Udupi;ಸುನಿಲ್ ಕುಮಾರ್ ಧರ್ಮದ ಹೆಸರಲ್ಲಿ ಸುಳ್ಳುಹೇಳಿ ಗೆದ್ದಿದ್ದಾರೆ: ಮುನಿಯಾಲ್ ಉದಯ ಶೆಟ್ಟಿ
ಮಹಜರು ಮತ್ತು ಮೂರ್ತಿ ತೆರವಿಗೆ ನಾನು ಮುಸ್ಲಿಮರನ್ನು ಕರೆದುಕೊಂಡು ಹೋಗಿಲ್ಲ
Team Udayavani, Aug 5, 2024, 5:24 PM IST
ಉಡುಪಿ: ಜನಗಳ ಧಾರ್ಮಿಕ ಭಾವನೆಯನ್ನು ಕದಡಿ ಪರಶುರಾಮ ಥೀಂ ಪಾರ್ಕ್ (Parashurama Theme Park) ನಿರ್ಮಾಣ ಮಾಡಲಾಗಿದೆ. ಸುನಿಲ್ ಕುಮಾರ್ (Sunil Kumar) ಅವರು ಶಾಸಕನಾಗಲು ಸುಳ್ಳು ಹೇಳಿ ನಕಲಿ ಮೂರ್ತಿ ಸೃಷ್ಟಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ (Muniyal Uday Kumar Shetty) ಆರೋಪಿಸಿದರು.
ಉಡುಪಿಯಲ್ಲಿ ಸೋಮವಾರ (ಆ.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ ಮರ್ಯಾದೆ ಇದ್ದರೆ ಸುನಿಲ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ದೇವರ ಹೆಸರಲ್ಲಿ, ಧಾರ್ಮಿಕತೆಗೆ ಮೋಸ ಮಾಡಬಾರದು ಎಂದು ಕಿಡಿಕಾರಿದರು.
ಒಂದು ವರ್ಷದ ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಿದೆ. ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡುವಾಗ ಮನಸ್ಸಿಗೆ ಘಾಸಿಯಾಗುತ್ತದೆ. ಪರಶುರಾಮನ ಮೂರ್ತಿಯ ಬಿಡಿ ಭಾಗಗಳನ್ನು ಪೊಲೀಸರು ವಶಪಡಿಸಿದ್ದಾರೆ. ಅರ್ಧ ಮೂರ್ತಿ ಸಿದ್ಧ ಇರುವಾಗಲೇ, ಮತ್ತೆ ಎರಡು ಕಾಲು ತಯಾರಿಸಿದ್ದು ಯಾಕೆ ಎಂದು ತಿಳಿಯುತ್ತಿಲ್ಲ. ಹಾಗಾದರೆ ಬೆಟ್ಟದ ಮೇಲಿರುವ ಅರ್ಧಮೂರ್ತಿ ಕೂಡ ನಕಲಿಯೇ? ಎಂದು ಪ್ರಶ್ನಿಸಿದರು.
ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ 2.50 ಕೋಟಿ ಖರ್ಚು ಮಾಡಿದ್ದಾರೆ. ಕಂಚಿನ ಪ್ರತಿಮೆ ವೆಚ್ಚಕ್ಕಿಂತ ಹೆಚ್ಚು ಉದ್ಘಾಟನೆಗೆ ಖರ್ಚಾಗಿದೆ. ವರ್ಕ್ ಆರ್ಡರ್ ಗಿಂತ ಮೊದಲು ಒಂದು ಕೋಟಿ ಅಡ್ವಾನ್ಸ್ ಹಣ ಕೊಡಲಾಗಿದೆ. ಕಾನೂನು ಗಾಳಿಗೆ ತೂರಿ ಗೋಮಾಳದಲ್ಲಿ ಥೀಂ ಪಾರ್ಕ್ ನಿರ್ಮಿಸಲಾಗಿದೆ. ಫೈಬರ್ ನ ನಕಲಿ ಮೂರ್ತಿ ಸೃಷ್ಟಿಸಿ ಹಿಂದೂ ಧರ್ಮದ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ದೂರಿದರು.
ಪೊಲೀಸರು ಮಹಜರಿಗೆ ಕರೆದಕ್ಕೆ ನಾನು ಬೆಂಗಳೂರಿನ ಆರ್ಟ್ ಗ್ಯಾಲರಿಗೆ ಹೋಗಿದ್ದೇನೆ. ಮಹಜರು ಪ್ರಕ್ರಿಯೆಗೆ ಸಾಮಾನ್ಯ ಮನುಷ್ಯನಾಗಿ ಹೋಗಿದ್ದೇನೆ. ನನ್ನ ಕಾರು ಚಾಲಕ ಲಿಂಗಾಯತ, ಮತ್ತೋರ್ವ ಮೊಗವೀರ ಸಮುದಾಯದ ಗೆಳೆಯ. ಮಹಜರು ಮತ್ತು ಮೂರ್ತಿ ತೆರವಿಗೆ ನಾನು ಮುಸ್ಲಿಮರನ್ನು ಕರೆದುಕೊಂಡು ಬಂದಿಲ್ಲ ಎಂದು ಹೇಳಿದರು.
ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ್ ದೊಡ್ಡ ಡ್ರಾಮಾ ಕ್ರಿಯೇಟರ್. ಕೃಷ್ಣ ನಾಯ್ಕ್ ಚಡಪಡಿಸುವಿಕೆ ವರ್ತನೆ ನೋಡಿ ನಾನು ಅಲ್ಲಿಂದ ವಾಪಾಸ್ ಬಂದಿದ್ದೇನೆ. ಅವರು ಬಂದು ನಮ್ಮದು ತಪ್ಪಾಯ್ತು ಚುನಾವಣೆ ಗೆಲ್ಲಲು ನಾವು ಹೀಗೆ ಮಾಡಿದ್ದೇವೆ ಎಂದು ಹೇಳಲಿ. ನಾಳೆ ಬಂದರೂ ಅವರನ್ನು ಸ್ವಾಗತಿಸಿ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪ್ರಯತ್ನ ಪಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.