ಯೋಗ ಪಾರ್ಕ್, ಜಿಲ್ಲೆಗೊಂದು ಆಯುಷ್ ಆಸ್ಪತ್ರೆ: ಶ್ರೀಪಾದ ನಾಯಕ್
Team Udayavani, Jun 17, 2018, 6:00 AM IST
ಉಡುಪಿ: ಕೇಂದ್ರ ಸರಕಾರದ ಆಯುಷ್ ಮಿಶನ್ ಯೋಜನೆಯ ಮೂಲಕ ದೇಶದ ಪ್ರತೀ ಜಿಲ್ಲೆಯಲ್ಲಿಯೂ ಆಯುಷ್ ಆಯುರ್ವೇದ ಆಸ್ಪತ್ರೆ ಸ್ಥಾಪಿಸಲಾಗುವುದು. ಈಗಾಗಲೇ 100 ಜಿಲ್ಲೆಗಳಲ್ಲಿ ಆಸ್ಪತ್ರೆ ಪ್ರಾರಂಭಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಎಲ್ಲ 640 ಜಿಲ್ಲೆಗಳಿಗೂ ವಿಸ್ತರಿಸುವ ಚಿಂತನೆ ಆಯುಷ್ ಮಂತ್ರಾಲಯದ ಮುಂದಿದೆ ಎಂದು ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರು ಉಡುಪಿಯಲ್ಲಿ ಶನಿವಾರ ಹೇಳಿದರು.
ಪ್ರತೀ ಆಸ್ಪತ್ರೆಗಳ ನಿರ್ಮಾಣಕ್ಕೆ ಬಜೆಟ್ನಲ್ಲಿ ತಲಾ 14 ಕೋ.ರೂ. ಮೀಸಲಿರಿಸಲಾಗಿದೆ. ಆಯುಷ್ ಚಿಕಿತ್ಸಾಲ
ಯದಲ್ಲಿ ಇಎಸ್ಐ ಸೌಲಭ್ಯವನ್ನೂ ಒದಗಿಸಲಾಗುತ್ತದೆ. 100 ನಗರಗಳಲ್ಲಿ ಯೋಗ ಪಾರ್ಕ್ ನಿರ್ಮಾಣವಾಗಲಿದೆ. ಮುಂದಿನ ವರ್ಷ ಮತ್ತೂ 150 ನಗರಗಳನ್ನು ಸೇರ್ಪಡೆ ಮಾಡಲಾಗುವುದು. ಸಹಭಾಗಿತ್ವ ಮತ್ತು ಸಂಶೋಧನೆಯ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಜತೆ ಒಪ್ಪಂದವನ್ನೂ ಮಾಡಲಾಗಿದೆ ಎಂದರು.
ಯೋಗ ಗ್ರಾಮ ಘೋಷಣೆ
ಕೇರಳದ ಅಲೆಪ್ಪಿ ಜಿಲ್ಲೆಯ ಮೊಹಮಮ್ ಗ್ರಾಮವನ್ನು ಯೋಗ ಗ್ರಾಮವನ್ನಾಗಿ ಘೋಷಿಸಲಾಗಿದೆ. ಇಲ್ಲಿನ ಎಲ್ಲ ಮನೆಯಲ್ಲಿ ಎಲ್ಲರೂ ಯೋಗಮಾಡುತ್ತಾರೆ. ದೇಶದ ಪ್ರಪ್ರಥಮ ಯೋಗ ಗ್ರಾಮ ಇದಾಗಿದೆ ಎಂದರು.
ಯೋಗ ದಿನಕ್ಕೆ ತಯಾರಿ
ಹೊಸದಿಲ್ಲಿ, ಚಂಡೀಗಢ, ಲಕ್ನೋದ ಬಳಿಕ ಈ ಬಾರಿ 4ನೇ ವರ್ಷದ ಯೋಗ ದಿನಾಚರಣೆಯು ಉತ್ತರಾಖಂಡ್ನ ಡೆಹ್ರಾಡೂನ್ನಲ್ಲಿ ನಡೆಯಲಿದೆ. ಸುಮಾರು 50 ಸಾವಿರ ಜನರ ನಿರೀಕ್ಷೆ ಇದೆ. ಯೋಗ ದಿನದಲ್ಲಿ ಎಷ್ಟು ಜನ ಭಾಗವಹಿಸಿದರೆನ್ನುವ ಕುರಿತು ದಾಖಲೀಕರಣ ನಡೆಯಲಿದೆ. ವಿವಿಧ ದೇಶಗಳಲ್ಲಿರುವ ರಾಯಭಾರ ಕಚೇರಿಗಳ ಮೂಲಕ ವಿದೇಶಗಳಲ್ಲಿ ಯೋಗದ ಮಾಹಿತಿಯನ್ನು ಪಸರಿಸಲಾಗುವುದು ಎಂದರು.
ಯೋಗ ಸಾಧಕರಿಗೆ ನಾಲ್ಕು ಪ್ರಶಸ್ತಿ
ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡವರು, ಸಾಮಾಜಿಕವಾಗಿ ಯೋಗವನ್ನು ಪ್ರಸಿದ್ಧಿಗೆತಂದ ಭಾರತೀಯರು ಮತ್ತು ವಿದೇಶೀಯರಿಗೆ ತಲಾ ಎರಡು ಪ್ರಧಾನ ಮಂತ್ರಿ ಪ್ರಶಸ್ತಿ ನೀಡಲು ಆಯುಷ್ ಮಂತ್ರಾಲಯ ನಿರ್ಧರಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.