![Basavaraj Bommai](https://www.udayavani.com/wp-content/uploads/2024/07/Basavaraj-Bommai-415x265.jpg)
Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ
Team Udayavani, Jul 4, 2024, 12:30 AM IST
![Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ](https://www.udayavani.com/wp-content/uploads/2024/07/BOOK-S-620x279.jpg)
ಅಜೆಕಾರು: ಹಿರ್ಗಾನದ ಕ್ರಿಯೇಟಿವ್ ಕಾಲೇಜಿನ ಸಪ್ತಗಿರಿ ಕ್ಯಾಂಪಸ್ ಸಭಾಂಗಣದಲ್ಲಿ ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ ಕಾರ್ಯಕ್ರಮ ಜು. 1ರಂದು ನಡೆಯಿತು.
ಪುಸ್ತಕ ಬಿಡುಗಡೆಗೊಳಿಸಿ ಮಾತನಾ ಡಿದ ಹಿರಿಯ ಸಾಹಿತಿ ಗಿರೀಶ್ ರಾವ್ ಹತ್ವಾರ್, ಶಿಕ್ಷಣ ಎನ್ನುವುದು ಸಂಪಾದನೆಗೆ ಸಹಕಾರಿಯಾದರೆ, ಸಾಹಿತ್ಯವು ಪರಿಪೂರ್ಣ ಮನುಷ್ಯ ನನ್ನಾಗಿ ರೂಪಿಸುತ್ತದೆ ಎಂದು ಹೇಳಿದರು.
ಶಾಸಕ ಸುನಿಲ್ ಕುಮಾರ್ ಮಾತನಾಡಿ, ಪುಸ್ತಕ ಮನೆಯ ಪರಿಕಲ್ಪನೆ ಕ್ರಿಯೇಟಿವ್ ಶಿಕ್ಷಣದೊಂದಿಗೆ ಸಾಹಿತ್ಯ ಬೆಳವಣಿಗೆಗೆ ಪ್ರೇರಣೆಯಾಗಿದೆ. ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.
ಕಾರ್ಕಳ ಕ.ಸಾ.ಪ. ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿ, ಹೃದಯ ಶ್ರೀಮಂತಿಕೆ ಹೆಚ್ಚಿಸಲು ಸಾಹಿತ್ಯ ಕೃತಿಗಳು ಸಹಕಾರಿಯಾಗಿವೆ ಎಂದರು.
ಕಾಲೇಜಿನ ಸಂಸ್ಥಾಪಕ ಅಶ್ವಥ್ ಎಸ್. ಎಲ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ನರೇಂದ್ರ ಪೈ ಅವರ ಸಾವಿರದೊಂದು ಪುಸ್ತಕ, ಯಶೋದಾ ಮೋಹನ್ ಅವರ ಇಳಿ ಹಗಲಿನ ತೇವಗಳು, ಸುಧಾ ನಾಗೇಶ್ ಅವರ ಹೊಂಬೆಳಕು, ವಾಣಿರಾಜ್ ಅವರ ಸವಿನೆನಪುಗಳ ಹಂದರ, ಡಾ| ಸುಬ್ರಹ್ಮಣ್ಯ ಸಿ. ಕುಂದೂರು ಅವರ ಜೀವನಯಾನ, ಅನುಬೆಳ್ಳೆ ಅವರ ನಗುವ ನಯನ ಮಧುರ ಮೌನ, ರಾಮಕೃಷ್ಣ ಹೆಗಡೆ ಅವರ ಒಲವಧಾರೆ, ಲಕ್ಷ್ಮಣ ಬಜಿಲರ ನಿರ್ವಾಣ, ಅಶ್ವತ್ಥ ಎಸ್. ಎಲ್.ರ ಅರಿವಿನ ದಾರಿ, ರಾಜೇಂದ್ರ ಭಟ್ ಅವರ ರಾಜಪಥ, ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅವರ ಸಾರ್ಥಕ ಜೀವನಕ್ಕೆ ಕಗ್ಗೊಪದೇಶ, ಲಲಿತಾ ಮುದ್ರಾಡಿಯವರ ಅರ್ಥವಾಗ ದವರು, ದಿಗಂತ್ ಬಿಂಬೈಲ್ ಅವರ ಕೊಂದ್ ಪಾಪ ತಿಂದ್ ಪರಿಹಾರ, ಡಾ| ರಾಜಶೇಖರ್ಹಳೆಮನೆ ಅವರ ಒಡಲುಗೊಂಡವರು, ಮಹೇಶ್ ಪುತ್ತೂರು ಅವರ ವರ್ಣ ಪುಸ್ತಕಗಳು ಬಿಡುಗಡೆಗೊಂಡವು.
ಕಾಲೇಜು ಸಂಸ್ಥಾಪಕ ವಿ| ಗಣಪತಿ ಭಟ್, ಡಾ| ಗಣನಾಥ ಶೆಟ್ಟಿ, ಅಮೃತ್ ರೈ, ಆದರ್ಶ ಎಂ. ಕೆ., ವಿಮಲ್ ರಾಜ್ ಜಿ., ಗಣಪತಿ ಭಟ್ ಕೆ. ಎಸ್. ಉಪಸ್ಥಿತರಿದ್ದರು. ಲೋಹಿತ್ ಎಸ್. ಕೆ. ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
![Basavaraj Bommai](https://www.udayavani.com/wp-content/uploads/2024/07/Basavaraj-Bommai-415x265.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kota-Shrinivas](https://www.udayavani.com/wp-content/uploads/2024/07/Kota-Shrinivas-150x90.jpg)
Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
![Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ](https://www.udayavani.com/wp-content/uploads/2024/07/Udupi-DC-Dr.-vidya-kumari-1-150x106.jpg)
Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ
![Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು](https://www.udayavani.com/wp-content/uploads/2024/07/HEBRi-1-150x93.jpg)
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!](https://www.udayavani.com/wp-content/uploads/2024/07/BUSAAA-150x90.jpg)
Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್ ನಿಲ್ಲಿಸಿ ಹೋದ ಚಾಲಕ!
MUST WATCH
ಹೊಸ ಸೇರ್ಪಡೆ
![Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ](https://www.udayavani.com/wp-content/uploads/2024/07/Bottom-1-150x62.jpg)
Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ
![Basavaraj Bommai](https://www.udayavani.com/wp-content/uploads/2024/07/Basavaraj-Bommai-150x96.jpg)
Basavaraj Bommai; ಒಂದುವರೆ ತಿಂಗಳುಗಳ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ
![ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/joshi-150x83.jpg)
Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ
![Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?](https://www.udayavani.com/wp-content/uploads/2024/07/Mind1-150x96.jpg)
Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?
![lakshmi hebbalkar](https://www.udayavani.com/wp-content/uploads/2024/07/lakshmi-hebbalkar-150x89.jpg)
CM-DCM ಬದಲಾವಣೆ ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.