Udupi; ಸಹಕಾರ ನೀತಿಯಲ್ಲಿ ಏಕರೂಪಿ ತಂತ್ರಜ್ಞಾನ: ಸುರೇಶ್ ಪ್ರಭು
Team Udayavani, Aug 11, 2024, 10:16 PM IST
ಉಡುಪಿ: ದೇಶದಲ್ಲಿ ಜಾರಿಗೆ ತರಲಾಗುವ ರಾಷ್ಟ್ರೀಯ ಸಹಕಾರಿ ನೀತಿಯಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಏಕರೂಪಿ ತಂತ್ರಜ್ಞಾನದ ಅಳವಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ಹೊಸ ರಾಷ್ಟ್ರೀಯ ಸಹಕಾರಿ ನೀತಿಯ ರಚನೆ ಸಮಿತಿ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ಸುರೇಶ್ ಪಿ.ಪ್ರಭು ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಸತ್ಕಾರ ಕೂಟದಲ್ಲಿ ಪಾಲ್ಗೊಂಡು ಮಾತನಾಡಿದರು.
ಭವಿಷ್ಯದ ಭಾರತದಲ್ಲಿ ಸಹಕಾರಿ ಕ್ಷೇತ್ರವು ಆರ್ಥಿಕ, ವಾಣಿಜ್ಯಿಕ, ಔದ್ಯಮಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಸಹಕಾರಿ ಕ್ಷೇತ್ರದಲ್ಲಿ ದೇಶವ್ಯಾಪಿ ಏಕರೂಪಿ ತಂತ್ರಜ್ಞಾನ ಜಾರಿಗೆ ತಂದು ಭವಿಷ್ಯದ ಆರ್ಥಿಕತೆಯ ನಾಯಕತ್ವ ವಹಿಸಲು ಸಹಕಾರಿ ಕ್ಷೇತ್ರವನ್ನು ಸಜ್ಜುಗೊಳಿಸಲಾಗುವುದು ಎಂದರು.
ಸಹಕಾರ ಭಾರತಿ ಉಡುಪಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಅವರು ಸುರೇಶ್ ಪ್ರಭು, ಉಮಾ ಸುರೇಶ್ ಪ್ರಭು ದಂಪತಿ ಸಮ್ಮಾನಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.ಸಹಕಾರ ಭಾರತಿ ವತಿಯಿಂದ ರಾಷ್ಟ್ರೀಯ ಮತ್ಸ್ಯ ಪ್ರಕೋಷ್ಠದ ಸಹ ಸಂಚಾಲಕ ಮಂಜುನಾಥ ಎಸ್.ಕೆ. ಅವರು, ನೂತನ ಸಹಕಾರಿ ನೀತಿಯಲ್ಲಿ ಹಾಲು ಉತ್ಪಾದಕರ ಸಂಘಗಳಿಗೆ ವಿವಿಧೋದ್ದೇಶ ಹೈನುಗಾರಿಕಾ ಸಂಘಗಳಾಗಿ ಪರಿವರ್ತಿಸಲು ಅವಕಾಶ, ಕೇಂದ್ರ ಸರಕಾರದಿಂದ ರೈತರ ಖಾತೆಗಳಿಗೆ ನೇರವಾಗಿ ಪ್ರತಿ ಲೀಟರ್ ಹಾಲಿಗೆ ಐದು ರೂ. ಪ್ರೋತ್ಸಾಹ ಧನ, ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಸಹಕಾರಿ ನ್ಯಾಯಾಲಯಗಳ ಸ್ಥಾಪನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೇಂದ್ರ ಸರಕಾರದಿಂದ ನಿರ್ವಹಿಸಲ್ಪಡುವ ಪ್ರತ್ಯೇಕ ರೈತ ಜನೋಪಯೋಗಿ ಕೇಂದ್ರಗಳ ಸ್ಥಾಪನೆ ಮೊದಲಾದ ವಿಚಾರಗಳನ್ನು ಅಳವಡಿಸಬೇಕೆಂದು ಮನವಿ ಸಲ್ಲಿಸಿದರು.
ಜಿಲ್ಲಾ ಸಹಕಾರ ಭಾರತಿ ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ, ಜಿಲ್ಲಾ ಸಹಕಾರ ಭಾರತಿ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳಾದ ರವೀಂದ್ರ ನಾಯಕ್ ನೀರೆ, ಮಧುಸೂದನ ನಾಯಕ್ ಭೈರಂಜೆ, ಗಿರೀಶ್ ಪೈ ಬ್ರಹ್ಮಾವರ, ಮುರಳೀಧರ ಪೈ ಕಟಪಾಡಿ, ವಿನಯ ಶೆಟ್ಟಿ ನೀರೆ, ವಿವೇಕ್ ಶೆಟ್ಟಿ ಎರ್ಲಪಾಡಿ, ಸತೀಶ್ ಬ್ರಹ್ಮಾವರ, ಪ್ರಕಾಶ್ ಸುವರ್ಣ ಕಟಪಾಡಿ, ಪ್ರಶಾಂತ್ ಕುಮಾರ್ ಶೀರೂರು, ರಘುರಾಮ ಮರಕಾಲ, ನ್ಯಾಯವಾದಿ ಸಹಕಾರಿ ಸಂಘದ ಸದಾಶಿವ ಶೆಟ್ಟಿ, ಪದ್ಮನಾಭ ಮೊದಲಾದವರು ಭಾಗವಹಿಸಿದ್ದರು. ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಠದ ಸಂಚಾಲಕ ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿ, ನಿರೂಪಿಸಿದರು. ಕಾರ್ಕಳ ಪಿಕಾರ್ಡ್ ಬ್ಯಾಂಕಿನ ನಿರ್ದೇಶಕ ರಘುವೀರ ಶೆಣೈ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.