ಉಡುಪಿ: ದ್ವೀಪ ಯಾನಕ್ಕೆ ಶೀಘ್ರ ಅನುಮತಿ: ಉಡುಪಿ ಡಿಸಿ ಕೂರ್ಮಾರಾವ್‌


Team Udayavani, Sep 30, 2022, 8:30 AM IST

ಉಡುಪಿ: ದ್ವೀಪ ಯಾನಕ್ಕೆ ಶೀಘ್ರ ಅನುಮತಿ: ಉಡುಪಿ ಡಿಸಿ ಕೂರ್ಮಾರಾವ್‌

ಉಡುಪಿ: ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲಿ ಹಲವು ಸುರಕ್ಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೂರಕ ಕೆಲಸಗಳು ನಡೆಯುತ್ತಿದ್ದು, ಶೀಘ್ರ ಪ್ರವಾಸಿಗರಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದರು.

ಗುರುವಾರ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಸಂವಾದದಲ್ಲಿ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಸೆಲ್ಫಿ ಪಾಯಿಂಟ್‌, ತಡೆಬೇಲಿ, ಸ್ವತ್ಛತೆ ಮೊದಲಾದ ಕೆಲಸಗಳು ನಡೆಯುತ್ತಿವೆ. ಪ್ರಸ್ತುತ ಸಮುದ್ರ ಪ್ರಕ್ಷುಬ್ಧವಾಗಿದ್ದು, ವಾತಾವರಣವನ್ನು ಗಮನಿಸಿಕೊಂಡು ಅನುಮತಿ ನೀಡಬೇಕಿದೆ ಎಂದರು.

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಮಾತನಾಡಿ, ಈ ಹಿಂದಿನ ಜಿಲ್ಲಾಧಿಕಾರಿಗಳು ಯೋಜಿಸಿ ಅರ್ಧಕ್ಕೆ ನಿಂತ ಯೋಜನೆಗಳ ಬಗ್ಗೆ ವಿಮರ್ಶಿಸಲಾಗುವುದು. ಪ್ರವಾಸಿ ತಾಣಗಳನ್ನು ಹೆಚ್ಚು ಪ್ರವರ್ಧಮಾನಕ್ಕೆ ತರುವ ಬಗ್ಗೆ ಬ್ಲಾಗರ್ಸ್‌ ಗಳಿಂದ ಸಲಹೆ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಇನ್‌ಸ್ಟಾಗ್ರಾಂನಲ್ಲಿಯೂ ಖಾತೆ ತೆರೆಯಲಾಗಿದೆ ಎಂದರು.

ಅಕ್ಟೋಬರ್‌ ಅಂತ್ಯಕ್ಕೆ ಮರಳು ಲಭ್ಯ

ಜಿಲ್ಲೆಯಲ್ಲಿ ಕಲ್ಲು, ಮರಳು ಸಹಿತ ಇತರ ಯಾವುದೇ ಖನಿಜಗಳ ಅಕ್ರಮ ವ್ಯವಹಾರ ನಡೆಯದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಿರಂತರ ಕಾರ್ಯಾಚರಣೆ, ದಾಳಿ ನಡೆಸುತ್ತಿದ್ದಾರೆ. ದಂಡ ಸಂಗ್ರಹದಲ್ಲಿ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಕಂದಾಯ, ಪೊಲೀಸ್‌ ಇಲಾಖೆ ಮತ್ತು ಆರ್‌ಟಿಒ ಸಮನ್ವಯ ಸಾಧಿಸಿ ಕಾರ್ಯಾಚರಣೆ ನಡೆಸುವಂತೆ ಆನ್‌ಲೈನ್‌ ಎಂಟ್ರಿ ಪೋರ್ಟಲ್‌ ಜಾರಿಗೆ ತರಲಾಗುವುದು. ಈ ವರ್ಷ ಗ್ರಾ.ಪಂ. ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಸಾಂಪ್ರದಾಯಿಕವಾಗಿ ಮರಳು ತೆಗೆಯಬಹುದಾದ ದಿಬ್ಬಗಳನ್ನೂ ಗುರುತಿಸಿದ್ದೇವೆ. ಅಕ್ಟೋಬರ್‌ ಅಂತ್ಯಕ್ಕೆ ಜನರಿಗೆ ಮರಳು ಲಭ್ಯವಾಗಲಿದೆ ಎಂದು ಡಿಸಿ ತಿಳಿಸಿದರು.

ವಾರ್ತಾಧಿಕಾರಿ ಮಂಜುನಾಥ್‌, ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್‌ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್‌ ಪೊಲ್ಯ, ಕೋಶಾಧಿಕಾರಿ ಉಮೇಶ್‌ ಮಾರ್ಪಳ್ಳಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕಿರಣ್‌ ಮಂಜನಬೈಲು ಉಪಸ್ಥಿತರಿದ್ದರು. ಚೇತನ್‌ ಮಟಪಾಡಿ ನಿರೂಪಿಸಿ, ವಂದಿಸಿದರು.

ಪ್ರಮುಖ ಅಂಶಗಳು :

  • ಹಿಂದಿನ ವರ್ಷಗಳಲ್ಲಿ ರಸ್ತೆ ವಿಸ್ತರಣೆಗಾಗಿ ಕಡಿದಿರುವ ಮರಗಳ ಸಂಖ್ಯೆ ಮತ್ತು ಎಷ್ಟು ಪ್ರಮಾಣದಲ್ಲಿ ಅರಣ್ಯವ್ನು ಬೆಳೆಸಲಾಗಿದೆ ಎಂಬ ವಾಸ್ತವ ಚಿತ್ರಣವನ್ನು ತಿಳಿಸಲಾಗುವುದು.
  • ಹೆದ್ದಾರಿಗಳಲ್ಲಿ ಮೀನಿನ ನೀರು ಚೆಲ್ಲಿಕೊಂಡು ಸಾಗುವ ಲಾರಿಗಳ ವಿರುದ್ಧ ಕಠಿನ ಕ್ರಮಕ್ಕೆ ಪೊಲೀಸ್‌, ಆರ್‌ಟಿಒಗೆ ಸೂಚನೆ.
  • ಹದಗೆಟ್ಟಿರುವ ಇಂದ್ರಾಳಿ ಸೇತುವೆ ಕಾಮಗಾರಿ ಅ. 1ರಿಂದ ನಡೆಯಲಿದೆ.
  • ಇಂದ್ರಾಳಿ ರೈಲ್ವೇ ಸೇತುವೆ ಯೋಜನೆಯ ವಿನ್ಯಾಸ ಬದಲಾವಣೆಗೆ ಸಂಬಂಧಿಸಿ ತಾಂತ್ರಿಕ ಸಮಸ್ಯೆ ಅನುಮೋದನೆಗೆ ಬಾಕಿ ಇದೆ. ನಮ್ಮ ಎಂಜಿನಿಯರ್‌ಗಳು ದಿಲ್ಲಿಯಲ್ಲಿದ್ದು, ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತಿದ್ದಾರೆ.
  • ಉಡುಪಿ ನಗರದ ಒಳಚರಂಡಿ ವ್ಯವಸ್ಥೆ ಹಂತಹಂತವಾಗಿ ಸುಧಾರಣೆಯತ್ತ ಸಾಗುತ್ತಿದೆ. ಮಳೆ ನೀರು ಹರಿಯುವ ನದಿ, ಕಾಲುವೆಗಳನ್ನು ಒತ್ತುವರಿ ಮಾಡಿದ್ದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.