ಉಡುಪಿ ವೇದವಿತ್ ಪಿಯು ಕಾಲೇಜು: ಶೈಕ್ಷಣಿಕ ಕಾರ್ಯಾಗಾರ
Team Udayavani, Apr 24, 2019, 6:10 AM IST
ಉಡುಪಿ: ನೂತನವಾಗಿ ಆರಂಭಗೊಳ್ಳಲಿರುವ ವೇದವಿತ್ ಪ.ಪೂ.ಕಾಲೇಜಿನಲ್ಲಿ “10ನೇ ತರಗತಿ ಬಳಿಕ ವಿದ್ಯಾರ್ಥಿಗಳಿಗೆ ಮುಂದೇನು?’ ಎಂಬುದರ ಆತಂಕ ನಿವಾರಿಸಲು ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನಡೆಯಿತು.
ತ್ರಿಶಾ ಕ್ಲಾಸಸ್ನ ಸ್ಥಾಪಕ ಸಿ.ಎ. ಗೋಪಾಲಕೃಷ್ಣ ಭಟ್, ಅಕ್ಷರ ಇನ್ಸ್ಟಿಟ್ಯೂಟ್ನ ಸ್ಥಾಪಕ ಪೃಥ್ವಿರಾಜ್ ಸಾಲ್ಯಾನ್, ಸಂಜನಾ ನಿಂಜೂರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹನುಮಾನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪಿ. ವಿಲಾಸ್ ನಾಯಕ್, ಪಿ.ಜಿ. ನಾಯಕ್, ವೀಣಾ ಜಿ. ನಾಯಕ್ ಉಪಸ್ಥಿತರಿದ್ದರು.
ಈ ಕಾಲೇಜು ಹನುಮಾನ್ ಸಂಸ್ಥೆಯ ಭಾಗವಾದ ಹನುಮಾನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿದೆ. 21 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ತ್ರಿಶಾ ಕ್ಲಾಸಸ್ನ ಶೈಕ್ಷಣಿಕ ಒಡಬಂಡಿಕೆಯೊಂದಿಗೆ ಸಂಸ್ಥೆ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಲಿದೆ.
ಕಾಲೇಜು ವಿಜ್ಞಾನ, ವಾಣಿಜ್ಯ ವಿಭಾಗಗಳನ್ನು ಹೊಂದಿದ್ದು ಹವಾನಿಯಂತ್ರಿತ ತರಗತಿ ಕೋಣೆಗಳು, ಸಾಮಾನ್ಯ ಮತ್ತು ಹವಾನಿಯಂತ್ರಿತ ವಸತಿ ನಿಲಯದ ವ್ಯವಸ್ಥೆಗಳಿವೆ.
ಅತ್ಯಾಧುನಿಕ ವ್ಯವಸ್ಥೆಯ ಲ್ಯಾಬೋರೇಟರಿ, ಗ್ರಂಥಾಲಯ, ಸೌಲಭ್ಯ ಹೊಂದಲಿದೆ. 2019-20ರ ಪ್ರವೇಶಾತಿ ಈಗಾಗಲೇ ಆರಂಭಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.