Udupi ಜಾನಪದ ಅಧ್ಯಯನ ವೀರ ಬನ್ನಂಜೆ ಬಾಬು ಅಮೀನ್‌

ಅಭಿನಂದನೆ ಕಾರ್ಯಕ್ರಮದಲ್ಲಿ ಪ್ರೊ| ಕೆ.ಚಿನ್ನಪ್ಪ ಗೌಡ

Team Udayavani, Dec 17, 2023, 11:21 PM IST

Udupi ಜಾನಪದ ಅಧ್ಯಯನ ವೀರ ಬನ್ನಂಜೆ ಬಾಬು ಅಮೀನ್‌

ಉಡುಪಿ: ಸಂಶೋಧಕರು, ಮಾರ್ಗದರ್ಶಕರ ಸಹಾಯ ಸಹಕಾರವಿಲ್ಲದೆ ಬನ್ನಂಜೆ ಬಾಬು ಅಮೀನರು ಜಾನಪದ, ಸಾಂಸ್ಕೃತಿಕ ಸಾಹಿತ್ಯ ಲೋಕದಲ್ಲಿ ಮಾಡಿರುವ ಅಧ್ಯಯನದಿಂದ ನೀಡಿದ ಕೊಡುಗೆ ಅತ್ಯಮೂಲ್ಯವಾದುದು.
ಅವರು ಸಂಗ್ರಹ ಮಾಡಿಕೊಟ್ಟಿರುವ ಅಖರ ಸಾಮಗ್ರಿಗೆ ಬೆಲೆ ಕಟ್ಟಲು ಅಸಾಧ್ಯ. ಜ್ಞಾನ ಭಂಡಾರವೆನಿಸಿದ ಅವರು “ಜಾನಪದ ಅಧ್ಯಯನ ವೀರ’ ಎಂದು ವಿಶ್ರಾಂತ ಕುಲಪತಿ ಪ್ರೊ| ಕೆ.ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟರು.

ಹಿರಿಯ ಜಾನಪದ ವಿದ್ವಾಂಸ, ಸಮಾಜ ಸೇವಕ ಬನ್ನಂಜೆ ಬಾಬು ಅಮೀನ್‌ ಅವರು 80ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಹಿನ್ನೆಲೆಯಲ್ಲಿ ಬನ್ನಂಜೆ ಬಾಬು ಅಮೀನ್‌-80 ಅಭಿನಂದನ ಸಮಿತಿ ವತಿಯಿಂದ ಬನ್ನಂಜೆಯಲ್ಲಿ ರವಿವಾರ ಹಮ್ಮಿಕೊಂಡ ಸಿರಿತುಪ್ಪೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾನಪದ ಕಲಾವಿದರೇ ಜಾನಪದ ಬದುಕಿನ ನಿಜವಾದ ಒಡೆಯರು. ಅಮೀನರು ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ತಲೆಮಾರಿಗೆ ದಾಟಿಸುವ ಕಾರ್ಯವನ್ನು ಮಾಡುವಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ಪುಸ್ತಕ ರೂಪದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಅವರಿಂದ ಸಂಗ್ರಹಿಸಲ್ಪಟ್ಟ ಸಂಸ್ಕೃತಿಯ ಹೊತ್ತಗೆಗಳ ಉಪಯೋಗವನ್ನು ಯುವ ಪೀಳಿಗೆ ಪಡೆಯಬೇಕು. ಸುತ್ತಲಿನ ಶೈಕ್ಷಣಿಕ ಸಂಸ್ಥೆಗಳು, ಜಾನಪದ ಅಧ್ಯಯನಶೀಲರು ಅವರ ಪ್ರಯೋಜನ ಪಡೆಯಲಿ ಎಂದವರು ಆಶಿಸಿದರು.

ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಮಾತನಾಡಿ, ಬರಹಗಾರನಿಗೆ ಬರಹದ ಒತ್ತಡ, ತುಡಿತವಿದ್ದಾಗ ಉತ್ತಮ ಬರೆಹಗಳು ಹೊರಹೊಮ್ಮಲು ಸಾಧ್ಯ. ಅಮೀನರು ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡದವರಲ್ಲ, ಜನರ ನಡುವೆ ಕೆಲಸ ಮಾಡಿದವರು. ಅವರು ಬರೆದ ಅದ್ಭುತ ಸಾಧಕ ಪುಸ್ತಕಗಳಿಗೆ ಡಾಕ್ಟರೇಟ್‌ ದೊರಕಬೇಕಿತ್ತು. ಬಾಬು ಅಮೀನರಿಗೆ ಆಯೋಜಿಸಿದ್ದ ಈ ಕಾರ್ಯಕ್ರಮ ಪದ್ಮ ಪ್ರಶಸ್ತಿಗೆ ಮೀರಿದ ಗೌರವಾರ್ಪಣೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್‌ ಆರ್‌. ಅಭಿನಂದನ ಗ್ರಂಥ “ಸಿರಿ ಕುರಲ್‌’ ಅನಾವರಣಗೊಳಿಸಿದರು.

