![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ
Team Udayavani, Jul 3, 2024, 7:34 AM IST
![Court-Symbol](https://www.udayavani.com/wp-content/uploads/2024/07/Court-Symbol-620x372.jpg)
ಕಾಪು: ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರವೆಸಗಿದ ಆರೋಪದಲ್ಲಿ ಪೋಕ್ಸೋ ಪ್ರಕರಣಕ್ಕೆ ಗುರಿಯಾಗಿದ್ದ ತಂದೆ, ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್ ಮುಸ್ತಕೀಮ್ ಅಹ್ಮದ್ (39) ನನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿವರ: ಉಚ್ಚಿಲದ ಭಾಸ್ಕರ ನಗರ ನಿವಾಸಿ ಸೈಯದ್ ಮುಸ್ತಕೀಮ್ ಅಹ್ಮದ್ 2019ರ ನ. 30ರಿಂದ ಡಿ. 15ರ ನಡುವಿನ ಅವಧಿಯಲ್ಲಿ ತನ್ನ 7 ಮತ್ತು 14 ವರ್ಷದ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರವೆಸಗಿದ್ದಾನೆ ಎಂದು ಆತನ ಪತ್ನಿ ನಫೀಸಾ ನುಸ್ರತ್ ಪಡುಬಿದ್ರಿ ಪೊಲೀಸ್ ಠಾಣೆಗೆ 2020ರ ಮಾ. 20ರಂದು ದೂರು ನೀಡಿದ್ದಳು. ಈ ಬಗ್ಗೆ ಪೋಕೊÕ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಅಂದಿನ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸಂಚು ರೂಪಿಸಿದ್ದಳೇ ಪತ್ನಿ?: ಸೈಯದ್ ಮುಸ್ತಕೀಮ್ ಅಹ್ಮದ್ ಮದುವೆಯ ಅನಂತರ ಕೆಲವು ವರ್ಷ ವಿದೇಶದಲ್ಲಿ ಚಾಲಕನಾಗಿ ದುಡಿದಿದ್ದು 2019ರಲ್ಲಿ ಊರಿಗೆ ಬಂದು ನೆಲೆಸಿದ್ದ. ಈ ನಡುವೆ ಆತನ ಪತ್ನಿ ನಫೀಸಾ ನುಸ್ರತ್ ಕಾಪು ಮಲ್ಲಾರಿನ ನಿವಾಸಿ ಯು.ಎ. ರಶೀದ್ ಎಂಬಾತನೊಂದಿಗೆ ಅಕ್ರಮ ಸಂಬಂಧದಲ್ಲಿರುವುದು ಬೆಳಕಿಗೆ ಬಂದಿತ್ತು. ಈ ವಿಷಯದಲ್ಲಿ ಪತಿ, ಪತ್ನಿಗೆ ಆಗಾಗ ಗಲಾಟೆಯೂ ನಡೆಯುತ್ತಿತ್ತು. ಇದೇ ಕಾರಣದಿಂದಾಗಿ ನಫೀಸಾ, ತನ್ನ ಸ್ನೇಹಿತ ರಶೀದ್ನೊಂದಿಗೆ ಸೇರಿಕೊಂಡು ಪತಿಯ ವಿರುದ್ಧ ಸಂಚು ರೂಪಿಸಿ ಪೋಕೊÕ ಪ್ರಕರಣದಲ್ಲಿ ಸಿಲುಕಿಸಿದ್ದಳು ಎನ್ನಲಾಗಿದೆ.
ಸಂಚು ಬೆಳಕಿಗೆ ಬಂದದ್ದು ಹೇಗೆ?: ಸೈಯದ್ ಮುಸ್ತಕೀಮ್ ಅಹ್ಮದ್ ಜೈಲು ಸೇರಿದ ಬಳಿಕ ಆತನ ಪತ್ನಿ ನಫೀಸಾ ನಸ್ರುತ್ ಸ್ನೇಹಿತ ರಶೀದ್ ಜತೆ ಗುಪ್ತವಾಗಿ ಮದುವೆಯಾಗಿದ್ದು, 2021ರ ಡಿ. 15ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆಯೂ ಕಾಪು ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಕೆ ಗಂಡು ಮಗುವಿಗೆ ಜನ್ಮ ನೀಡಿರುವುದನ್ನು ಖಚಿತ ಪಡಿಸಿದ್ದರು. ಮಾತ್ರವಲ್ಲದೆ ಆಸ್ಪತ್ರೆಯಲ್ಲಿ ಗಂಡನ ಹೆಸರನ್ನು ಯು.ಎ. ರಶೀದ್ ಎಂದು ನಮೂದಿಸಿರುವುದಾಗಿಯೂ ತಿಳಿಸಿದ್ದರು.
ತನಿಖೆ ವೇಳೆ ಆಕೆ ತಾನು ರಶೀದ್ನನ್ನು ಮದುವೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕೈಬರಹದ ಹೇಳಿಕೆ ಕೊಟ್ಟಿದ್ದಳು. ಬಳಿಕ ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.
ವಾದ ಪ್ರತಿವಾದಗಳನ್ನು ಆಲಿಸಿದ ಉಡುಪಿ ಪೋಕೊÕ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯನ್ನು ಆರೋಪದಿಂದ ಖುಲಾಸೆಗೊಳಿಸಿದ್ದಾರೆ. ಉಡುಪಿಯ ನ್ಯಾಯವಾದಿಗಳಾದ ಪಾಂಗಾಳ ಹರೀಶ್ ಶೆಟ್ಟಿ ಮತ್ತು ನಮಿತಾ ಕೆ. ಆರೋಪಿಯ ಪರವಾಗಿ ವಾದಿಸಿದ್ದರು.
ಟಾಪ್ ನ್ಯೂಸ್
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.