ಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ


Team Udayavani, Mar 4, 2023, 5:35 AM IST

crಉಪ್ಪುಂದ: ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ

ಉಪ್ಪುಂದ: ಸಾಲಬಾಧೆ ಹಾಗೂ ಪತ್ನಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ತಾಲೂಕು ವಿದ್ಯಾನಗರ ಡಿಗ್ರಿ ಕಾಲೇಜು ಸಮೀಪದ ನಿವಾಸಿ ಗೋಪಾಲ (48) ಆತ್ಮಹತ್ಯೆ ಮಾಡಿಕೊಂಡವರು.

ಅವರು ಹೊಸ ಮನೆಯನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಹಣದ ಅಡಚಣೆಯಿಂದ ಮನೆ ಕೆಲಸ ನಿಧಾನಕ್ಕೆ ನಡೆದಿದ್ದು, ಮನೆ ನಿರ್ಮಾಣದ ಸಲುವಾಗಿ ಬ್ಯಾಂಕ್‌ ಹಾಗೂ ಸಂಘಗಳಲ್ಲಿ ಸುಮಾರು 7-8 ಲಕ್ಷ ರೂ. ಸಾಲ ಮಾಡಿ, ಮನೆ ನಿರ್ಮಾಣ ಮಾಡುತ್ತಿದ್ದು, ಇನ್ನು ಹೆಚ್ಚಿನ ಹಣ ಬೇಕಾಗಿರುವ ಬಗ್ಗೆ ಪತ್ನಿ ಸುಶೀಲಾ ಅವರಲ್ಲಿ ಪದೇ ಪದೇ ಹೇಳುತ್ತಿದ್ದರು. ಸುಶೀಲಾ ಮೊಗವೀರ ಅವರಿಗೂ ಆರೋಗ್ಯ ಹದಗೆಟ್ಟು, ಹಾಸಿಗೆ ಹಿಡಿದ ಕಾರಣ ಮಾನಸಿಕ ಖನ್ನತೆಗೆ ಒಳಗಾಗಿ ಮದ್ಯಪಾನ ಸಹ ಮಾಡುತ್ತಿದ್ದರು. ಮಾ.2ರಂದು ಬೆಳಗ್ಗೆ ಎದ್ದು ಹೊಸ ಮನೆ ಕೆಲಸದ ಬಗ್ಗೆ ಹೋಗಿದ್ದು ಚಹಾ ಕುಡಿಯಲು ಬೆಳಗ್ಗೆ 8:30 ಗಂಟೆಗೆ ಕರೆಯಲು ಹೋದಾಗ ಹೊಸ ಮನೆಯ ಒಳಗಡೆ ಇರುವ ಟಾಯ್ಲೆಟ್‌ನ ಕಬ್ಬಿಣದ ಜಂತಿಗೆ ಟವೆಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ
ಕಾರ್ಕಳ: ನಿಟ್ಟೆಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್‌ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 2ರಂದು ನಡೆದಿದೆ.

ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆ ಹಾಗೂ ಆರೋಗ್ಯದ ಸಮಸ್ಯೆಯ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾ. 2ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್‌ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ:ಗಾಯ
ಕಾರ್ಕಳ: ಬೋಳ ಗ್ರಾಮದ ಬೋಳ ಪದವು ಎಂಬಲ್ಲಿ ಬೈಕ್‌ಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಎರಡು ಬೈಕ್‌ಗಳ ಸವಾರರು, ಸಹಸವಾರಿ ಗಾಯಗೊಂಡ ಘಟನೆ ನಡೆದಿದೆ.

ಕಿನ್ನಿಗೋಳಿ ನೆಲ್ಲಿಗುಡ್ಡೆ ನಿವಾಸಿ ಗಣೇಶ್‌ ಪ್ರಸಾದ್‌ ಸಂಕಲಕರಿಯ ಕಡೆಯಿಂದ ಮಂಜರಪಲ್ಕೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಎದುರಿನಿಂದ ಮಂಜರಪಲ್ಕೆ ಕಡೆಯಿಂದ ವಿನೋದ ಅವರು ಚಲಾಯಿಸಿಕೊಂಡು ಬಂದ ಬೈಕ್‌ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡು ಬೈಕ್‌ಗಳ ಸವಾರರು ಹಾಗೂ ಸಹಸವಾರ ಬೈಕ್‌ ಸಹಿತ ರಸ್ತೆಗೆ ಬಿದ್ದು ಗಣೇಶ್‌ ಪ್ರಸಾದ್‌ ಮೂಳೆ ಮುರಿತಕ್ಕೆ ಒಳಗಾದರೆ, ವಿನೋದ, ಸಹಸವಾರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಕಾರ್ಕಳ ಪೊಲೀಸ್‌ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಚಾರು: ಪಾದಚಾರಿಗೆ ಬೈಕ್‌ ಢಿಕ್ಕಿ; ಗಂಭೀರ
ಸಿದ್ದಾಪುರ: ಅಂಪಾರು ಗ್ರಾಮದ ಕಂಚಾರು ಜಂಕ್ಷನ್‌ ಬಳಿ ನಡೆದುಕೊಂಡು ಹೋಗುತ್ತಿದ್ದ ಕಾವ್ರಾಡಿ ಗ್ರಾಮದ ಹನ್ನಾಡು ಗುಡ್ಡಿಮನೆ ಸುರೇಶ ದೇವಾಡಿಗ (59) ಅವರಿಗೆ ಬೈಕ್‌ ಢಿಕ್ಕಿ ಹೊಡೆದಿದೆ. ಢಿಕ್ಕಿ ಪರಿಣಾಮ ಸುರೇಶ ಅವರು ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.