Udupi; ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ
ಶ್ರೀ ಕೃಷ್ಣನಿಗೆ ಅಲಂಕಾರ ಶತಕ ಸಂಭ್ರಮ
Team Udayavani, May 15, 2024, 11:40 AM IST
ಉಡುಪಿ: ಭಾರತದ ಕ್ರಿಕೆಟ್ ದಿಗ್ಗಜ, ಭಾರತ ತಂಡದ ಮಾಜಿ ಮುಖ್ಯ ಕೋಚ್ ಮತ್ತು ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿನೀಡಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀಪಾದರ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.
ಪೂಜ್ಯ ಪುತ್ತಿಗೆ ಕಿರಿಯ ಶ್ರೀಪಾದರು ಉಡುಪಿಯ ಬಾಲ ಕೃಷ್ಣನಿಗೆ ವಿಧ ವಿಧದ ಅಲಂಕಾರ ಮಾಡುತ್ತ ನೂರನೆಯ ಅಲಂಕಾರದ ದಿನವಾದ ಇಂದು ಕ್ರಿಕೆಟ್ ಲೋಕದಲ್ಲಿ ಶತಕ ಬಾರಿಸಿ ಶತಕ ಖ್ಯಾತಿಯ ಶ್ರೀ ಕೃಷ್ಣ ಭಕ್ತರೂ ಆದ ರವಿಶಾಸ್ತ್ರಿಗಳು ಬಂದು ಆಶೀರ್ವಾದ ಪಡೆದದ್ದು ಯೋಗಾಯೋಗವಾಗಿದ್ದು ಅಚ್ಚರಿ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.
ಶಾಸ್ತ್ರಿಗಳು ಸ್ವಯಂ ಸ್ಪೂರ್ತಿಯಿಂದ ಭಕ್ತರಿಗೆ ಭಗವದ್ಗೀತೆ ಬರೆಯಲು ತಮ್ಮ ಸಂದೇಶ ನೀಡಿದರು. ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಮತ್ತು ಮಠದ ಅಭಿಮಾನಿಗಳಾದ ವಾದಿರಾಜ ಪೆಜತ್ತಾಯ ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.