ಉಪಯೋಗಕ್ಕಿಲ್ಲದ ನಕ್ರೆ ಆರೋಗ್ಯ ಉಪಕೇಂದ್ರ


Team Udayavani, Oct 11, 2019, 5:52 AM IST

nakre-arogya-kendra

ಕಾರ್ಕಳ: ಕುಕ್ಕುಂದೂರು ಗ್ರಾಮದ ರೋಗಿಗಳಿಗೆ ಸ್ಪಂದಿಸ ಬೇಕಾದ ಆರೋಗ್ಯ ಉಪಕೇಂದ್ರದಲ್ಲಿ ಆರೋಗ್ಯ ಸಹಾಯಕಿಯರಿಲ್ಲದೆ ಕಟ್ಟಡ ನಿರುಪಯುಕ್ತವಾಗಿದೆ.

13 ಸಾವಿರ ಜನಸಂಖ್ಯೆಯಿರುವ ಕುಕ್ಕುಂದೂರು ಗ್ರಾಮದಲ್ಲಿ 5 ಸಾವಿರ ಮಂದಿ ಇದರ ಪ್ರಯೋಜನ ಪಡೆಯಬೇಕಿತ್ತು. 2018ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಅನುದಾನದಡಿ ಉಪಕೇಂದ್ರ ನಿರ್ಮಾಣವಾಗಿತ್ತು. ಆದರೆ ಇದೀಗ ಅಲ್ಲಿ ಆರೋಗ್ಯ ಸಹಾಯಕಿಯರಿಲ್ಲದೆ ಉಪಕೇಂದ್ರದ ಪ್ರಯೋಜನ ಜನಸಾಮಾನ್ಯರಿಗೆ ದೊರೆಯುತ್ತಿಲ್ಲ.

30 ಲಕ್ಷ ರೂ. ವೆಚ್ಚ
ನಕ್ರೆ ಉಪಕೇಂದ್ರವನ್ನು 2018ರ ನ. 21ರಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಲೋಕಾರ್ಪಣೆ ಮಾಡಿದ್ದರು. ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣವಾಗಿತ್ತು. ಆರಂಭದ ಮೂರು ತಿಂಗಳು ಆರೋಗ್ಯ ಸಹಾಯಕಿಯೋರ್ವರು ಕಾರ್ಯನಿರ್ವಹಿಸುತ್ತಿದ್ದರು. ಉತ್ತಮ ಆರೋಗ್ಯ ಸಹಾಯಕಿಯೆಂದು ಜನರಿಂದ ಪ್ರಶಂಸೆಗೊಳಪಟ್ಟ ಅವರು ಅನಾರೋಗ್ಯಕ್ಕೀಡಾಗಿ ರಜೆ ಪಡೆದರು. ರಜೆ ಪಡೆದು 6 ತಿಂಗಳಾಗುತ್ತ ಬಂದರೂ ಆರೋಗ್ಯ ಇಲಾಖೆ ಬದಲಿ ಸಿಬಂದಿಯನ್ನು ಅಲ್ಲಿಗೆ ನಿಯುಕ್ತಿ ಗೊಳಿಸಿಲ್ಲ,
ಕುಕ್ಕುಂದೂರು ಗ್ರಾಮದ ನಕ್ರೆ ಪ್ರದೇಶ ದಲ್ಲಿ ಅಂದರೆ ಉಪಕೇಂದ್ರದ 1 ಕಿ. ಮೀ. ದೂರದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಹೀಗಾಗಿ ಗರ್ಭಿಣಿ,
ಬಾಣಂತಿಯರು ಪ್ರಾಥಮಿಕ ಚಿಕಿತ್ಸೆಗಾಗಿ ಅಲ್ಲಿಗೆ ತೆರಳುತ್ತಿದ್ದಾರೆ. ಪಕ್ಕದಲ್ಲಿ ಉಪಕೇಂದ್ರ ನಿರ್ಮಾಣ ಮಾಡುವ ಆವಶ್ಯಕತೆ ಏನಿತ್ತು ಎಂದು ಸ್ಥಳೀಯರು ಪ್ರಶ್ನಿಸುತ್ತಾರೆ.

ಖಾಲಿ ಹುದ್ದೆಗಳು
ಕಾರ್ಕಳ ತಾಲೂಕಿನಲ್ಲಿ ಒಟ್ಟು 16 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 73 ಉಪಕೇಂದ್ರಗಳಿವೆ. 73 ಆರೋಗ್ಯ ಸಹಾಯಕಿಯರ ಹುದ್ದೆಗಳಲ್ಲಿ 54 ಮಂದಿ ಮಾತ್ರವಿದ್ದು 19 ಹುದ್ದೆಗಳು ಖಾಲಿಯಿವೆ. 36 ಆರೋಗ್ಯ ಸಹಾಯಕರ ಹುದ್ದೆಗಳಲ್ಲಿ ಕೇವಲ 5 ಮಂದಿಯಿದ್ದು, 31 ಹುದ್ದೆಗಳು ಖಾಲಿಯಿವೆ.

ಸದ್ಯವೇ ಸಿಬಂದಿ ನೇಮಕ
ಆರೋಗ್ಯ ಕೇಂದ್ರದಲ್ಲಿ ಸಿಬಂದಿ ಕೊರತೆಯಿದೆ ನಿಜ. ನಕ್ರೆ ಉಪಕೇಂದ್ರದ ಆರೋಗ್ಯ ಸಹಾಯಕಿ ಅನಾರೋಗ್ಯದಿಂದಾಗಿ ರಜೆಯಲ್ಲಿದ್ದಾರೆ. ಸದ್ಯವೇ ಅಲ್ಲಿಗೆ ಸಿಬಂದಿ ನಿಯುಕ್ತಿಗೊಳಿಸಲಾಗುವುದು.
-ಡಾ| ಕೃಷ್ಣಾನಂದ ಶೆಟ್ಟಿ, ತಾಲೂಕು ವೈದ್ಯಾಧಿಕಾರಿ

– ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.