Udupi: ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ!: ಪ್ರಕರಣ ಸುಖಾಂತ್ಯ
Team Udayavani, Sep 24, 2024, 9:05 PM IST
ಉಡುಪಿ: ಅನಾರೋಗ್ಯ ಪೀಡಿತ ಪತ್ನಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದ ಪತಿಯು ಪತ್ನಿ, ಇಬ್ಬರು ಮಕ್ಕಳು ಹಾಗೂ ಅತ್ತೆಯನ್ನು ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಇವರು ಬಹಳ ಹೊತ್ತು ಕಳೆದರೂ ವ್ಯಕ್ತಿ ಬಾರದ ಹಿನ್ನೆಲೆಯಲ್ಲಿ ಅವರ ಪತ್ನಿ ಸಹಿತ ಎಲ್ಲರೂ ಬೊಬ್ಬಿಡಲು ಆರಂಭಿಸಿದ್ದರು. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತತ್ಕ್ಷಣ ಸ್ಥಳಕ್ಕೆ ಆಗಮಿಸಿದ ಅವರು ನಾಲ್ವರನ್ನೂ ಮಹಿಳಾ ಪೊಲೀಸ್ ಠಾಣೆಗೆ ತಂದೊಪ್ಪಿಸಿದರು.
ಬಳಿಕ ನಿಟ್ಟೂರಿನ ಸಖೀ ಕೇಂದ್ರಕ್ಕೆ ದಾಖಲಿಸಲಾಯಿತು. ಸುಮಾರು ಹೊತ್ತಿನ ಬಳಿಕ ಪತಿ ಆಗಮಿಸಿದ್ದಾನೆ. ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟಕರವಾದ ಕಾರಣ ಬರಲು ತಡವಾಯಿತು ಎಂದು ಪತಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.