Udupi: 10 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉಡುಪಿ ಜಿಲ್ಲಾ ಪೊಲೀಸ್ ಶ್ವಾನ ‘ಐಕಾನ್’
Team Udayavani, Aug 30, 2024, 2:38 PM IST
ಉಡುಪಿ: ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನದಳದಲ್ಲಿ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ಐಕಾನ್ ನಿವೃತ್ತಿ ಹೊಂದಿದೆ.
ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಶ್ವಾನವು ಆಗಸ್ಟ್ 5, 2014 ರಂದು ಜನಿಸಿದ್ದು, ನವೆಂಬರ್ 5, 2014 ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿದೆ. ಎಪಿಸಿ. ಗಣೇಶ ಎಂ. 1444 ರವರು ಹ್ಯಾಂಡ್ಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಸಿ.ಎ.ಆರ್ ಸೌತ್ ಆಡುಗೋಡಿಯಲ್ಲಿ ಸ್ಫೋಟಕ ಪತ್ತೆ ಬಗ್ಗೆ 09 ತಿಂಗಳು ಕಠಿಣ ತರಬೇತಿಯನ್ನು ಪಡೆದು ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು, ಈ ಶ್ವಾನವು ಗೌರವಾನ್ವಿತ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ ಗಣ್ಯಾತಿಗಣ್ಯರ ಆಗಮನದ ಸಂಧರ್ಭದಲ್ಲಿ ಹಾಗೂ ಏರ್ ಶೋ, ಜಿ-20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ, ಸಾಗರ ಕವಚ ಹಾಗೂ ಪ್ರತಿನಿತ್ಯದ ಕರ್ತವ್ಯದಲ್ಲಿ ಮಲ್ಪೆ ಬಂದರು, ಕಾಪು ಲೈಟ್ಹೌಸ್, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ನಾಗಾರ್ಜುನ, ಮೈಸೂರು ದಸರಾ, ನ್ಯಾಷನಲ್ ನಾರ್ಕೋಟಿಕ್ಸ್ ಕಾನ್ಫರೆನ್ಸ್, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್ ಪತ್ತೆ ಇತ್ಯಾದಿ ಸಂಧರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿತ್ತು.
ಫೆಬ್ರವರಿ 22, 2020 ರಂದು ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬೆಳ್ಳಿಯ ಪದಕ ಪಡೆದು, ಉಡುಪಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆಗೆ ಗೌರವವನ್ನು ತಂದು ಕೊಟ್ಟ ಕೀರ್ತಿ ಇದಕ್ಕಿದೆ.
ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರಾದ ಡಾ|| ಅರುಣ್ ಕೆ. ಐ.ಪಿ.ಎಸ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಕೆ.ಎಸ್.ಪಿ.ಎಸ್., ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ಕೆ.ಎಸ್.ಪಿ.ಎಸ್ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ ಜಿ. ಕೆ.ಎಸ್.ಪಿ.ಎಸ್, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ನಿರೀಕ್ಷಕರಾದ ಶ್ರೀ ಎಸ್. ರವಿಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಇದನ್ನೂ ಓದಿ: Gujarat Floods: ಪ್ರವಾಹದಿಂದ ಮನೆಯ ಮೇಲೆ ರಕ್ಷಣೆ ಪಡೆದ ಮೊಸಳೆ… ಜೀವ ಭಯದಲ್ಲಿ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಕೊಡವೂರು ಹಿರಣ್ಯಧಾಮ ಲೇಔಟ್; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ
Udupi: ಜಿಲ್ಲೆಯಲ್ಲಿ ಮಾದಕ ಜಾಲ ವ್ಯಾಪಕ; ವರ್ಷದಲ್ಲಿ 28 ಮಾರಾಟ, 223 ಸೇವನೆ ಪ್ರಕರಣ
Parashurama Statue; ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಸಮಾಜ ಬಹಿಷ್ಕರಿಸಬೇಕು
Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು
Server Problem: ಗೃಹಬಳಕೆ ಅಡುಗೆ ಅನಿಲ ಪೂರೈಕೆ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.