ಗ್ರಾಮೀಣ ಸಮಸ್ಯೆ ತಿಳಿಯಲು ಅವಕಾಶ: ಡಿಸಿ ಕೂರ್ಮಾರಾವ್‌

ಹಾರ್ದಳ್ಳಿ - ಮಂಡಳ್ಳಿ: ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ

Team Udayavani, Dec 17, 2022, 10:24 PM IST

ಗ್ರಾಮೀಣ ಸಮಸ್ಯೆ ತಿಳಿಯಲು ಅವಕಾಶ: ಡಿಸಿ ಕೂರ್ಮಾರಾವ್‌

ಕುಂದಾಪುರ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿದೆ. ಗ್ರಾಮಸ್ಥರ ಅಹವಾಲುಗಳನ್ನು ಪಡೆದು, ಬಗೆಹರಿಸುವ ಜತೆಗೆ ಗ್ರಾಮೀಣ ಭಾಗದ ಹತ್ತಾರು ಸಮಸ್ಯೆಗಳು, ಅಲ್ಲಿನ ವಿಶೇಷತೆಗಳು, ಕೃಷಿ ಬೆಳೆಗಳ ಪ್ರಯೋಗಗಳನ್ನು ಅರಿತುಕೊಳ್ಳಲು ಅವಕಾಶವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು.

ಅವರು ಶನಿವಾರ ಹಾರ್ದಳ್ಳಿ – ಮಂಡಳ್ಳಿ ಗ್ರಾಮದ ಬಿದ್ಕಲ್‌ಕಟ್ಟೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಹಾಲಾಡಿಯ ಅನಂತರ ಕುಂದಾಪುರ ತಾ|ನಲ್ಲಿ ಇದು ನನ್ನ ಎರಡನೇ ಗ್ರಾಮವಾಸ್ತವ್ಯವಾಗಿದ್ದು, ಈ ಕಾರ್ಯಕ್ರಮದಿಂದ ಡಿಸಿ, ಎಸಿ ಸಹಿತ ಎಲ್ಲ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಸ್ಥರ ಬಳಿಗೆ ಬರುವುದರಿಂದ ಅನೇಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಆಯುಷ್ಮಾನ್‌ ಭಾರತ್‌ ಕಾರ್ಡ್‌, ನರೇಗಾದಂತಹ ವಿವಿಧ ಇಲಾಖೆಗಳಿಂದ ಸಿಗುವಂತಹ ಸೌಲಭ್ಯ, ಮಾಹಿತಿಗಳನ್ನು ಸಹ ಪಡೆದುಕೊಳ್ಳಬಹುದು ಎಂದವರು ಹೇಳಿದರು.

18 ಮಂದಿಗೆ ಹಕ್ಕುಪತ್ರ ವಿತರಣೆ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು 18 ಮಂದಿ 94 ಸಿಯಡಿ ಹಕ್ಕುಪತ್ರಗಳನ್ನು ವಿತರಿಸಿದರು. ಇದೇ ವೇಳೆ 26 ಮಂದಿ ಫಲಾನುಭವಿಗಳಿಗೆ ವಿವಿಧ ಪಿಂಚಣಿ ಸವಲತ್ತುಗಳನ್ನು ಹಸ್ತಾಂತರಿಸಲಾಯಿತು.

ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಮಾತನಾಡಿ, ತೆಂಗು, ಅಡಿಕೆ ಗಿಡ ನೆಡಲು, ಗುಂಡಿ ತೆಗೆಯಲು ನರೇಗಾದಡಿ ಅವಕಾಶವಿದೆ. ಇದೆಲ್ಲದಕ್ಕೂ ಉದ್ಯೋಗ ಚೀಟಿ ಆವಶ್ಯಕವಾಗಿದೆ. ಜಿಲ್ಲೆಯಲ್ಲಿ 70 ತೆಂಗು ಬೆಳೆಗಾರರ ಸಮಿತಿಯಿದ್ದು, ಅದರಲ್ಲಿ ಗರಿಷ್ಠ 34 ಕುಂದಾಪುರದಲ್ಲಿದೆ. ತೆಂಗು ಕೃಷಿ ಕಾರ್ಮಿಕರಿಗೂ ವಿಮಾ ಸೌಲಭ್ಯವಿದ್ದು, ಬಿದ್ದು ಗಾಯಗೊಂಡರೆ, ಸಾವು-ನೋವು ಸಂಭವಿಸಿದರೆ ಪರಿಹಾರ ಸಿಗಲಿದೆ. ಈ ವಿಮೆಯನ್ನು ನೋಂದಾಯಿಸಿಕೊಳ್ಳಬಹುದು, ಹನಿ ನೀರಾವರಿ, ತೆಂಗು ಪುನಶ್ಚೇತನಕ್ಕೂ ಸಹಾಯಧನವನ್ನು ರೈತರು ಪಡೆದುಕೊಳ್ಳಬಹುದು ಎಂದವರು ಮಾಹಿತಿ ನೀಡಿದರು.

