Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

ಹವಾಮಾನ ವೈಪರೀತ್ಯದಿಂದ ಉಭಯವಾಸಿಗಳ ಮೇಲೆ ಪರಿಣಾಮ

Team Udayavani, Jun 24, 2024, 7:20 AM IST

Frog ಶಬ್ದ ಗ್ರಹಿಸಲು ಎಐ ಬಳಕೆ: ಕಾರ್ಕಳ ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಪ್ಪೆ ಸಂಶೋಧನೆ

ಉಡುಪಿ: ಪರಿಸರ ಸಮತೋಲನದಲ್ಲಿ ಬಹುಮುಖ್ಯ ಪಾತ್ರವಹಿಸುವ ಉಭಯವಾಸಿ ಜೀವಿ ಕಪ್ಪೆ ಮೇಲೆ ಹವಾಮಾನ ವೈಪರೀತ್ಯವು ಯಾವ ರೀತಿ ಪರಿಣಾಮ ಬೀರುತ್ತಿದೆ ಎಂಬ ನಿಟ್ಟಿನಲ್ಲಿ ಸಂಶೋಧಕರು ಅಧ್ಯಯನ ಆರಂಭಿಸಿದ್ದಾರೆ. ಈಗ “ಆರ್ಟಿಫೀಶಿಯಲ್‌ ಇಂಟೆಲಿಜೆನ್ಸ್‌’ (ಎಐ) ಸೌಂಡ್‌ ಡಿವೈಸ್‌ ಮೂಲಕ ಕಪ್ಪೆಗಳ ಶಬ್ದ ಗ್ರಹಣ ಕಾರ್ಯ ನಡೆಯುತ್ತಿದೆ.

ಕಾರ್ಕಳ, ಮಾಳ ಸಮೀಪ ಪಶ್ಚಿಮಘಟ್ಟದ ತಪ್ಪಲಿನ ಅರಣ್ಯದಲ್ಲಿ ಕಪ್ಪೆ ಸಂಶೋಧಕ ಡಾ| ಕೆ. ವಿ. ಗುರುರಾಜ್‌ ಸಹಿತ ಹಲವರು ಅಧ್ಯಯನ ಕೈಗೊಂಡಿದ್ದಾರೆ. ಇತ್ತೀಚೆಗೆ ಗುರುರಾಜ್‌ ಮಾರ್ಗದರ್ಶನದಲ್ಲಿ ಸಂಶೋಧನ ವಿದ್ಯಾರ್ಥಿಗಳ ತಂಡವು ರಾತ್ರಿ ಪಶ್ಚಿಮಘಟ್ಟದ ಕಾಡಿನಲ್ಲಿ ಸಂಚರಿಸಿ ಕಪ್ಪೆಗಳ ವಿಶಿಷ್ಟತೆ ಬಗ್ಗೆ ಅಧ್ಯಯನ ನಡೆಸಿದೆ.

ಮಲೆನಾಡ ರಾತ್ರಿ ಕಪ್ಪೆ, ಕೆಂಪು ಹೊಳೆ, ಕೊಟ್ಟಿಗೆಹಾರ, ಇಂದಿರಾನ, ವೆಸ್ಟರ್ನ್ ಟ್ರೀ ಫ್ರಾಗ್‌, ಮಲೆನಾಡ ಮರಗಪ್ಪೆ, ಮಲಬಾರ್‌ ಗಿಲ್ಡಿಂಗ್‌ ಫ್ರಾಗ್‌ ಸಹಿತ 10ಕ್ಕೂ ಅಧಿಕ ಪ್ರಭೇದಗಳನ್ನು ಗುರುತಿಸಲಾಗಿದೆ.

