ಕುಕ್ಕುಂದೂರು: ನಕ್ರೆ ನಡುವೆ ಅಸಮರ್ಪಕ ಚರಂಡಿ ವ್ಯವಸ್ಥೆ
Team Udayavani, May 9, 2022, 10:42 AM IST
ಕಾರ್ಕಳ: ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವಜ್ಞ ವೃತ್ತದಿಂದ ಕವಲೊಡೆದು ನಕ್ರೆ ಕಡೆ ತೆರಳುವ ದಾರಿ ಮಧ್ಯೆ ಅಸಮರ್ಪಕ ಚರಂಡಿ ವ್ಯವಸ್ಥೆ ಯಿಂದ ಮಳೆ ಬರುವ ವೇಳೆ ರಸ್ತೆಯೇ ಚರಂಡಿಯಾಗಿ ಪರಿವರ್ತನೆಯಾಗುತ್ತಿದೆ. ಸಂಚಾರದಲ್ಲೂ ಸಮಸ್ಯೆಗಳಾಗುತ್ತಿವೆ.
ಅಯ್ಯಪ್ಪ ನಗರದಿಂದ ನಕ್ರೆ ಭಾಗಕ್ಕೆ ತೆರಳುವ ರಸ್ತೆಯ ಮಧ್ಯೆ ಅನ್ನಪೂರ್ಣ ಜನರಲ್ ಸ್ಟೋರ್ನ ಎದುರುಗಡೆ ಈ ಸಮಸ್ಯೆಯಿದೆ. ಮೇ 6ರಂದು ಸಂಜೆ ಸುರಿದ ವ್ಯಾಪಕ ಮಳೆಗೆ ಈ ಜಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣಕ್ಕೆ ಎತ್ತರದ ಪ್ರದೇಶದದಿಂದ ತಗ್ಗು ಪ್ರದೇಶಕ್ಕೆ ಮಳೆ ನೀರು ಹರಿದು ಬಂದು ರಸ್ತೆಯೇ ಹೊಳೆಯಂತಾಗಿತ್ತು. ಮಳೆ ನೀರಿನ ಜತೆ ಕಲ್ಲು ಮಣ್ಣು ಮಿಶ್ರಿತ ಕೆಸರು ನೀರು ರಸ್ತೆಗೆ ಹರಿದು ಬಂದಿತ್ತು. ಕಸ, ಕಡ್ಡಿ, ಕಲ್ಲುಗಳು ರಸ್ತೆಯ ಮಧ್ಯೆ ಸಂಗ್ರಹಗೊಂಡ ಕಾರಣದಿಂದ ಸಂಚಾರ ವೇಳೆ ಇಲ್ಲಿ ತೊಂದರೆಗಳಾಗುತ್ತಿವೆ ಎಂದು ವಾಹನ ಸವಾರರು ದೂರಿದ್ದಾರೆ. ದ್ವಿಚಕ್ರ ವಾಹನ ಸವಾರರು ತೆರಳುವಾಗ ಇಲ್ಲಿ ಬಿದ್ದು ಗಾಯಗೊಳ್ಳುವ ಸ್ಥಿತಿ ಕೂಡ ಇದೆ.
ಪ್ರತಿ ಮಳೆಗಾಲ ಕೂಡ ಇಲ್ಲಿ ಸಮಸ್ಯೆ ಪುನಾರವರ್ತನೆಯಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆಗಾಲದಲ್ಲಿ ಇಲ್ಲಿ ಈ ಪರಿಸ್ಥಿತಿ ಎದುರಾಗುತ್ತದೆ ಎಂದು ಈ ಭಾಗದ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲಕ್ಕೂ ಮುಂಚಿತ ಸೂಕ್ತ ಚರಂಡಿ ನಿರ್ಮಿಸಿ ನೀರು ರಸ್ತೆಗೆ ಬರದಂತೆ ತಡೆದು ಚರಂಡಿ ಮೂಲಕವೇ ಹರಿದು ಹೋಗಲು ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ. ಹೀಗೆ ಮಾಡಿದಾಗ ಡಾಮರು ರಸ್ತೆಯು ಉತ್ತಮವಾಗಿ ಬಹುಕಾಲ ಉಪಯೋಗಕ್ಕೆ ಬರಬಹುದು ಎನ್ನುವ ಅಭಿಪ್ರಾಯ ಅವರು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.