ಜೆಇ ಲಸಿಕೆ : ಶೇ.80 ಪೂರ್ಣ
ಮೆದುಳು ಜ್ವರ ವೈರಸ್‌ನಿಂದ ಹರಡುವ ಕಾಯಿಲೆಯಾಗಿದ್ದು, ಈ ನಿಟ್ಟಿನಲ್ಲಿ 1ರಿಂದ 15 ವರ್ಷದೊಳಗಿನ ಎಲ್ಲ ಮಕ್ಕಳೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಶಾಲೆ, ಅಂಗನವಾಡಿ ಹಾಗೂ ಹೊರಗುಳಿದ ಹೀಗೆ 3 ಹಂತಗಳಲ್ಲಿ ಲಸಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಶೇ. 80 ರಷ್ಟು ಪೂರ್ಣಗೊಂಡಿದೆ. ಯಾರೆಲ್ಲ ಲಸಿಕೆ ಪಡೆದಿಲ್ಲವೋ ಆದಷ್ಟು ಬೇಗ ಲಸಿಕೆ ಪಡೆಯಿರಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಮನವಿ ಮಾಡಿಕೊಂಡರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ್‌ ಇಸಾಕ್‌, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ| ಶಂಕರ್‌ ಶೆಟ್ಟಿ ತಮ್ಮ ಇಲಾಖೆಯ ಕುರಿತಂತೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಾರ್ದಳ್ಳಿ – ಮಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು, ಉಪಾಧ್ಯಕ್ಷೆ ರೇಖಾ ಮೊಗವೀರ, ಭೂ ದಾಖಲೆಗಳ ಇಲಾಖಾ ಉಪನಿರ್ದೇಶಕ ರವೀಂದ್ರ, ಕುಂದಾಪುರ ತಾ.ಪಂ. ಇಒ ಮಹೇಶ ಹೊಳ್ಳ, ಪ್ರಾಂಶುಪಾಲ ವಿಘ್ನೇಶ್ವರ ಭಟ್‌, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಪ್ರಸ್ತಾವಿಸಿ, ತಹಶೀಲ್ದಾರ್‌ ಕಿರಣ್‌ ಜಿ. ಗೌರಯ್ಯ ಸ್ವಾಗತಿಸಿದರು. ಶಿಕ್ಷಕ ಪ್ರಕಾಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ವಂದಿಸಿದರು.

ಹತ್ತಾರು ಸಮಸ್ಯೆ ಪ್ರಸ್ತಾವ
ವಾರಾಹಿ ಕಾಮಗಾರಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸಿವೆ, ಜನ್ನಾಡಿ ಸಂಪರ್ಕ ರಸ್ತೆ, ಬೀದಿ ದೀಪ ಇಲ್ಲದಿರುವ, ಮನೆ ಮೇಲೆ ವಿದ್ಯುತ್‌ ತಂತಿ ಹಾದು ಹೋಗುತ್ತಿರುವ, ಮಣ್ಣಿನ ರಸ್ತೆ ಅಭಿವೃದ್ಧಿ, ಅರ್ಜಿ ಸಲ್ಲಿಸಿದರೂ ಹಕ್ಕುಪತ್ರ ಸಿಗದಿರುವ ಬಗ್ಗೆ, ತೆರಿಗೆ ಪಾವತಿ ಗೊಂದಲ ಸೇರಿದಂತೆ ವಿವಿಧ ಅಹವಾಲುಗಳನ್ನು ಡಿಸಿಯವರಿಗೆ ಸಲ್ಲಿಸಿ, ಕೆಲವೊಂದಕ್ಕೆ ಅಲ್ಲಿಯೇ ಪರಿಹಾರ ಕಂಡು ಕೊಂಡರೆ, ಮತ್ತೆ ಕೆಲವು ಸಮಸ್ಯೆಗಳಿಗೆ ಆದ್ಯತೆ ನೆಲೆಯಲ್ಲಿ ಬಗೆಹರಿಸುವಂತೆ ಸೂಚಿಸಿದರು.

ಆರೋಗ್ಯ ಶಿಬಿರ
ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಬಿದ್ಕಲ್‌ಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿದ್ದು, ಗ್ರಾಮಸ್ಥರ ಆರೋಗ್ಯವನ್ನು ತಪಾಸಣೆ ನಡೆಸಲಾಯಿತು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.