Udupi; ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ


Team Udayavani, Aug 1, 2024, 4:36 PM IST

Udupi; ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಶ್ರೀಕೃಷ್ಣಮಾಸೋತ್ಸವ ಪ್ರಯುಕ್ತ ರಾಜಾಂಗಣದಲ್ಲಿ ಅ. 11ರ ವರೆಗೆ ಹಮ್ಮಿಕೊಂಡಿರುವ ಕೈಮಗ್ಗ ಸೀರೆಗಳ ಉತ್ಸವ – 2024ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚಾಲನೆ ನೀಡಿ ಅನುಗ್ರಹಿಸಿದರು.

ಆಧುನಿಕ ಸೀರೆಗಳು ನೋಡಲು ಚಂದ ಇರಬಹುದು ಆದರೆ ಅಲ್ಪಕಾಲ ಮಾತ್ರ ಬಾಳಿಕೆ ಬರುವಂತದ್ದು, ಕೈಮಗ್ಗದ ಸೀರೆಗಳು ಸಾಂಪ್ರದಾಯಿಕವಾಗಿಯೂ ದೀರ್ಘ‌ಕಾಲ ಬಾಳಿಕೆಗೆ ಬರುವಂತದ್ದಾಗಿದೆ. ಸೀರೆಯುವ ಭಾರತೀಯ ಸಾಂಸ್ಕೃತಿ ಮೌಲ್ಯದ ರಕ್ಷಕವಾಗಿದೆ. ದೇವತೆಗಳು ಸೀರೆಯಲ್ಲೇ ಕಾಣಿಸಿಕೊಂಡಿದ್ದಾರೆ. 16,108 ಸಾವಿರ ಸೀರೆ ಮಾರಾಟ ಆಗುವಂತಾಗಲಿ ಎಂದು ಹರಸಿದರು.

ಪೌರಾಯುಕ್ತ ರಾಯಪ್ಪ, ಉಡುಪಿ ಚೇಂಬರ್‌ ಆಫ್ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್‌, ಡೆಂಟಾ ಕೇರ್‌ನ ಡಾ| ವಿಜಯೇಂದ್ರ ರಾವ್‌, ಉಜ್ವಲ್‌ ಡೆವಲಪರ್ ನ ಅಜಯ್‌ ಪಿ.ಶೆಟ್ಟಿ, ಪಾಟೀಲ್‌ ಸ್ಟೋರ್ ನ ಗಣೇಶ್‌ ಪಾಟೀಲ್‌, ನಗರಸಭೆ ಸದಸ್ಯರಾದ ರಜನಿ ಹೆಬ್ಬಾರ್‌, ಟಿ.ಜಿ. ಹೆಗ್ಡೆ, ಉದ್ಯಮಿ ಹರಿಯಪ್ಪ ಕೋಟ್ಯಾನ್‌, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ರಮೇಶ್‌ ಭಟ್‌, ಉಪಾಧ್ಯಕ್ಷರಾದ ಮಂಜುನಾಥ ಮಣಿಪಾಲ, ಸರೋಜಾ ಯಶವಂತ್‌, ಕಾರ್ಯದರ್ಶಿ ಅವಿನಾಶ್‌ ಮಾರ್ಪಳ್ಳಿ, ಪದಾಧಿಕಾರಿಗಳಾದ ಅಶೋಕ್‌ ಶೆಟ್ಟಿಗಾರ್‌ ಅಲೆವೂರು, ವಿಟ್ಠಲ ಶೆಟ್ಟಿಗಾರ್‌, ರಾಜಕೇಸರಿ, ಶ್ರೀನಿವಾಸ ಶೆಟ್ಟಿಗಾರ್‌ ಬೈಲೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್‌ ಇಂದ್ರಾಳಿ ಪ್ರಸ್ತಾವನೆಗೈದರು. ಆಯೋಜನ ಸಮಿತಿ ಅಧ್ಯಕ್ಷ ಡಾ| ಚಂದನ್‌ ಶೆಟ್ಟಿಗಾರ್‌ ಸ್ವಾಗತಿಸಿ, ಸದಾಶಿವ ಗೋಳಿಜಾರು ನಿರೂಪಿಸಿದರು.

ಕೈಮಗ್ಗ ಸೀರೆ ಪ್ರದರ್ಶನ
ಉದ್ಘಾಟನೆಯ ಅನಂತರ ಪುತ್ತಿಗೆ ಶ್ರೀಪಾದರು ಮಳಿಗೆಗಳಿಗೆ ಭೇಟಿ ನೀಡಿ ಕೈಮಗ್ಗಗಳಿಂದ ಸಿದ್ಧಪಡಿಸಿದ ಸೀರೆಗಳನ್ನು ವೀಕ್ಷಿಸಿದರು. ಉಡುಪಿ, ಮಂಗಳೂರು, ಇಳಿಕಲ್‌, ದೊಡ್ಡಬಳ್ಳಾಪುರ, ಜಮಖಂಡಿ, ಚನ್ನರಾಯಪಟ್ಟಣ, ಚಾಮರಾಜನಗರ, ಕೊಳ್ಳೇಗಾಲ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ 30ಕ್ಕೂ ಅಧಿಕ ಕೈಮಗ್ಗ ಸೀರೆಗಳ ಉತ್ಪಾದಕರು ಮತ್ತು ಮಾರಾಟಗಾರರು ಭಾಗವಹಿಸಿದ್ದಾರೆ.

ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಬರುತ್ತಿವೆ. ಕೆಲವು ದೇವಸ್ಥಾನಗಳು ಈಗಾಗಲೇ ವಸ್ತ್ರಸಂಹಿತೆ ಜಾರಿಗೆ ತಂದಿದೆ. ಕೆಲವು ದೇವಸ್ಥಾನಗಳು ವಸ್ತ್ರಸಂಹಿತೆ ಜಾರಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿವೆ. ಉಡುಪಿ ಶ್ರೀ ಕೃಷ್ಣಮಠದಲ್ಲೂ ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂಬ ಒತ್ತಡ ಇದೆ. ವಸ್ತ್ರಸಂಹಿತೆ ಜಾರಿ ಮಾಡುವುದರಿಂದ ದೇವಸ್ಥಾನಕ್ಕೆ ಸೀರೆ ಉಟ್ಟು ಬರುವವರ ಸಂಖ್ಯೆ ಹೆಚ್ಚಲಿದೆ. ಇದರಿಂದ ಸೀರೆ ಉದ್ಯಮವೂ ಬೆಳೆಯಲಿದೆ ಎಂದು ಶ್ರೀಪಾದರು ಹೇಳಿದರು.

ಚಿತ್ರಗಳು : ಆಸ್ಟ್ರೋ ಮೋಹನ್

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.