![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 19, 2019, 6:10 AM IST
ಕಾರ್ಕಳ: ಚರಂಡಿ ನಿರ್ವಹಣೆಯಿಲ್ಲದ ಕಾರಣ ಪಕ್ಕದ ಬಾವಿ ನೀರು ಕಲುಷಿತವಾಗುತ್ತಿರುವ ದುಃಸ್ಥಿತಿ ಬಂಗ್ಲೆಗುಡ್ಡೆಯಲ್ಲಿ ನಿರ್ಮಾಣವಾಗಿದೆ. ಚರಂಡಿಯ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗದೇ ಭೂಮಿ ಸೇರುವಂತಾಗಿದ್ದು, ಮಲಿನ ನೀರು ಬಾವಿ ಸೇರುತ್ತಿದೆ. ಸ್ಥಳೀಯ ನಾಗರಿಕರು ಕುಡಿಯುವ ನೀರಿಗಾಗಿ ಇಲ್ಲಿನ ಬಾವಿಯನ್ನೇ ಅವಲಂಬಿಸಿದ್ದು, ಇದೀಗ ಬಾವಿ ನೀರು ಬಳಕೆಗೆ ಹಿಂದೇಟು ಹಾಕುತ್ತಿದ್ದಾರೆ.
ರೋಗದ ಭೀತಿ
ತೆರೆದ ಚರಂಡಿಯಲ್ಲಿ ತ್ಯಾಜ್ಯ ನೀರು ಹರಿಯಲು ಬಿಡುವುದರಿಂದ ಪರಿಸರ ಪೂರ್ತಿ ಗಬ್ಬುನಾತ ಬೀರುತ್ತಿದೆ. ಸೊಳ್ಳೆ ಉತ್ಪಾದನಾ ತಾಣವಾಗಿಯೂ ಮಾರ್ಪಡಾಗಿದೆ. ಸೊಳ್ಳೆ ಕಾಟ ರೋಗ ಹರಡುವ ಭೀತಿ ಸƒಷ್ಟಿಸಿದೆ. ಆದರೂ ಕ್ರಿಮಿನಾಶಕ ಸಿಂಪಡಿಸುವ ಕಾರ್ಯಕ್ಕೆ ಕಾರ್ಕಳ ಪುರಸಭೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಚಪ್ಪಡಿ ಅಳವಡಿಸಿಲ್ಲ
ಚರಂಡಿಗೆ ಹಾಸು ಅಳವಡಿಸದೇ ಇರುವುದು ಕೂಡ ಸಂಬಂಧಪಟ್ಟವರ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಇದರ ಪಕ್ಕದಲ್ಲೇ ಅಂಗನವಾಡಿ ಕೇಂದ್ರವೂ ಇರುವುದರಿಂದ ಪೋಷಕರು ಆತಂಕಗೊಂಡು ಮಕ್ಕಳನ್ನು ಅಂಗನವಾಡಿ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.