ಎಐ ಸೌಂಡ್‌ ಟ್ರ್ಯಾಕಿಂಗ್‌ ಡಿವೈಸ್‌
ಅಧ್ಯಯನದ ಪ್ರಾಥಮಿಕ ಭಾಗವಾಗಿ ಪಶ್ಚಿಮಘಟ್ಟದ ಅರಣ್ಯಗಳಲ್ಲಿ 15ರಿಂದ 20 ಕಡೆಗಳಲ್ಲಿ ಎಐ ತಂತ್ರಜ್ಞಾನದ ಸೌಂಡ್‌ ಟ್ರ್ಯಾಕಿಂಗ್‌ ಡಿವೈಸ್‌ ಅಳವಡಿಸಲಾಗುತ್ತದೆ. ಒಂದೊಂದು ಪ್ರಭೇದದ ಕಪ್ಪೆಯೂ ಭಿನ್ನ ರೀತಿಯಲ್ಲಿ ಕೂಗುತ್ತದೆ. ಕಪ್ಪೆ ಕೂಗುವ ಪ್ರಕ್ರಿಯೆ ಸಂಗಾತಿಯನ್ನು ಕೂಡುವ ಸಂಕೇತವಾಗಿರುತ್ತದೆ. ರಾತ್ರಿಯಿಂದ ಬೆಳಗ್ಗಿನವರೆಗೂ ಕಪ್ಪೆ ಕೂಗುವ ಶಬ್ದವನ್ನು ಈ ಉಪಕರಣ ದಾಖಲಿಸಿಕೊಳ್ಳುತ್ತದೆ. ಅನಂತರ ಇದರ ಮುಂದಿನ ಅಧ್ಯಯನ ಕೈಗೊಳ್ಳಲಾಗುವುದು. ಇಲ್ಲಿಯವರೆಗೆ ನಾವೇ ಸ್ವತಃ ಅರಣ್ಯದಲ್ಲಿದ್ದು, ಆಲಿಸಿಕೊಂಡು ಗುರುತಿಸುವ ಕೆಲಸವಾಗುತ್ತಿತ್ತು ಎಂದು ಡಾ| ಗುರುರಾಜ್‌ ತಿಳಿಸಿದ್ದಾರೆ.

ವನ್ಯಜೀವಿ ಕಾಯ್ದೆ ಶೆಡ್ನೂಲ್‌ 2ಗೆ ಕಪ್ಪೆ ಸೇರ್ಪಡೆ
ಅಪಾಯದಂಚಿನಲ್ಲಿರುವ ಜೀವಿಗಳನ್ನು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರ ಶೆಡ್ನೂಲ್‌ 2ಕ್ಕೆ ಇತ್ತೀಚೆಗೆ ಸೇರಿಸಲಾಗಿದೆ. ಇತ್ತೀಚೆಗೆ ಕಪ್ಪೆಗಳ ಸಂತತಿ ಅಳಿವಿನಂಚಿಗೆ ಸಾಗುತ್ತಿರುವ ಬಗ್ಗೆ ಕಪ್ಪೆ ಸಂಶೋಧಕರ ವರದಿಗಳನ್ನು ಆಧರಿಸಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯವು ಕಪ್ಪೆಗಳನ್ನೂ ಶೆಡ್ನೂಲ್‌2 ಪಟ್ಟಿಗೆ ಸೇರಿಸಿದೆ. ಕಪ್ಪೆಗಳ ಬೇಟೆ, ಅಕ್ರಮ ಸಾಗಾಟ, ಕಪ್ಪೆಗಳ ಸಂತತಿಗೆ ಹಾನಿ ಮಾಡುವಂಥ ಚಟುವಟಿಕೆಗಳನ್ನು ಈ ಕಾನೂನಿನಡಿ ಶಿಕ್ಷೆಗೆ ಒಳಪಡಿಸಲಾಗುತ್ತಿದೆ. ಇತ್ತೀಚೆಗೆ ಗೋವಾಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಕಪ್ಪೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರವಾರದಲ್ಲಿ ಆರೋಪಿಗಳ ಸಹಿತ ವಶಕ್ಕೆ ಪಡೆದು ಈ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ.

