![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-415x234.jpg)
ಉಡುಪಿ: ವೃದ್ಧೆಯ ಕುತ್ತಿಗೆಯಿಂದ ಚಿನ್ನಾಭರಣ ಕಳವುಗೈದು ಪರಾರಿಯಾದ ಹೋಂ ನರ್ಸ್
Team Udayavani, Nov 25, 2022, 10:02 PM IST
![ಉಡುಪಿ: ವೃದ್ಧೆಯ ಕುತ್ತಿಗೆಯಿಂದ ಚಿನ್ನಾಭರಣ ಕಳವುಗೈದು ಪರಾರಿಯಾದ ಹೋಂ ನರ್ಸ್](https://www.udayavani.com/wp-content/uploads/2022/11/atradi-620x351.jpg)
ಉಡುಪಿ: ಆತ್ರಾಡಿ, ಮದಗದಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾಗಿದ್ದ ಹೋಂ ನರ್ಸ್ಳನ್ನು ಪೊಲೀಸರು ಬಂಧಿಸಿದ್ದಾರೆ.
ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿಯ ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.
ಅ. 20ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡುತ್ತಿದ್ದರು. ನ. 21ರಂದು ಸಂಜೆ ಸರಸ್ವತಿ ಅವರ ಸರವನ್ನು ಕಳವು ಮಾಡಿ ಯಾರಿಗೂ ಹೇಳದೆ ಮನೆಯಿಂದ ಪರಾರಿಯಾಗಿದ್ದಳು. ನ. 24ರಂದು ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪುತ್ರ ವಸಂತ ಶೆಟ್ಟಿ ಅವರು ದೂರು ದಾಖಲಿಸಿದ್ದು, ತನಿಖೆ ನಡೆಸಿದ ಪೊಲೀಸರು ಅದೇ ದಿನ ಉಡುಪಿಯಲ್ಲಿ ರೇಖಾ ಹೆಬ್ಬಳ್ಳಿಯನ್ನು ಬಂಧಿಸಿದ್ದು, ಕಳವು ಮಾಡಿದ ಸರವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಸ್ಪಿ ಅಕ್ಷಯ ಎಂ., ಎಎಸ್ಪಿ ಸಿದ್ದಲಿಂಗಪ್ಪ, ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುಧಾಕರ್ ನಾಯ್ಕ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ಪಿಎಸ್ಐ ಅನಿಲ್ ಬಿ.ಎಂ., ಸಿಬಂದಿ ಎಎಸ್ಐ ಜಯಂತ, ಸುಂದರ್, ಎಚ್.ಸಿ. ದಯಾನಂದ ಪ್ರಭು, ರಘು, ರಾಘವೇಂದ್ರ, ಕಾಮತ್, ಪಿ.ಸಿ. ಆದರ್ಶ್, ಭೀಮಪ್ಪ, ನಿತಿನ್, ನಬಿ, ಕಾರ್ತಿಕ್, ರಾಜೇಶ್ವರಿ, ಸುರೇಖಾ, ಜ್ಯೋತಿ ನಾಗರತ್ನಾ, ಸುಮಲತಾ, ಜಯಲಕ್ಷ್ಮೀ ಅವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪೂರ್ವಾಪರ ಮಾಹಿತಿ ಪಡೆದುಕೊಳ್ಳಿ
ಹೋಂ ನರ್ಸಿಂಗ್ ಏಜೆನ್ಸಿಗಳು ಕೆಲಸಕ್ಕೆ ನೇಮಿಸುವರ ಬಗ್ಗೆ ಪೂರ್ವಾಪರ ಮಾಹಿತಿಯನ್ನು ಪಡೆದುಕೊಳ್ಳಬೇಕು. ಆದರೆ ಏಜೆನ್ಸಿಯವರು ನಿರ್ಲಕ್ಷ್ಯತನದಿಂದ ಸಿಬಂದಿ ನೇಮಿಸಿಕೊಳ್ಳುವುದರಿಂದ ಈ ರೀತಿಯ ಕೃತ್ಯಗಳು ನಡೆಯುತ್ತವೆ ಎಂದು ಪೊಲೀಸ್ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ. ಏಜೆನ್ಸಿ ನೇಮಿಸಿದ ಸಿಬಂದಿ ಇಂತಹ ಕೃತ್ಯಗಳನ್ನು ನಡೆಸುವುದರಿಂದ ಏಜೆನ್ಸಿಯವರ ಹೆಸರು ಕೂಡ ಹಾಳಾಗುತ್ತದೆ. ಹೀಗಾಗಿ ಈ ಕುರಿತು ನಿಗಾ ವಹಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.
ಟಾಪ್ ನ್ಯೂಸ್
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-150x84.jpg)
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
![Is Ashwin made a hasty decision: Is this how much Kohli is worth in the dressing room?](https://www.udayavani.com/wp-content/uploads/2024/12/ashwin-kogli-150x87.jpg)
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
![1-a-ct](https://www.udayavani.com/wp-content/uploads/2024/12/1-a-ct-150x89.jpg)
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
![10](https://www.udayavani.com/wp-content/uploads/2024/12/10-22-150x80.jpg)
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.