ಉಡುಪಿಯಲ್ಲಿ 5 ಕೋ.ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‌


Team Udayavani, Feb 13, 2022, 4:30 AM IST

Untitled-1

ಸಾಂದರ್ಭಿಕ ಚಿತ್ರ

ಉಡುಪಿ: ಜಿಲ್ಲೆಯ ಮೆಟ್ರಿಕ್‌ ಅನಂತರದ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ  ಐದು ಕೋ.ರೂ. ವೆಚ್ಚದಲ್ಲಿ ಸುಸಜ್ಜಿತವಾದ ನೂತನ ವಸತಿ ನಿಲಯ (ಹಾಸ್ಟೆಲ್‌) ಅಜ್ಜರಕಾಡು ಪರಿಸರದಲ್ಲಿ ನಿರ್ಮಾಣವಾಗಲಿದೆ.

ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಸಾಕಷ್ಟು ಬೇಡಿಕೆಯಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿನಿಯರ 18 ಹಾಸ್ಟೆಲ್‌ ಭರ್ತಿಯಾದ ಅನಂತರವೂ ನೂರಾರು ಅರ್ಜಿಗಳು ಬಾಕಿ ಇವೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಬಹುಮಹಡಿ ಕಟ್ಟಡದ ಮಾದರಿಯಲ್ಲಿ ನೂತನ ಹಾಸ್ಟೆಲ್‌ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಸರಕಾರವೂ ಬಜೆಟ್‌ನಲ್ಲಿ ಇದಕ್ಕೆ ಅನುಮೋದನೆ ನೀಡಲಿದೆ ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ.

200 ವಿದ್ಯಾರ್ಥಿಗಳ ಪ್ರವೇಶ :

ಅಜ್ಜರಕಾಡು ಪರಿಸರದಲ್ಲಿ ಈಗಾಗಲೇ ಲಭ್ಯವಿರುವ ಇಲಾಖೆಯ ಜಮೀನಿನಲ್ಲೇ ಹಾಸ್ಟೆಲ್‌ ನಿರ್ಮಾಣವಾಗಲಿದೆ. ಒಂದೇ ಹಾಸ್ಟೆಲ್‌ನಲ್ಲಿ ಸುಮಾರು 200 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಐದು ಮಹಡಿಯ ಕಟ್ಟಡ ಇದಾಗಿರಲಿದೆ. ವಿದ್ಯಾರ್ಥಿನಿಯರ ಅಧ್ಯಯನಕ್ಕೆ ಅನುಕೂಲವಾಗುವಂತೆ ಕಂಪ್ಯೂಟರ್‌ ಕೊಠಡಿ, ಗ್ರಂಥಾಲಯ, ಸಭಾಂಗಣ, ಕ್ರೀಡಾ ಚಟುವಟಿಕೆಗೆ ಬೇಕಾದ ಪರಿಕರ ಹೀಗೆ ಎಲ್ಲವೂ ಇರಲಿದೆ.

ತಾತ್ಕಾಲಿಕ ವ್ಯವಸ್ಥೆ:

ಈ ವರ್ಷ ಅರ್ಜಿ ಸಲ್ಲಿಸಿ, ಹಾಸ್ಟೆಲ್‌ ಸಿಗದೆ ಇರುವ ವಿದ್ಯಾರ್ಥಿನಿಯರಿಗೆ ತೆಂಕನಿಡಿ ಯೂರಿನಲ್ಲಿರುವ ಸರಕಾರಿ ಕಟ್ಟಡದಲ್ಲಿ 50 ವಿದ್ಯಾರ್ಥಿನಿಯರಿಗೆ, ಮಣಿಪಾಲದ ರಾಜೀವ ನಗರದಲ್ಲಿರುವ ಸರಕಾರಿ ಪಾಲಿಟೆಕ್ನಿಕ್‌ ಕಟ್ಟಡ ದಲ್ಲಿ 75 ವಿದ್ಯಾರ್ಥಿನಿಯರಿಗೆ ತಾತ್ಕಾಲಿಕವಾಗಿ ಹಾಸ್ಟೆಲ್‌ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕೆ ಸರಕಾರದ ಅನುಮತಿಯೂ ದೊರೆತಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿ ಯರ ಪಟ್ಟಿ ಇಲಾಖೆಯಲ್ಲಿ ಲಭ್ಯವಿದೆ. ಅದರಂತೆ ಮೆರಿಟ್‌ ಆಧಾರದಲ್ಲಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಮುಂದಿನ ವರ್ಷವೂ ಈ ಎರಡು ಹಾಸ್ಟೆಲ್‌ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೊಸ ಹಾಸ್ಟೆಲ್‌ಗೆ ಪ್ರಸ್ತಾವನೆ :

ಈ ಬಾರಿ ಬಜೆಟ್‌ನಲ್ಲಿ ಜಿಲ್ಲೆಗೆ ಮೂರು ಹಾಸ್ಟೆಲ್‌ ಮಂಜೂರಾಗುವ ಸಾಧ್ಯತೆಯಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಅಜ್ಜರಕಾಡು ಪರಿಸರದಲ್ಲಿ ಐದು ಕೋ.ರೂ. ವೆಚ್ಚದಲ್ಲಿ ಒಂದು ಹಾಸ್ಟೆಲ್‌, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ತಲಾ ಒಂದೊಂದು ಹಾಸ್ಟೆಲ್‌ಗೆ ಅನುಮತಿ ಸಿಗುವ ಸಾಧ್ಯತೆಯಿದೆ. ಬ್ರಹ್ಮಾವರ ಹಾಗೂ ಕುಂದಾಪುರದಲ್ಲೂ ಹಾಸ್ಟೆಲ್‌ ನಿರ್ಮಾಣಕ್ಕೆ ಬೇಕಾದ ಜಾಗವನ್ನು ಗುರುತಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಉಡುಪಿಯ ಅಜ್ಜರಕಾಡು  ಪರಿಸರದಲ್ಲಿ ಐದು ಕೋಟಿ  ರೂ. ವೆಚ್ಚದಲ್ಲಿ ಮೆಟ್ರಿಕ್‌ ಅನಂತರ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ ನಿರ್ಮಾಣ ಮಾಡಲಿದ್ದೇವೆ. ಇದರಿಂದ ಜಿಲ್ಲೆಯ ಬಡ ಕುಟುಂಬದ ವಿದ್ಯಾರ್ಥಿನಿಯರಿಗೆ ಇನ್ನಷ್ಟು ಅನುಕೂಲವಾಗಲಿದೆ. -ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ

ಉಡುಪಿ ನಗರ ವ್ಯಾಪ್ತಿಯಲ್ಲಿ  ಇಲಾಖೆಯ ಜಮೀನು ಇರುವುದರಿಂದ ಬಹುಮಹಡಿ ಕಟ್ಟಡದ ಮಾದರಿಯಲ್ಲಿ ಹಾಸ್ಟೆಲ್‌ ನಿರ್ಮಾಣಕ್ಕೆ ಪ್ರಸ್ತಾವನೆ ಕಳುಹಿಸದ್ದೇವೆ. ಇಲಾಖೆಯಿಂದ ನೂತನವಾಗಿ ನಿರ್ಮಾಣವಾಗಲಿರುವ ಹಾಸ್ಟೆಲ್‌ಗೆದಾನಿಗಳ ಸಹಕಾರವನ್ನು ಇದಕ್ಕೆ ಪಡೆಯುವ ಸಾಧ್ಯತೆಯಿದೆ.  -ದೇವೀಂದ್ರ ಬಿರಾದಾರ, ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. 

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.