Kediyoor Hotels; ಹಸುರುವಾಣಿ ಹೊರೆಕಾಣಿಕೆ ಮೆರವಣಿಗೆ ಸಂಭ್ರಮ

ಕಿದಿಯೂರ್‌ ಹೊಟೇಲ್ಸ್‌ ಅಷ್ಟಪವಿತ್ರ ನಾಗಮಂಡಲೋತ್ಸವ

Team Udayavani, Jan 28, 2024, 10:35 PM IST

Kediyoor Hotels; ಹಸುರುವಾಣಿ ಹೊರೆಕಾಣಿಕೆ ಮೆರವಣಿಗೆ ಸಂಭ್ರಮ

ಉಡುಪಿ: ಕಿದಿಯೂರ್‌ ಹೊಟೇಲ್ಸ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ಜ. 31ರಂದು ನಡೆಯಲಿರುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಜೋಡುಕಟ್ಟೆಯಲ್ಲಿ ಶನಿವಾರ ಹಸುರುವಾಣಿ ಹೊರೆಕಾಣಿಕೆ ಸಹಿತ ಭವ್ಯ ಶೋಭಾಯಾತ್ರೆ ನಡೆಯಿತು.

ಶ್ರೀ ನಾಗದೇವರಿಗೆ ನೂತನವಾಗಿ ನಿರ್ಮಿಸಿದ ಭವ್ಯ ರಜತ ಮಂಟಪ, ರಜತ ಕವಚ ಮತ್ತು ಸ್ವರ್ಣ ಲೇಪಿತ ಪ್ರಭಾವಳಿಯಲ್ಲಿ ರಜತ ಬಲಿ ಮೂರ್ತಿಯ ಮೆರವಣಿಗೆಗೆ ಶ್ರೀ ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು ಚಾಲನೆ ನೀಡಿ, ನಾಗದೇವರು ಎಲ್ಲರಿಗೂ ಆರಾಧ್ಯ ದೇವರು. ನಾವು ಮಾಡುವ ಕಾರ್ಯದಲ್ಲಿ ದೋಷ ಕಂಡು ಬಂದರೆ ನಾಗದೇವರು ಪ್ರತ್ಯಕ್ಷವಾಗಿ ಕಾಣಿಸಲ್ಪಟ್ಟರೆ, ಉಳಿದ ದೇವರು ಪರೋಕ್ಷವಾಗಿ ತೋರಿಸುತ್ತಾರೆ. ಅಂತಹ ವಿಶೇಷವಾದ ಶಕ್ತಿಯುಳ್ಳ ನಾಗದೇವರು ಸರ್ವ ಭಕ್ತರನ್ನು ಅನುಗ್ರಹಿಸಲಿ ಎಂದು ಆಶೀರ್ವಚನ ನೀಡಿದರು.

ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು, ರಜತ ಮಂಟಪ, ರಜತ ಕವಚ ಮತ್ತು ಸ್ವರ್ಣ ಲೇಪಿತ ಪ್ರಭಾವಳಿಯಲ್ಲಿ ರಜತ ಬಲಿ ಮೂರ್ತಿಗೆ ಪುಷ್ಪಾರ್ಚನೆಗೈದು ಆಶೀರ್ವದಿಸಿದರು.

ಜೋಡುಕಟ್ಟೆಯಿಂದ ಆರಂಭಗೊಂಡು ತಾ.ಪಂ. ಕಚೇರಿ ಮಾರ್ಗ, ಹಳೇ ಡಯಾನ ಸರ್ಕಲ್‌, ನಗರ‌ಸಭೆ ಮುಂಭಾಗ, ಸರ್ವಿಸ್‌ ಬಸ್‌ನಿಲ್ದಾಣ ಮಾರ್ಗವಾಗಿ ಕಿದಿಯೂರ್‌ ಹೊಟೇಲ್‌ನ ಶ್ರೀ ನಾಗ ಸಾನ್ನಿಧ್ಯಕ್ಕೆ ಸಾಗಿ ಬಂದ ಮೆರವಣಿಗೆಯಲ್ಲಿ ವಿವಿಧ ಬಿರುದು ಬಾವಲಿ, ವೈವಿಧ್ಯಮಯ ಸ್ತಬ್ಧಚಿತ್ರಗಳು, ಡೊಳ್ಳು ಕುಣಿತ, ಚೆಂಡೆ ವಾದನ, ಭಜನ ಸಂಕೀರ್ತನೆ, ಕೊಂಬು ಕಹಳೆ, ಕೇರಳದ ಪಂಚ ವಾದ್ಯಂ, ತಟ್ಟಿರಾಯ, ಕೇಸರಿ ಪತಾಕೆ ಹಿಡಿದ ಪೇಟ ತೊಟ್ಟ ಮಹಿಳೆಯರು, ಡೊಳ್ಳು ವಾದನ, ಮರಕಾಲು ಹುಲಿವೇಷ, ಹುಲಿವೇಷಗಳು, ತಲೆಹೊರೆಯಲ್ಲಿ ಅಕ್ಕಿಮುಡಿ, ನಾಸಿಕ್‌ ಬ್ಯಾಂಡ್‌, ಕಲಶಗಳು, ಸ್ಯಾಕ್ಸೋಫೋನ್, ಕುಣಿತ ಭಜನ ತಂಡಗಳು, ಪ್ರಚಾರ ವಾಹನ, ಸಿಂಗಾರ ಹೂವು ಹಿಡಿದ ಮಹಿಳೆಯರು, ಸಹಿತ ವೈವಿಧ್ಯಮಯ ವಿಶೇಷ ಆಕರ್ಷಣೆಗಳು ಮೆರಗು ನೀಡಿದವು.

