ಉದ್ಯಾವರ: ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು
ಬೃಹತ್ ಕಂಬದ ಬೀಮ್ನೊಳಗೆ ಸಿಕ್ಕಿ ಸಂಪೂರ್ಣ ನಜ್ಜು ಗುಜ್ಜು
Team Udayavani, Jun 14, 2024, 7:45 PM IST
ಕಾಪು: ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ.
ಬೆಳಗ್ಗಿನ ಜಾವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಭಾರತದ ಮೂಲದ ಮಹಿಳೆ ರೈಲಿನಿಂದ ಬಿದ್ದು ಅಥವಾ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರ ಬೇಕೆಂದು ಶಂಕಿಸಲಾಗಿದೆ.
ಮಹಿಳೆಯ ಮೃತ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು ಢಿಕ್ಕಿಯ ರಭಸಕ್ಕೆ ರೈಲ್ವೇ ಟ್ರ್ಯಾಕ್ ಮತ್ತು ಹೊಳೆಗೆ ಹಾಕಿರುವ ಬೃಹತ್ ಕಂಬದ ಬೀಮ್ನೊಳಗೆ ಹೋಗಿ ಬಿದ್ದಿದೆ.
ಸಂಪೂರ್ಣ ಅಪ್ಪಚ್ಚಿಯಾಗಿದ್ದ ಮಹಿಳೆಯ ಮೃತದೇಹವನ್ನು ಕಾಪು ಪೊಲೀಸರು ಮತ್ತು ರೈಲ್ವೇ ಪೊಲೀಸರ ಉಪಸ್ಥಿತಿಯಲ್ಲಿ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬುಲೆನ್ಸ್ ಸಿಬಂದಿ ನಾಗರಾಜ್ ನೇತೃತ್ವದಲ್ಲಿ ಮೇಲಕ್ಕೆತ್ತಿ, ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಲಾಗಿದೆ.
ಕಾಪು ಎಸ್ಸೈ ಅಬ್ದುಲ್ ಖಾದರ್ ಮತ್ತು ಸಿಬಂದಿಗಳು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ
ಮೃತ ಮಹಿಳೆಯನ್ನು ಉತ್ತರ ಭಾರತ ಮೂಲದ ಕಾರ್ಮಿಕ ಮಹಿಳೆಯಾಗಿರಬೇಕೆಂದು ಸಂಶಯಿಸಲಾಗಿದೆ. ಕುತ್ತಿಗೆಯಲ್ಲಿ ತಾಳಿ ಸರ ಹೊಂದಿದ್ದ ಮಹಿಳೆ ನೈಟಿ ಧರಿಸಿದ್ದು ಪರ್ಸ್ ನಲ್ಲಿ 150 ರೂಪಾಯಿ ದೊರಕಿದೆ. ಮೃತ ದೇಹದ ವಾರೀಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ 0820 – 2551033 ಅನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.