಡೆಯುತ್ತವೆ. ಹೋರಾಟಗಾರರನ್ನು 15 ದಿನ ಬಂಧಿಸಿ ಜೈಲಿನಲ್ಲಿ ಇಡುವುದು ಖಂಡಿತವಾಗಿಯೂ ಸರಿಯಲ್ಲ, ಸರಕಾರ ಹೋರಾಟಗಾರಿಗೆ ಯಾಕೆ ಹೆದರುತ್ತಿದೆ? ರಾಜ್ಯ ಸರಕಾರ ಕನ್ನಡ ಹೋರಾಟಗಾರರ ನೆರವಿಗೆ ಧಾವಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.