ಕಪ್ಪೆಗಳಿಗೆ ಯಾಕಿಷ್ಟು ಪ್ರಾಮುಖ್ಯ?
ಇತ್ತೀಚೆಗೆ ಜಗತ್ತಿನಲ್ಲಿ 8 ಸಾವಿರ ಕಪ್ಪೆ ಪ್ರಭೇದಗಳ ಬಗ್ಗೆ ಅಧ್ಯಯನ ಮಾಡಲಾಗಿದ್ದು, ಶೇ.41 ಕಪ್ಪೆ ಅಳವಿನಂಚಿನ ಸ್ಥಿತಿಯಲ್ಲಿದೆ. ನಮ್ಮ ದೇಶದಲ್ಲಿ 426 ಪ್ರಭೇದಗಳ ಅಧ್ಯಯನ ಮಾಡಿದ್ದು, 136 ಪ್ರಭೇದಗಳು ವಿನಾಶದಂಚಿನಲ್ಲಿವೆ. ಇದರಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಪರಿಸರ ವ್ಯವಸ್ಥೆಯ ಆಹಾರ ಸರಪಳಿಯಲ್ಲಿ ಕಪ್ಪೆಗಳದ್ದು ಬಹುದೊಡ್ಡ ಪಾತ್ರ. ಕಪ್ಪೆಗಳು ಪರಿಸರದ ಆರೋಗ್ಯ ಸೂಚಕ ಜೀವಿಗಳಾಗಿವೆ. ಕೀಟ ಸಾಂದ್ರತೆಯನ್ನು ನಿಯಂತ್ರಣದಲ್ಲಿಡುವ ಶಕ್ತಿ ಇವುಗಳಿಗಿದೆ. ಕಪ್ಪೆ ಸಂತತಿಯೇ ಇಲ್ಲದಾದರೆ ಕೀಟ ಸಂತತಿಗಳು ಏರಿಕೆಯಾಗಿ ದೊಡ್ಡ ಗಂಡಾಂತರ ಎದುರಾಗಬಹುದು. ರೈತ ಸ್ನೇಹಿಯಾಗಿಯೂ ಕಪ್ಪೆಗಳು ಕೆಲಸ ಮಾಡುತ್ತವೆ ಎನ್ನುತ್ತಾರೆ ಕಪ್ಪೆ ಸಂಶೋಧಕರು.

ಮಾಹೆ ವಿ.ವಿ.ಯ ಡಾ| ಟಿ. ಎಂ. ಪೈ ಎಂಡೋಮೆಂಟ್‌ ಚೆಯರ್‌ ವತಿಯಿಂದ ಕಪ್ಪೆಗಳ ಅಧ್ಯಯನ ಮತ್ತು ಪ್ರಸ್ತುತ ಹವಾಮಾನ ಸ್ಥಿತಿಗತಿ ಕಪ್ಪೆಗಳ ಮೇಲಾಗುತ್ತಿರುವ ಪರಿಣಾಮದ ಬಗ್ಗೆ ಸಂಶೋಧನೆಗಾಗಿ 10 ಲಕ್ಷ ರೂ. ಅನುದಾನ ನೀಡಿದೆ. ಈ ನಿಟ್ಟಿನಲ್ಲಿ ಕೆಲಸಗಳು ಸಾಗುತ್ತಿದ್ದು, ಆಧುನಿಕ ತಂತ್ರಜ್ಞಾನದ ನೆರವು ಪಡೆದು ಕಪ್ಪೆಗಳ ಅಧ್ಯಯನ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ.
– ಡಾ| ಕೆ. ವಿ. ಗುರುರಾಜ್‌, ಕಪ್ಪೆ ಸಂಶೋಧಕರು, ಸಹ ಪ್ರಾಧ್ಯಾಪಕ, ಸೃಷ್ಟಿ ಮಣಿಪಾಲ್‌, ಇನ್‌ಸ್ಟಿಟ್ಯೂಟ್‌ ಆಫ್ ಡಿಸೈನ್‌ ಆ್ಯಂಡ್‌ ಟೆಕ್ನಾಲಜಿ, ಮಾಹೆ, ಬೆಂಗಳೂರು.

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.