
“ಡಿಜಿಟಲ್ ಸೇವೆಯನ್ನು ಸಾರ್ವಜನಿಕರು ಉಪಯೋಗಿಸಿ’
Team Udayavani, Jan 31, 2020, 5:58 AM IST

ಉಡುಪಿ: ಜಿಲ್ಲಾ ಗ್ರಂಥಾಲಯದಲ್ಲಿ ಆಳವಡಿಸಲಾದ ಡಿಜಿಟಲ್ ಸೇವೆಯನ್ನು ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಗುರುವಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ವತಿಯಿಂದ ಹಮ್ಮಿಕೊಂಡ ಕಾರ್ಯ ಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ ನೀಡಿ, ಮಾತನಾಡಿದರು.
ಉಚಿತ ಓದು
ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಹೊಸಮನಿ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ ಜಿಲ್ಲಾ, ತಾಲೂಕು, ನಗರದಲ್ಲಿ ಡಿಜಿಟಲ್ ಗ್ರಂಥಾಲಯದ ಸೇವೆಯನ್ನು ಪ್ರಾರಂಭಿ ಸಿದ ಕೀರ್ತಿ ಕರ್ನಾಟಕ್ಕೆ ಸಲ್ಲುತ್ತದೆ. 1 ರಿಂದ 12 ತರಗತಿ ವರೆಗಿನ ಎಲ್ಲ ಶಾಲಾ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳನ್ನು ಉಚಿತವಾಗಿ ಓದಬಹುದು ಎಂದರು.
ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಐ.ಜಿ, ಸಹ ಗ್ರಂಥಪಾಲಕಿ ವನಿತಾ ಉಪಸ್ಥಿತರಿದ್ದರು.
ಉತ್ತಮ ಹುದ್ದೆಗೇರಲು
ಗ್ರಂಥಾಲಯ ಕಾರಣ
ಗ್ರಂಥಾಲಯದಲ್ಲಿ ನಾನು ಮಾಡಿದ ತಪಸ್ಸಿನಿಂದಾಗಿ ನಾನು ಉತ್ತಮ ಹುದ್ದೆಗೇರಲು ಸಾಧ್ಯವಾಯಿತು. ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಗ್ರಂಥಾಲಯದ ಸಿಬಂದಿಗಳು ನಗುಮುಖದಿಂದ ಸ್ವಾಗತಿಸಿ ಅಗತ್ಯವಿರುವ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.