![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Oct 11, 2023, 12:17 AM IST
ಉಡುಪಿ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶುಕ್ರವಾರದ ಕೋಟೆ ಬಾಗಿಲು ಹೊಸ ಬೀದಿಯ
ಮಹಾಲಕ್ಷಿ ಮದ್ದರ ಲಕ್ಕಮ್ಮ ದೇವಸ್ಥಾನ ಜೀರ್ಣೋದ್ಧಾರ ಕಾರ್ಯವು ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಈ ಪ್ರಯುಕ್ತ ನಡೆದ ಸಭೆಯಲ್ಲಿ ಮದರ ಲಕ್ಕಮ್ಮ ಟ್ರಸ್ಟ್ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷರನ್ನಾಗಿ ದೇವಾಲಯದ ಭಕ್ತರು ಮತ್ತು ಆಡಳಿತ ಮಂಡಳಿ ಸದಸ್ಯರು ಸರ್ವಾನುಮತದಿಂದ ಶ್ರೀ ರಮಾನಂದ ಗುರೂಜಿ ಅವರನ್ನು ನೇಮಕ ಮಾಡಿದ್ದಾರೆ.
ದೇವಸ್ಥಾನದ ಮುಖ್ಯಸ್ಥ ಲಕ್ಷ್ಮೀಶ್ ಮತ್ತು ಇತರ ಸದಸ್ಯರು ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತಕ್ಕೆ ಭೇಟಿ ನೀಡಿ ರಮಾನಂದ ಗುರೂಜಿ ಅವರನ್ನು ಗೌರವಿಸಿದರು.
ಜೀರ್ಣಾವಸ್ಥೆಯಲ್ಲಿರುವ ದೇಗುಲಗಳ ಜೀರ್ಣೋದ್ಧಾರ ಇಡೀ ಊರಿಗೆ ಮಾತ್ರವಲ್ಲ ನಾಡಿಗೆ ಒಳಿತನ್ನು ಮಾಡಲಿದೆ. ಈ ಐತಿಹಾಸಿಕ ಕಾರ್ಯಕ್ಕೆ ಎಲ್ಲರ ಸಂಕಲ್ಪ ವಿಕಲ್ಪವಾಗದೆ ಮುನ್ನಡೆಸಲಿ ಎಂದು ಗುರೂಜಿ ಅವರು ಆಶಿಸಿ ಜೀರ್ಣೋದ್ಧಾರಕ್ಕೆ ಬೇಕಾದ ಎಲ್ಲ ರೀತಿಯ ಮಾರ್ಗದರ್ಶನ, ಸಲಹೆ, ಸೂಚನೆ ನೀಡುವುದಾಗಿ ಆಶೀರ್ವದಿಸಿದರು.
ಟ್ರಸ್ಟ್ನ ಅಧ್ಯಕ್ಷ ರಂಗಸ್ವಾಮಿ ಸಿ.ಎನ್., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಿ.ನೀ. ಪುರುಷೋತ್ತಮ, ಉಪಾಧ್ಯಕ್ಷ ವೆಂಕಟೇಶ್ ಎಚ್.ಆರ್., ಟ್ರಸ್ಟಿಗಳಾದ ನಾಗರತ್ನಾ, ರವಿಕುಮಾರ್ ಸಿ.ಎನ್., ಶಾಂತಾ, ಅಕ್ಷತಾ, ಸಮಿತಿ ಉಪಾಧ್ಯಕ್ಷರಾದ ಗುರುಮೂರ್ತಿ ಸಿ.ಟಿ., ರಂಗರಾಜು, ಮರುಳ ಸಿದ್ದೇಶ್ವರ ಸ್ವಾಮಿ, ಯಶವಂತ ಶೆಟ್ಟಿ, ಧವಳಶ್ರೀ, ಬ್ರಿತಿವರ್ದಿನಿ ಉಪಸ್ಥಿತರಿದ್ದರು.
ಆದಿಶಕ್ತಿ ಕ್ಷೇತ್ರದ ಉಸ್ತುವಾರಿಗಳಾದ ಕುಸುಮಾ ನಾಗರಾಜ್, ಸ್ವಸ್ತಿಕ್ ಆಚಾರ್ಯ, ಕ್ಷೇತ್ರ ಪುರೋಹಿತರ ನೇತೃತ್ವದಲ್ಲಿ ಎಲ್ಲರಿಗೂ ಪ್ರಸಾದ ವಿತರಿಸಿ, ಸಮ್ಮಾನಿಸಲಾಯಿತು.
You seem to have an Ad Blocker on.
To continue reading, please turn it off or whitelist Udayavani.