Udupi; ಮನೆಯ ಬಾಗಿಲು ಮುರಿದು 2 ಕೆಜಿಗೂ ಹೆಚ್ಚು ಚಿನ್ನಾಭರಣ ಕಳವು!
7 ಕೆಜಿ ಬೆಳ್ಳಿ ಸೇರಿ 73 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಖದೀಮರು...
Team Udayavani, Oct 9, 2023, 8:50 PM IST
ಉಡುಪಿ: ಶಿವಳ್ಳಿ ಗ್ರಾಮದಲ್ಲಿ ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಅ. 8 ರ ಮಧ್ಯಾವಧಿಯಲ್ಲಿ ಕೃತ್ಯ ಎಸಗಲಾಗಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.