ನಾಡಹಬ್ಬಕ್ಕೆ ಅಣಿಯಾಗುತ್ತಿದೆ ಉಡುಪಿ


Team Udayavani, Sep 4, 2017, 8:30 AM IST

nada-habba.jpg

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸೆ. 13 ಮತ್ತು 14ರಂದು ವಿಜೃಂಭಣೆಯಿಂದ ಜರಗಲಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ.

ಆ. 14ರಂದು ನಡೆದ ಚಾಂದ್ರಮಾನ ಅಷ್ಟಮಿ ಶ್ರೀಕೃಷ್ಣ ಮಠದಲ್ಲಿ ನಡೆದಿದ್ದು, ಎಂದಿನಂತೆ ಸೌರಾಷ್ಟಮಿಯ ಸಂಭ್ರಮಕ್ಕೆ ಸಿದ್ಧತೆಯಾಗುತ್ತಿದೆ. ಶ್ರೀ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪಂಚಮ ಪರ್ಯಾಯದ ಎರಡನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯೂ ಇದಾಗಿದೆ. ಹೀಗಾಗಿ ಈ ಜನ್ಮಾಷ್ಟಮಿ ಮಹತ್ವದ್ದಾಗಿದೆ. 

ಸೆ. 13ರ ಮಧ್ಯರಾತ್ರಿ 12.34ಕ್ಕೆ ಪೇಜಾವರ ಸಹಿತ ಎಲ್ಲ ಸ್ವಾಮೀಜಿಯವರು ಶ್ರೀಕೃಷ್ಣನಿಗೆ ಅಘÂì ಪ್ರದಾನ ಮಾಡ ಲಿದ್ದು, ಸೆ. 14ರಂದು ಅಪರಾಹ್ನ 3 ಗಂಟೆಯಿಂದ ಶ್ರೀಕೃಷ್ಣನ ಮೃಣ್ಮಯ ಪ್ರತಿಮೆಯ ರಥೋತ್ಸವ, ವಿಟ್ಲಪಿಂಡಿ ಉತ್ಸವ (ಶ್ರೀಕೃಷ್ಣ ಲೀಲೋತ್ಸವ) ನಡೆಯಲಿದೆ. ಕೆಲವು ಬಾರಿ ಚಾತುರ್ಮಾಸ್ಯದ ಕಾರಣ ಇತರ ಸ್ವಾಮೀಜಿ ಯವ ರಿಗೆ ಕೃಷ್ಣಾಷ್ಟಮಿಗಾಗಿ ಉಡುಪಿಗೆ ಬರಲಾಗುತ್ತಿರಲಿಲ್ಲ. ಆದರೆ ಈ ಬಾರಿ ಜನ್ಮಾಷ್ಟಮಿ ಸಂದರ್ಭ ಚಾತುರ್ಮಾಸ್ಯ ಕಾಲ ಮುಗಿಯ ಲಿದ್ದು ಇತರ ಸ್ವಾಮೀಜಿಯವರೂ ಭಾಗವಹಿಸಲಿದ್ದಾರೆ. 

ಉಂಡೆ, ಲಡ್ಡು  ತಯಾರಿಕೆ…
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾಂಪ್ರದಾಯಿಕ ಲಡ್ಡು, ಉಂಡೆ ತಯಾರಿ ಸೆ. 13ರಂದು ನಡೆಯಲಿದೆ. ಮಠದಿಂದ ಬಿಸಿಯೂಟ ನೀಡುವ ಶಾಲೆಗಳಿಗೆ ನೀಡುವ ಲಡ್ಡು, ಉಂಡೆ ತಯಾರಿ ಎರಡು ದಿನ ಹಿಂದೆಯೇ ಪ್ರಾರಂಭವಾಗುತ್ತದೆ. ಸೆ. 14ರಂದು ಸಾರ್ವಜನಿಕರಿಗೆ ವಿಶೇಷ ಅನ್ನಸಂತರ್ಪಣೆ ಮಠದ ವತಿಯಿಂದ ನೀಡಲಾಗುತ್ತದೆ. ಬಿಸಿಯೂಟ ನೀಡುತ್ತಿರುವ 110 ಶಾಲೆಗಳ 24,000 ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಶಾಲೆಯಲ್ಲೇ ಬಹುಮಾನ ನೀಡಲಾಗುತ್ತಿದೆ. 