ಅಭಿನಂದನ ಸಮಿತಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಜಾನಪದ ವಿದ್ವಾಂಸ ಡಾ| ವೈ.ಎನ್‌. ಶೆಟ್ಟಿ, ಮುಂಬಯಿ ಉದ್ಯಮಿ ಮೇನಾಳಗುತ್ತು ಕಿಶನ್‌ ಜೆ. ಶೆಟ್ಟಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ , ಕಾರ್ಯಾಧ್ಯಕ್ಷ ರಘುನಾಥ್‌ ಮಾಬಿಯಾನ್‌, ಮಹೇಶ್‌ ಎಸ್‌. ಸುವರ್ಣ ಬೋಳೂರು ಉಪಸ್ಥಿತರಿದ್ದರು.

ಸಂಘಟನ ಕಾರ್ಯದರ್ಶಿ ದಯಾ ನಂದ ಕರ್ಕೇರ ಉಗ್ಗೇಲ್‌ಬೆಟ್ಟು ಸ್ವಾಗತಿಸಿ, ಕಾರ್ಯದರ್ಶಿ ಪಾಂಡು ಕೋಟ್ಯಾನ್‌ ವಂದಿಸಿದರು. ಚಂದ್ರಹಾಸ ಬಳಂಜ, ಅರ್ಪಿತಾ ಶೆಟ್ಟಿ ನಿರೂಪಿಸಿದರು.

ಮಾದರಿ ಬದುಕು ಸಾಗಿಸೋಣ
ಆದರ್ಶ, ಸತ್ಯ, ನಿಷ್ಠೆ, ಧರ್ಮಗಳ ಬಗ್ಗೆ ಭಾಷಣ ಮಾಡುವವರು ನಿಜ ಜೀವನದಲ್ಲಿ ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಿ ಬದುಕಿದರೆ ನಾರಾಯಣಗುರುಗಳ ಸಂದೇಶಕ್ಕೆ ಬೆಲೆ ಕೊಟ್ಟಂತಾಗುತ್ತದೆ ಎಂದು ಅಭಿನಂದನೆ ಸ್ವೀಕರಿಸಿದ ಬನ್ನಂಜೆ ಬಾಬು ಅಮೀನ್‌ ಹೇಳಿದರು.

ಅಕ್ಷರ ತುಲಾಭಾರ-ಸಮ್ಮಾನ
ಬಾಬು ಅಮೀನರು ಬರೆದ ಪುಸ್ತಕಗಳಿಂದಲೇ ಅವರನ್ನು “ಅಕ್ಷರ ತುಲಾಭಾರ’ ಮಾಡಲಾಯಿತು. ತಾಳೆಗರಿಯಲ್ಲಿ ಸಮ್ಮಾನ ಪತ್ರ ಬರೆದು ಸಮರ್ಪಿಸಲಾಯಿತು. ಅಮೀನರಿಗೆ ಜೋಳಿಗೆಯ ಚೀಲವಿತ್ತು, ಪೇಟ ತೊಡಿಸಿ, ಅವರ ಪತ್ನಿ ಇಂದಿರಾ ಅವರಿಗೆ ಅರಶಿನ, ಕುಂಕುಮ ಹಚ್ಚಿ, ಮಲ್ಲಿಗೆ ಹೂವನ್ನು ಮುಡಿಗೆ ಮುಡಿಸಿ, ದಂಪತಿಯಿಂದ ಪರಸ್ಪರ ಮಲ್ಲಿಗೆ ಹೂವಿನ ಮಾಲೆಯನ್ನು ಹಾಕಿಸಿ, ಆಳೆತ್ತರದ ಸ್ಮರಣಿಕೆ ನೀಡಿ, ಆರತಿ ಬೆಳಗಿ, ಅಕ್ಷತೆ ಹಾಕಿ ವಿಶೇಷವಾಗಿ ಸಮ್ಮಾನಿಸಲಾಯಿತು. ಪಡಿಮಂಚದ ಮೇಲೆ ಭತ್ತದ ಕದಿರಿನಿಂದ ಸುತ್ತಲ್ಪಟ್ಟ ಅಭಿ ನಂದನ ಗ್ರಂಥವನ್ನು ಅನಾವ ರಣಗೊಳಿಸಲಾಯಿತು.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.