ಉಡುಪಿ: ಎಚ್ಚರ-ಸಂತೆಕಟ್ಟೆಯಲ್ಲಿವೆ ಯಮರೂಪಿ ಗುಂಡಿಗಳು


Team Udayavani, Jun 28, 2024, 5:33 PM IST

ಉಡುಪಿ: ಎಚ್ಚರ-ಸಂತೆಕಟ್ಟೆಯಲ್ಲಿವೆ ಯಮರೂಪಿ ಗುಂಡಿಗಳು

ಉಡುಪಿ: ಸಂತೆಕಟ್ಟೆ ವೆಹಿಕ್ಯೂಲರ್‌ ಓವರ್‌ಪಾಸ್‌ ಪಾಸ್‌ ಕಾಮಗಾರಿ ಪ್ರಗತಿಯಲ್ಲಿದ್ದು, ಈಗಾಗಲೆ ಹೊಸದಾಗಿ ನಿರ್ಮಾಣಗೊಂಡು ಒಂದು ಬದಿ ರಸ್ತೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದರೂ ಯಮರೂಪದ ಗುಂಡಿಗಳು ಸವಾರರಿಗೆ ನಿತ್ಯ ಸಂಕಷ್ಟ ತಂದೊಡ್ಡುತ್ತಿದೆ.

ಉಡುಪಿಯಿಂದ ಕುಂದಾಪುರಕ್ಕೆ ಸಾಗುವಾಗ ಹೊಸ ರಸ್ತೆಗೆ ಸೇರುವ ಮೊದಲು, ಹೊಸ ರಸ್ತೆ ಕೊನೆಯಾಗುವಲ್ಲಿ ಎರಡು ಕಡೆ ಬೃಹತ್‌ ಗುಂಡಿಗಳು ವಾಹನ ಸವಾರರಿಗೆ ಸಾಕಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಸ್ವಲ್ಪ ಎಚ್ಚರ ತಪ್ಪಿದರೂ ಆಪತ್ತು ಕಟ್ಟಿಟ್ಟ ಬುತ್ತಿ.

ಇಲ್ಲಿನ ಗುಂಡಿಗಳು ದಿನದಿಂದ ದಿನಕ್ಕೆ ದೊಡ್ಡ ಗಾತ್ರವಾಗುತ್ತಿದೆ. ಕಾರು, ಬಸ್‌, ದ್ವಿಚಕ್ರರ ವಾಹನ ಸವಾರರು ಗುಂಡಿಗಳ ಅರಿವಿಲ್ಲದೆ ಇಲ್ಲಿ ವಾಹನಗಳು ಚಲಾಯಿಸುತ್ತಿದ್ದಾರೆ. ಮಳೆ ನೀರು ನಿಂತಿರುವುದರಿಂದ ಗುಂಡಿಗಳು ಗೋಚರವಾಗುತ್ತಿಲ್ಲ. ಎಂದಿನ ಎಕ್ಸ್ ಪ್ರೆಸ್‌ ವೇಗದಂತೆ ಇಲ್ಲಿಯೂ ವಾಹನ ಚಲಾಯಿಸುತ್ತಾರೆ. ವಾಹನದ ಚಕ್ರ ಗುಂಡಿಗೆ ಬೀಳುತ್ತಿದ್ದಂತೆ ದಡಕ್‌ ಎಂಬ
ಶಬ್ದದೊಂದಿಗೆ ಟಯರ್‌, ಡಿಸ್ಕ್ ಸಹಿತ ವಾಹನದ ಸಂಪೂರ್ಣ ಸಸ್‌ಪೆನ್ಶನ್‌ ವ್ಯವಸ್ಥೆ ಹಾನಿಗೀಡಾಗುತ್ತಿದೆ. ಅಲ್ಲದೆ ದ್ವಿಚಕ್ರ
ವಾಹನ ಸವಾರರು ಸ್ಕಿಡ್‌ ಆಗಿ ನಿಯಂತ್ರಣ ತಪ್ಪಿ ಬೀಳುವ ಸಾಧ್ಯತೆ ದಟ್ಟವಾಗಿದೆ.

ಕ್ರಮ ತೆಗೆದುಕೊಳ್ಳದ ರಾ. ಹೆ. ಪ್ರಾಧಿಕಾರ
ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಸವಾರರ ಸುರಕ್ಷತೆ ಬಗ್ಗೆ ಹೆದ್ದಾರಿ ಪ್ರಾಧಿಕಾರ ಮೊದಲು ಕ್ರಮವಹಿಸಬೇಕು. ಆದರೆ ರಸ್ತೆಗಳ ಗುಂಡಿಗಳನ್ನು ತಾತ್ಕಾಲಿಕ ನೆಲೆಯಲ್ಲಾದರೂ ವೆಟ್‌ಮಿಕ್ಸ್‌ ಹಾಕಿ ವ್ಯವಸ್ಥಿತಗೊಳಿಸಿದಲ್ಲಿ ಸುಗಮ ಸಂಚಾರಕ್ಕೆ
ಅನುಕೂಲವಾಗುತ್ತದೆ. ಇಲ್ಲದಿದ್ದರೆ ಇನ್ನಷ್ಟು ಅಪಘಾತ ಸಂಭವಿಸಿ, ಸುಗಮ ಸಂಚಾರಕ್ಕೆ ಮತ್ತಷ್ಟು ಸಮಸ್ಯೆಯಾಗುವ ಸಾಧ್ಯತೆ
ಇದೆ. ಇಷ್ಟೆಲ್ಲಾ ಆದರೂ ಹೆದ್ದಾರಿ ಪ್ರಾಧಿಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸ್ಥಳೀಯರು, ವಾಹನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸವಾರರಿಗೆ ಸಮಸ್ಯೆಯಾಗದಂತೆ ಕ್ರಮ
ಸಂತೆಕಟ್ಟೆ ಹೊಸ ರಸ್ತೆ ಆರಂಭದಲ್ಲಿ, ಕೊನೆಯಲ್ಲಿ ಬಿದ್ದಿರುವ ಗುಂಡಿಗಳಿಗೆ ತಾತ್ಕಲಿಕ ತೇಪೆ ನಡೆಸಲಾಗಿದ್ದು, ಹೆಚ್ಚಿನ ಮಳೆಯಿಂದಾಗಿ ಕೊಚ್ಚಿ ಹೋಗಿದೆ. ಸವಾರರಿಗೆ ಸಮಸ್ಯೆಯಾಗದಂತೆ ಗುಂಡಿಗಳನ್ನು ತಾತ್ಕಾಲಿಕ ನೆಲೆಯಲ್ಲಿ ವ್ಯವಸ್ಥಿತವಾಗಿ ತೇಪೆ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ರಾ. ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.