ಉಡುಪಿಯಲ್ಲಿ ಸೌರಾಷ್ಟಮಿ
ಚಾಂದ್ರಮಾನ ಮತ್ತು ಸೌರಮಾನ ಎಂಬ ಎರಡು ತಿಂಗಳು ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಚಾಂದ್ರಮಾನ ತಿಂಗಳು ಅಮಾವಾಸ್ಯೆ ಮರುದಿನದಿಂದ, ಸೌರಮಾನ ತಿಂಗಳು ಸಂಕ್ರಾಂತಿಯ ಮರುದಿನದಿಂದ ಪ್ರಾರಂಭವಾಗುತ್ತವೆ. ಚಾಂದ್ರಮಾನ ಕ್ರಮದಂತೆ ಕೃಷ್ಣಾಷ್ಟಮಿಯು ಆಗಸ್ಟ್‌ ತಿಂಗಳಲ್ಲಿ ಹಾಗೂ ಸೌರಮಾನದ ಅಷ್ಟಮಿ ಸೆಪ್ಟಂಬರ್‌ ತಿಂಗಳಲ್ಲಿ ಬರುತ್ತದೆ. ಕರಾವಳಿ ಕರ್ನಾಟಕದಲ್ಲಿ ಹಿಂದಿನಿಂದಲೂ ಸೌರಮಾನ ಅಷ್ಟಮಿಯನ್ನು ಆಚರಿಸಲಾಗುತ್ತಿದೆ.

ರಾಜಾಂಗಣದ ನವೀಕರಣ
ರಾಜಾಂಗಣದ ನವೀಕರಣಕ್ಕೆ ಕಾಲ ಕೂಡಿಬಂದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೆ. 4ರಿಂದ ರಾಜಾಂ ಗಣದ ಛಾವಣಿಯ ಹಳೆಯ ಶೀಟ್‌ ತೆಗೆದು ಮೊದಲ ಮಹಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಈಗಿರುವ ತಳಭಾಗ, ಗ್ಯಾಲರಿ, ವೇದಿಕೆ ಅದೇ ರೀತಿ ಇರಲಿದೆ. ಬೆಂಗ ಳೂರಿನ ಕಂಪೆನಿಗೆ ಮಹಡಿ ನಿರ್ಮಾಣದ ಹೊಣೆಗಾರಿಕೆ ನೀಡಲಾಗಿದೆ. ನೂತನವಾಗಿ ನಿರ್ಮಾಣವಾಗುವ ಪ್ರಥಮ ಮಹಡಿಯನ್ನು ಸಾರ್ವಜನಿಕ ಅನ್ನಸಂತರ್ಪಣೆ ವ್ಯವಸ್ಥೆಗೆ ಪೂರಕವಾಗುವಂತೆ ರೂಪಿಸಲಾಗುವುದು. ಪೂರ್ಣ ಕೆಲಸಕ್ಕಾಗಿ ಎರಡು ತಿಂಗಳ ಕಾಲಾವಕಾಶ ಬೇಕಾಗಿದೆ. ನವೆಂಬರ್‌ ತಿಂಗಳಲ್ಲಿ ಧರ್ಮಸಂಸತ್‌ ನಡೆಯಲಿರುವುದರಿಂದ ತ್ವರಿತವಾಗಿ ಕೆಲಸ ಮುಗಿಯಬೇಕಾಗಿದೆ.

ಹೊಸ ವೇದಿಕೆಯಲ್ಲಿ ಕಲಾ ಪ್ರದರ್ಶನ
ವಿಟ್ಲಪಿಂಡಿಯಂದು ಅಪರಾಹ್ನ 3 ಗಂಟೆಯಿಂದ ಹುಲಿವೇಷ ಸ್ಪರ್ಧೆ, ಜನಪದ ಕಲೆಗಳ ಪ್ರದರ್ಶನ ರಾಜಾಂಗಣದಲ್ಲಿ ನಡೆಯುವುದಿಲ್ಲ. ರಾಜಾಂಗಣದ ಮೊದಲ ಮಹಡಿಯ ನಿರ್ಮಾಣದ ಕಾರ್ಯ ಚಾಲ್ತಿಯಲ್ಲಿರುವುದರಿಂದ ಸಾಂಸ್ಕೃತಿಕ ಕಾರ್ಯಗಳಿಗೆ ನೂತನ ವೇದಿಕೆ ಮಠದ ರಥಬೀದಿ ಅಥವಾ ಪಾರ್ಕಿಂಗ್‌ ವ್ಯಾಪ್ತಿಯಲ್ಲಿ ಸಿದ್ಧವಾಗಲಿದೆ. ಮುಂಬಯಿಯ ಜನಪದ ತಂಡಗಳೂ ವಿಟ್ಲಪಿಂಡಿ ಉತ್ಸವದಲ್ಲಿ  ಭಾಗವಹಿಸಲಿವೆ.

ಸಾರ್ವಜನಿಕರಿಗೆ ಸಾಕಷ್ಟು ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಸೆ. 2ರಂದು ಚಾಲನೆ ದೊರೆ ತಿದೆ. ಭಕ್ತಿ ಸಂಗೀತ, ಪ್ರಬಂಧ, ನೃತ್ಯ ಸ್ಪರ್ಧೆಗಳು ವಿವಿಧ ವಿಭಾಗ ಗಳಲ್ಲಿ, ಮಠದ ರಾಜಾಂಗಣದಲ್ಲಿ ನಡೆಯುತ್ತಿವೆ. 
ಸೆ. 14ರ ವರೆಗೂ ಸ್ಪರ್ಧೆಗಳು ನಡೆಯಲಿವೆ.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.