Udupi ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ: ಝಾ
Team Udayavani, Aug 17, 2024, 1:53 AM IST
ಉಡುಪಿ: ಇಂದ್ರಾಳಿ ರೈಲು ನಿಲ್ದಾಣ 9 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿದ್ದು, ಮೊದಲ ಹಂತವಾಗಿ ಫ್ಲ್ಯಾಟ್ಫಾರಂ ಮೇಲ್ಛಾವಣಿ ಹಾಗೂ ಸ್ಕೈವಾಕ್ ಮೇಲ್ಛಾವಣಿ ನಿರ್ಮಿಸುವುದಾಗಿ ಕೊಂಕಣ ರೈಲು ನಿಗಮದ ಮುಖ್ಯಸ್ಥ ಹಾಗೂ ಎಂಡಿ ಸಂತೋಷ್ ಕುಮಾರ್ ಝಾ ಹೇಳಿದರು.
ರೈಲು ನಿಲ್ದಾಣದಲ್ಲಿ ಕನಿಷ್ಠ ಮೂಲಸೌಕರ್ಯ ಇಲ್ಲದಿರುವ ಬಗ್ಗೆ “ಉದಯವಾಣಿ’ ಸರಣಿ ವರದಿ ಪ್ರಕಟಿಸಿತ್ತು. ಬಳಿಕ ಶಾಸಕ ಯಶ್ಪಾಲ್ ಸುವರ್ಣ ಅವರು ಸ್ಥಳ ಪರಿಶೀಲಿಸಿಅಗತ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಶುಕ್ರವಾರ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು ಝಾ, ಮೊದಲ ಹಂತದಲ್ಲಿ ಪ್ಲಾಟ್ಫಾರಂ ಶೆಲ್ಟರ್ ಹಾಗೂ ಸಫೇಸ್ ಸಿದ್ಧಪಡಿಸಲಿದ್ದೇವೆ. ಎಲ್ಲ ಪ್ಲಾಟ್ಫಾರಂಗೂ ಶೆಲ್ಟರ್ ಅಳವಡಿಸಲು ಸುಮಾರು 4.20 ಕೋ.ರೂ. ಅಗತ್ಯವಿದೆ. ಹೀಗಾಗಿ ಇದನ್ನು ಹಂತ ಹಂತವಾಗಿ ಮಾಡಲಿದ್ದೇವೆ. ವಿವಿಧ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಬೇಕಾದ ಮೂಲ ಸೌಕರ್ಯ ಒದಗಿಸುವುದಾಗಿ ತಿಳಿಸಿದರು.
ಉಡುಪಿ ರೈಲು ನಿಲ್ದಾಣದ ಸೌಕರ್ಯಗಳ ಅಭಿವೃದ್ಧಿಗೆ ಸುಮಾರು 9 ಕೋ.ರೂ. ಬೇಕು. ಈ ವರ್ಷ 2 ಕೋಟಿ ರೂ. ಮೀಸಲಿಟ್ಟಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ನಿಧಿಯನ್ನು ಒದಗಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕೆ ಎಸ್ಕಲೇಟರ್ ಅನ್ನು ನಿಲ್ದಾಣದ ಒಳ ಭಾಗಕ್ಕೆ ಸ್ಥಳಾಂತರಿಸಲಾಗುವುದು. ಹಾಗೆಯೇ ಲಿಫ್ಟ್ ವ್ಯವಸ್ಥೆ ಕಲ್ಪಿಸುವು ದಾಗಿ ಹೇಳಿದರು. ಕೊಂಕಣ ರೈಲ್ವೇ ಇತಿಹಾಸದಲ್ಲೇ ಕಳೆದ ಬಾರಿ 301 ಕೋ.ರೂ. ಲಾಭ ಗಳಿಸಿದೆ. ಈ ಬಾರಿ 1,200 ಕೋ.ರೂ. ಯೋಜನೆಗಳನ್ನು ಹಾಕಿಕೊಂಡಿದ್ದು, 200 ಕೋ.ರೂ. ಲಾಭದ ನಿರೀಕ್ಷೆ ಇದೆ. ಶೇ.100ರಷ್ಟು ಹಳಿ ವಿದ್ಯುದ್ದೀಕರಣ ಪೂರ್ಣ ಗೊಂಡಿದ್ದು, ವಾರ್ಷಿಕ 190 ಕೋ.ರೂ. ಉಳಿತಾಯವಾಗುತ್ತಿದೆ. ಹಳಿ ದ್ವಿಪಥ ಇತ್ಯಾದಿ ಪ್ರಸ್ತಾವ ಇದೆ ಎಂದು ಹೇಳಿದರು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಮಾತನಾಡಿ, ಉಡುಪಿ ರೈಲು ನಿಲ್ದಾಣ ಉನ್ನತೀಕರಣ ಹಾಗೂ ವಂದೇ ಭಾರತ್ ವಿಸ್ತರಣೆಗೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ. ಕೊಂಕಣ ರೈಲು ವಿಭಾಗ ಆದ್ಯತೆ ಮೇರೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.
ವಿಶ್ರಾಂತಿ ಕೊಠಡಿ ಉದ್ಘಾಟನೆ
ಇಂದ್ರಾಳಿ ನಿಲ್ದಾಣದಲ್ಲಿ ನೂತನ ವಿಶ್ರಾಂತಿ ಕೊಠಡಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಯ ವರು ಉದ್ಘಾಟಿಸಿ, ಭಾರತೀಯ ರೈಲ್ವೆ ಯೊಂದಿಗೆ ಕೊಂಕಣ ರೈಲು ವಿಲೀನಕ್ಕೂ ಪ್ರಯತ್ನಿಸುವುದಾಗಿ ತಿಳಿಸಿದರು. ಈ ವಿಶ್ರಾಂತಿ ಕೊಠಡಿಯಲ್ಲಿ 10 ಆಸನಗಳಿದ್ದು, ಅಗತ್ಯ ವ್ಯವಸ್ಥೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.