Udupi ಕೋಟಿ ಗೀತಾ ಲೇಖನಯಜ್ಞ: ಗೀತೋತ್ಸವಕ್ಕೆ ಪುತ್ತಿಗೆ ಶ್ರೀ ಚಾಲನೆ


Team Udayavani, Dec 23, 2023, 11:34 PM IST

Udupi ಕೋಟಿ ಗೀತಾ ಲೇಖನಯಜ್ಞ: ಗೀತೋತ್ಸವಕ್ಕೆ ಪುತ್ತಿಗೆ ಶ್ರೀ ಚಾಲನೆ

ಉಡುಪಿ: ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೋಟಿಗೀತಾ ಲೇಖನಯಜ್ಞ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಬಸವನಗುಡಿ ನ್ಯಾಶನಲ್‌ ಕಾಲೇಜು ಮೈದಾನದಲ್ಲಿ ಡಿ. 23ರಂದು ಗೀತೋತ್ಸವಕ್ಕೆ ಚಾಲನೆ ದೊರಕಿತು.

ಬೆಳಗ್ಗೆ ನಡೆದ ಕೋಟಿಗೀತಾ ಲೇಖನಯಜ್ಞ ದೀಕ್ಷಾ ಸಮಾರಂಭದ ಗೀತೋತ್ಸವದ ಉದ್ಘಾಟನೆಯನ್ನು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು. ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆ ಕೇವಲ ಪುಣ್ಯ ಗ್ರಂಥವಲ್ಲ, ನಾವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಗೋಪಾಯ ಬೋಧಿಸುವ ಗ್ರಂಥ.

ಗೀತೆಯಲ್ಲಿ ಹೇಳಿದಂತೆ ಜೀವನ ದಲ್ಲಿ ಅನುಸರಿಸಿದರೆ ಶ್ರೀಕೃಷ್ಣನಿಗೆ ಪ್ರಿಯವಾಗುತ್ತದೆ. ಆಧುನಿಕ ಕಾಲದ ಜಿಪಿಎಸ್‌ ಇದ್ದಂತೆ ಗೀತೆ ನಮ್ಮ ಜೀವನದಲ್ಲಿದ್ದರೆ ಅದು ಸದಾ ನಮಗೆ ಮಾರ್ಗದರ್ಶನ ತೋರುತ್ತದೆ ಎಂದು ಶ್ರೀಗಳು ಹೇಳಿದರು.

ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.ಗೀತೋತ್ಸವ ಸಮಿತಿ ಪ್ರಧಾನ ಸಂಚಾಲಕ ಎನ್‌.ಆರ್‌.ರಮೇಶ್‌, ತೇಜಸ್ವಿನಿ ಅನಂತ್‌ ಕುಮಾರ್‌, ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌ ಉಪಸ್ಥಿತರಿದ್ದರು. ಸಹಸ್ರಾರು ಕೃಷ್ಣ ಭಕ್ತರಿಂದ ಸಮಗ್ರ ಕೋಟಿಗೀತಾ ಲೇಖನಯಜ್ಞ ದೀಕ್ಷೆ ನೆರವೇರಿತು. ವಿಷ್ಣು ಸಹಸ್ರನಾಮ ಪಾರಾಯಣ, ನಾಡಿನ ಪ್ರಸಿದ್ಧ ಚಿಂತಕರು, ಉಪನ್ಯಾಸಕರಿಂದ ಗೀತಾ-ಚಿಂತನ, ಭಗವದ್ಗೀತಾ ಕಲಾ ಪ್ರಕಾರಗಳ ಪ್ರಸ್ತುತಿ, ಶಾಲೆಯ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಸಂಬಂಧಿತ ಸ್ಪರ್ಧೆ, ಭಗವದ್ಗೀತೆಗೆ ಸಂಬಂಧಪಟ್ಟ ವಿವಿಧ ಚಿಂತನೆಗಳ ಸಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ ನೆರವೇರಿತು. ಸಂಜೆ “ಆಚಾರ್ಯತ್ರಯರ ಚಿಂತನೆಯಲ್ಲಿ – ಭಗವದ್ಗೀತೆ’ ಕಾರ್ಯಕ್ರಮ ಕೇಂದ್ರೀಯ ಸಂಸ್ಕೃತ ವಿ.ವಿ.ಯ ಕುಲಪತಿ ಪ್ರೊ| ಶ್ರೀನಿವಾಸ ವರಖೇಡಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

“ಆಚಾರ್ಯ ಶಂಕರರ ಗೀತಾಚಿಂತನೆ’ ಬಗ್ಗೆ ಮೈಸೂರಿನ ಶ್ರೀಸುಧಾಮ ಸಂಸ್ಕೃತ ದಿನಪತ್ರಿಕೆಯ ವಿ| ಎಚ್‌.ವಿ. ನಾಗರಾಜ ರಾವ್‌, “ಆಚಾರ್ಯ ರಾಮಾನುಜರ ಗೀತಾಚಿಂತನೆ’ ಬಗ್ಗೆ ಪರಾಂಕುಶಾಚಾರ್ಯ ವೈದಿಕ ಅಧ್ಯಯನ ಸಂಸ್ಥೆಯ ಸ್ಥಾಪಕ ನ್ಯಾಸಿ ಡಾ| ರಾಮಾನುಜನ್‌, “ಆಚಾರ್ಯ ಮಧ್ವರ ಗೀತಾಚಿಂತನೆ’ ಬಗ್ಗೆ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ವಿ| ವಿ. ಹರಿದಾಸ್‌ ಭಟ್ಟ ಅವರು ಚಿಂತನೆ ನಡೆಸಿದರು.

ಡಾ| ಬಿ. ಗೋಪಾಲಾಚಾರ್ಯ ನಿರೂಪಿಸಿದರು. ಮಹಿತೋಷ್‌ ಆಚಾರ್ಯ ಸ್ವಾಗತಿಸಿ, ಶ್ರೀಪಾದರ ಆಪ್ತ ಕಾರ್ಯದರ್ಶಿ ಎಂ.ಪ್ರಸನ್ನಾಚಾರ್ಯ ವಂದಿಸಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.