ಕೋಡಿ ಅಳಿವೆ ರಸ್ತೆ ಕಾಮಗಾರಿ ತ್ವರಿತಕ್ಕೆ ಆಗ್ರಹ

ಕಾಮಗಾರಿ ಗುಣಮಟ್ಟ, ವಿಳಂಬಗತಿಯ ಬಗ್ಗೆ ಅಸಮಾಧಾನ

Team Udayavani, Mar 6, 2020, 5:39 AM IST

ಕೋಡಿ ಅಳಿವೆ ರಸ್ತೆ ಕಾಮಗಾರಿ ತ್ವರಿತಕ್ಕೆ ಆಗ್ರಹ

ಕುಂದಾಪುರ: ಕೋಡಿಯಲ್ಲಿ ನಡೆಯುತ್ತಿರುವ ಡಾಮರು ಕಾಮಗಾರಿ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿಯ ಗುಣಮಟ್ಟದ ಕಡೆಗೆ ಒಂದು ಕಡೆಯಾದರೆ ವಿಳಂಬಗತಿಯ ಕುರಿತು ಇನ್ನೊಂದೆಡೆ ಅಸಮಾಧಾನವಿದೆ.

ಡಾಮರು
ಕೋಡಿಯಲ್ಲಿ ಲೈಟ್‌ಹೌಸ್‌ ಪಕ್ಕದಿಂದ ಹಾದು ಸೀವಾಕ್‌ ಸಮೀಪದವರೆಗೂ 1.5 ಕೋ.ರೂ. ವೆಚ್ಚದಲ್ಲಿ ಡಾಮರುಗೊಳ್ಳುತ್ತಿದೆ. ಈ ರಸ್ತೆ ತೀರಾ ಹದಗೆಟ್ಟಿದ್ದು ಸ್ಥಳೀಯರ ಬೇಡಿಕೆ ಮೇರೆಗೆ ಶಾಸಕರ ಸೂಚನೆಯಂತೆ ಪುರಸಭೆ ಈ ಕಾಮಗಾರಿ ನಡೆಸುತ್ತಿದೆ.

ಅಭಿವೃದ್ಧಿ
ಅತಿ ಉದ್ದ ವ್ಯಾಪ್ತಿ ಹೊಂದಿದ ಬೀಚ್‌ ಎಂಬ ಹೆಗ್ಗಳಿಕೆಗೆ ಕೋಡಿ ಬೀಚ್‌ ಪಾತ್ರವಾಗಲಿದೆ. ಏಕೆಂದರೆ ಸರಿಸುಮಾರು 3.5 ಕಿ.ಮೀ. ದೂರದಲ್ಲಿ ಬೀಚ್‌ ವ್ಯಾಪಿಸಿಕೊಂಡಿದೆ.
ಆದ್ದರಿಂದ ಯಾವುದೇ ಪ್ರದೇಶದಲ್ಲೂ ಸಮುದ್ರ ವಿಹಾರ ನಡೆಸಬಹುದಾಗಿದೆ. ಇದರೊಂದಿಗೆ ಇಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿ ನಡೆದಂತೆಯೇ ಇಲ್ಲಿಗೆ ಸಂಜೆ ವೇಳೆಗೆ ಸೂರ್ಯಾಸ್ತ ವೀಕ್ಷಣೆಗೆ ಜನ ಬರಲಾರಂಭಿಸಿದ್ದಾರೆ. ವಾರಾಂತ್ಯವೂ ಇಲ್ಲಿ ಜನಸಂದಣಿ ಹೆಚ್ಚಿದೆ. ಸಂಸಾರ ಸಹಿತರಾಗಿ, ಮಕ್ಕಳು ಸ್ನೇಹಿತರ ಜತೆಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ನಿಧಾನ
ಕಾಮಗಾರಿಯ ವೇಗದ ಕುರಿತು ಇಲ್ಲಿನ ಜನರಲ್ಲಿ ಅಸಮಾಧಾನವಿದೆ. ಒಂದು ತಿಂಗಳಿನಿಂದ ಜಲ್ಲಿ ಹಾಕಿ ಹಾಗೆಯೇ ಬಿಡಲಾಗಿದೆ. ವಾಹನಗಳ ಓಡಾಟಕ್ಕೂ ಕಷ್ಟ , ಜತೆಗೆ ಈ ಪ್ರದೇಶವೆಲ್ಲಾ ಧೂಳುಮಯ. ಆಸುಪಾಸಿನ ಮನೆಯವರಿಗೆ ಕಷ್ಟವಾಗುತ್ತಿದೆ ಎಂದು ಊರವರುತಿಳಿಸಿದ್ದಾರೆ. ಆದ್ದರಿಂದ ತುರ್ತಾಗಿ ಕಾಮಗಾರಿ ಮುಗಿಸಬೇಕೆಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಆಗಿರುವ ಡಾಮರು ಕಾಮಗಾರಿಯ ಗುಣ ಮಟ್ಟದ ಕುರಿತಾಗಿಯೂ ಅಸಮಾಧಾನ ಹೊರಹಾಕುವವರು ಇದ್ದಾರೆ. ಈಗಾಗಲೇ ಅರ್ಧದಷ್ಟು ಕಾಮಗಾರಿ ಪೂರ್ಣವಾಗಿದ್ದು ಇನ್ನುಳಿಕೆ ಪ್ರದೇಶಕ್ಕೆ ಜಲ್ಲಿ ಹಾಕಲಾಗಿದೆ. ಲೈಟ್‌ಹೌಸ್‌ ಬದಿ ಕಾಮಗಾರಿ ಪ್ರಗತಿಯಲ್ಲಿದೆ. ಈಗ ವಾಹನಗಳ ಓಡಾಟ ಕಷ್ಟದಲ್ಲಿ ನಡೆಯುತ್ತಿದೆ. ಕಾಮಗಾರಿ ಪೂರ್ಣವಾದ ಬಳಿಕ ಸುವ್ಯವಸ್ಥಿತ ರಸ್ತೆ ಉಪಯೋಗಕ್ಕೆ ದೊರೆಯಲಿದೆ.

