ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ


Team Udayavani, Apr 4, 2020, 11:19 AM IST

ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ

ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಹಾಗೂ ಸರಕಾರದ ಆದೇಶಾನುಸಾರ ಎಪ್ರಿಲ್‌, ಮೇ ತಿಂಗಳ ಪಡಿತರ ವಿತರಣೆ ಪ್ರಾರಂಭವಾದ ಎರಡು ದಿನದಲ್ಲಿ ಅಧಿಕ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಉಡುಪಿ ಪ್ರಥಮ, ದ.ಕ. ತೃತೀಯ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ 2,29,508 ಪಡಿತರ ಚೀಟಿದಾರರಿದ್ದು, ಮೊದಲ ಎರಡು ದಿನಗಳಲ್ಲಿಯೇ 26,500 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ 10ರಲ್ಲಿ 9 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನದಲ್ಲಿದೆ. ಕೊಡಗು ಜಿಲ್ಲೆಯು 10,000 ಕುಟುಂಬಗಳಿಗೆ ಹಾಗೂ ದ.ಕ. ಜಿಲ್ಲೆಯಲ್ಲಿ 4,30,665 ಪಡಿತರ ಚೀಟಿದಾರರಿದ್ದು, 31,600 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ ಕ್ರಮವಾಗಿ ಶೇ. 7.6 ಹಾಗೂ 7.28ರಷ್ಟು ಪ್ರಗತಿ ಸಾಧಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿವೆ.

ಗೋಧಿ ಪ್ರಸ್ತಾವನೆ
ಉಡುಪಿ ಜಿಲ್ಲೆಗೆ ತಿಂಗಳಿಗೆ 45,000 ಕ್ವಿಂಟಾಲ್‌ ಅಗತ್ಯವಿದೆ. ಈ ಬಾರಿ ಎರಡು ತಿಂಗಳ ರೇಷನ್‌ ನೀಡುತ್ತಿರುವುದರಿಂದ 90,000 ಕ್ವಿಂಟಲ್‌ ಹಾಗೂ ದ.ಕ. ಜಿಲ್ಲೆಯಲ್ಲಿ 99,500 ಕ್ವಿಂಟಲ್‌ ಅಕ್ಕಿ ಅಗತ್ಯವಿದೆ. ಪ್ರಸ್ತುತ ದ.ಕ. ಜಿಲ್ಲೆಯಿಂದ 10,030 ಕ್ವಿ. ಹಾಗೂ ಉಡುಪಿಯಿಂದ 6,500 ಕ್ವಿ. ಗೋಧಿ ಪ್ರಸ್ತಾವನೆಯನ್ನು ಇಲಾಖೆಗೆ ಕಳುಹಿಸಲಾಗಿದೆ.

1,192 ಪಡಿತರ ವಿತರಣಾ ಕೇಂದ್ರ
ಉಡುಪಿ ಜಿಲ್ಲೆಯಲ್ಲಿ 292 ಹಾಗೂ ದ.ಕ. ಜಿಲ್ಲೆಯಲ್ಲಿ 900 ಪಡಿತರ ವಿತರಣಾ ಕೇಂದ್ರಗಳಿವೆ. ಈ ಹಿಂದೆಲ್ಲ ತಿಂಗಳ ಕೊನೆಯ ವರೆಗೂ ಗ್ರಾಹಕರು ಪಡಿತರ ಒಯ್ಯುತ್ತಿದ್ದರೆ ಈ ಬಾರಿ ಆರಂಭದಲ್ಲೇ ಹೆಚ್ಚಿನವರೂ ಧಾವಿಸಿ ಬಂದಿರುವ ಕಾರಣ ಮೊದಲ ಎರಡು ದಿನಗಳಲ್ಲಿಯೇ ಕೆಲವು ಕೇಂದ್ರಗಳಲ್ಲಿ ಬಹುತೇಕ ದಾಸ್ತಾನು ವಿತರಣೆಯಾಗಿದೆ. ಗೋದಾಮುಗಳಲ್ಲಿ ಸಾಕಷ್ಟು ದಾಸ್ತಾನು ಇದ್ದು ಆವಶ್ಯಕತೆಗನುಗುಣವಾಗಿ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಇಲಾಖಾ ಆಧಿಕಾರಿಗಳು ತಿಳಿಸಿದ್ದಾರೆ.

ಗೊಂದಲ ಬೇಡ
ನಮ್ಮಲ್ಲಿ ಆಹಾರ ಸಾಮಗ್ರಿ ಕೊರತೆ ಇಲ್ಲ. ವಿತರಣೆ ಸಹ ನಿರಂತವಾಗಿರಲಿದೆ. ಎಪ್ರಿಲ್‌ ತಿಂಗಳ ಕೊನೆಯ ವರೆಗೆ ಆಹಾರ ಸಾಮಗ್ರಿ ವಿತರಣೆ ಮಾಡಲು ಅವಕಾಶವಿದೆ. ಸಾರ್ವಜನಿಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
-ಡಾ| ಮಂಜುನಾಥನ್‌, ಜಂಟಿ ನಿರ್ದೇಶಕ, ಆಹಾರ ಮತ್ತು ನಾಗರಿಕ ಇಲಾಖೆ, ದ.ಕ. ಮತ್ತು ಉಡುಪಿ ಜಿಲ್ಲೆ

ದ.ಕ. ಜಿಲ್ಲೆಗೆ 20 ಸಾವಿರ
ಕ್ವಿಂಟಾಲ್‌ ಕುಚ್ಚಲಕ್ಕಿ
ಮಂಗಳೂರು/ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್‌ದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್‌ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಬಿಳಿ ಕುಚ್ಚಲಕ್ಕಿ ವಿತರಣೆ ಕೆಲವೆಡೆಗಳಲ್ಲಿ ನಡೆಯುತ್ತಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.