ನಾಗಮಂಡಲೋತ್ಸವ ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌, ಕಿದಿಯೂರ್‌ ಹೊಟೇಲ್ಸ್‌ ನ ಎಂಡಿ, ಸೇವಾಕರ್ತ ಭುವನೇಂದ್ರ ಕಿದಿಯೂರು, ಹೀರಾ ಬಿ. ಕಿದಿಯೂರು, ಬ್ರಿಜೇಶ್‌ ಕಿದಿಯೂರು, ಭವ್ಯಶ್ರೀ ಕಿದಿಯೂರು, ಅಭಿನ್‌ ದೇವದಾಸ್‌, ಜಿತೇಶ್‌ ಬಿ. ಕಿದಿಯೂರು, ಪ್ರಿಯಾಂಕಾ ಜಿತೇಶ್‌, ನಾಗಮಂಡಲದ ಸಮಗ್ರ ಮಾರ್ಗದರ್ಶಕ, ಜೋತಿಷಿ ವೇ|ಮೂ| ಕಬಿಯಾಡಿ ಜಯರಾಮ ಆಚಾರ್ಯ, ಸಮಿತಿ ಪ್ರಧಾನ ಕಾರ್ಯದರ್ಶಿ ಯುವರಾಜ್‌ ಸಾಲ್ಯಾನ್‌ ಮಸ್ಕತ್‌, ಗೌರವ ಮಾರ್ಗದರ್ಶಿ ಡಾ| ವಿಜಯೇಂದ್ರ ವಸಂತ ರಾವ್‌, ಉಪಾಧ್ಯಕ್ಷರಾದ ಗಣೇಶ್‌ ರಾವ್‌, ಹಿರಿಯಣ್ಣ ಕಿದಿಯೂರು, ಕೋಶಾಧಿಕಾರಿ ವಿಲಾಸ್‌ ಕುಮಾರ್‌ ಜೈನ್‌, ಪ್ರಯುಖರಾದ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌, ಆನಂದ ಪಿ. ಸುವರ್ಣ, ಆನಂದ ಸಿ. ಕುಂದರ್‌, ಜಯ ಸಿ. ಕೋಟ್ಯಾನ್‌, ಹರಿಯಪ್ಪ ಕೋಟ್ಯಾನ್‌, ಸಾಧು ಸಾಲ್ಯಾನ್‌, ವೆಂಕಟರಮಣ ಕಿದಿಯೂರು, ರಮೇಶ್‌ ಕಿದಿಯೂರು, ದಿನಕರ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಮಟ್ಟು ಲಕ್ಷ್ಮೀನಾರಾಯಣ ಭಟ್‌, ರತ್ನಾಕರ ಕಲ್ಯಾಣಿ, ಯೋಗೀಶ್ಚಂದ್ರಧರ, ರಾಮಚಂದ್ರ ಕುಂದರ್‌, ಸುಭಾಸ್‌ ಮೆಂಡನ್‌, ದಯಾನಂದ ಕೆ. ಸುವರ್ಣ, ಮಧುಸೂದನ ಕೆಮ್ಮಣ್ಣು, ರತ್ನಾಕರ ಸಾಲ್ಯಾನ್‌, ರಮೇಶ್‌ ಕೋಟ್ಯಾನ್‌, ಕಿಶೋರ್‌ ಡಿ. ಸುವರ್ಣ, ಪ್ರಕಾಶ್‌ ಜತ್ತನ್ನ, ಗುಂಡು ಬಿ. ಅಮೀನ್‌, ಭೋಜರಾಜ್‌ ಕಿದಿಯೂರು, ದಿನೇಶ್‌ ಎರ್ಮಾಳ್‌, ಶಶಿಧರ ಶೆಟ್ಟಿ ಎರ್ಮಾಳ್‌, ಮೋಹನ್‌ ಬೆಂಗ್ರೆ, ರಾಧಾಕೃಷ್ಣ ಮೆಂಡನ್‌, ಬೇಬಿ ಎಚ್‌. ಸಾಲ್ಯಾನ್‌, ಯತೀಶ್‌ ಕಿದಿಯೂರು, ಕೃಷ್ಣ ಎಸ್‌. ಸುವರ್ಣ, ರಾಜೇಂದ್ರ ಸುವರ್ಣ ಹಿರಿಯಡಕ, ಜಯಂತ ಕೋಡಿ, ನಗರಸಭೆ ಸದಸ್ಯ ವಿಜಯ ಕೊಡವೂರು, ಪ್ರಕಾಶ್‌ ಸುವರ್ಣ ಕಟಪಾಡಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಕಿದಿಯೂರ್‌ ಹೊಟೇಲ್ಸ್‌ನ ಸಿಬಂದಿ ಉಪಸ್ಥಿತರಿದ್ದರು. ಪ್ರಶಾಂತ ಶೆಟ್ಟಿ ಹಾವಂಜೆ ನಿರೂಪಿಸಿದರು.

 

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.