ಹೂತುಹೋಗುವ ಆತಂಕ
ಲೈಟ್‌ಹೌಸ್‌ ಎದುರು ವಾಹನ ನಿಲ್ಲಿಸಲು ಸ್ಥಳಾವಕಾಶ ಒದಗಿಸಬೇಕೆಂದು ಬೇಡಿಕೆ ಯಿದೆ. ಇಲ್ಲಿ ಈಗಾಗಲೇ ಅನೇಕ ಪ್ರವಾಸಿ ವಾಹನಗಳು ಮಣ್ಣು, ಮರಳಿನಲ್ಲಿ ಹೂತು ಹೋಗುತ್ತಿದೆ. ಆದ್ದ ರಿಂದ ಇದಕ್ಕೊಂದು ಸುಸಜ್ಜಿತ ಪಾರ್ಕಿಂಗ್‌ಗೆ ಅನುವು ಮಾಡಿ ಕೊಡ ಬೇಕೆಂಬ ಬೇಡಿಕೆ ಇದೆ.

ಸುದಿನ ವರದಿ
ಉದಯವಾಣಿ ಸುದಿನ ಇಲ್ಲಿ ಕಾಮಗಾರಿಗೆ ಬೇಡಿಕೆ ಹಾಗೂ ಅನುದಾನ ಮಂಜೂರಾದ ಕುರಿತು ವರದಿ ಪ್ರಕಟಿಸಿತ್ತು. ಇದೀಗ ಕಾಮಗಾರಿ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ಜನೋಪಯೋಗಕ್ಕೆ ದೊರೆಯಲಿದೆ.

ಕೋಡಿ ಬೀಚ್‌ಗೆ, ಸೀವಾಕ್‌ ಕಡೆಗೆ,
ಲೈಟ್‌ಹೌಸ್‌ ಕಡೆಗೆ ಬರುವ ರಸ್ತೆ ಹಾಳಾಗಿತ್ತು. ಅಳಿವೆ ಕಾಮಗಾರಿಯಿಂದ ಹಾಳಾಗಿದೆ ಎನ್ನಲಾಗುತ್ತಿದೆ. ಆದರೆ ಎರಡು ಮೂರು ವರ್ಷಗಳಿಂದ ಇದೇ ಸ್ಥಿತಿಯಲ್ಲಿ ಇದ್ದಂತಿದೆ. ಈ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಪುರಸಭೆಗೆ ಸೂಚನೆ ನೀಡಿ ದುರಸ್ತಿಗೆ ಹೇಳಿದ್ದರು. ಅದರಂತೆ ಕುಡಿಯುವ ನೀರಿನ ಕಾಮಗಾರಿಯಲ್ಲಿ ಹಾಳಾದ ರಸ್ತೆ ದುರಸ್ತಿಗೆ ಇರುವ ಅನುದಾನ ಬಳಸಿ ರಸ್ತೆ ಸರಿಪಡಿಸಲು ಪುರಸಭೆ ಆಡಳಿತ ಮುಂದಾಗಿದ್ದು ಕಾಮಗಾರಿ ನಡೆಯುತ್ತಿದೆ.

ಶೀಘ್ರ ಮುಕ್ತಾಯ
ಅನುಮತಿ ದೊರೆಯುವುದು ವಿಳಂಬವಾದ ಕಾರಣ ಕಾಮಗಾರಿ ನಿಧಾನವಾಗಿದೆ. ಈಗ ಕಾಮಗಾರಿಗೆ ಅನುಮತಿ ದೊರೆತಿದ್ದು ಶೀಘ್ರದಲ್ಲಿ ಮುಗಿಸಲಾಗುತ್ತಿದೆ. ಕುಡಿಯುವ ನೀರಿನ ಕಾಮಗಾರಿಯ ಅನುದಾನ ಬಳಸಿಕೊಂಡು ಕಾಮಗಾರಿ ಮಾಡಲಾಗುತ್ತಿದೆ.
-ಗೋಪಾಲಕೃಷ್ಣ ಶೆಟ್ಟಿ,
ಮುಖ್ಯಾಧಿಕಾರಿ, ಪುರಸಭೆ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.