“ನಮ್ಮ ಭಾವನೆ, ಮನಸ್ಸು ನಿಯಂತ್ರಕರು ನಾವೇ ಆಗಿರಬೇಕು’: ವಾಗ್ಮಿ ಬಿ. ಕೆ. ಶಿವಾನಿ


Team Udayavani, Feb 12, 2024, 12:01 AM IST

“ನಮ್ಮ ಭಾವನೆ, ಮನಸ್ಸು ನಿಯಂತ್ರಕರು ನಾವೇ ಆಗಿರಬೇಕು’: ವಾಗ್ಮಿ ಬಿ. ಕೆ. ಶಿವಾನಿ

ಮಣಿಪಾಲ : ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿ ಸಬೇಕು. ಇದರ ಕೀಲಿ ಕೈ ಇನ್ನೊಬ್ಬರಿಗೆ ಕೊಡಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬ ದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದು ವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ ಬಿ.ಕೆ. ಶಿವಾನಿ ಅವರು ಹೇಳಿದರು.

ಮಣಿಪಾಲ ಶಾಖೆಯ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಅಪರಿಮಿತ ಸಂತೋಷಕ್ಕಾಗಿ ಪರಮಾತ್ಮನೊಂದಿಗೆ ಮನಸ್ಸನ್ನು ಜೋಡಿಸಿ’ ಎಂಬ ವಿಷಯದಲ್ಲಿ ಅವರು ಸ್ಫೂರ್ತಿದಾಯಕ ಪ್ರವಚನ ನೀಡಿದರು.

ನಾವು ಮಾಡುವ ಕಾರ್ಯ ದಲ್ಲಿ ಪರಿಪೂರ್ಣ ತೆಯನ್ನು ರೂಢಿಸಿಕೊಳ್ಳ ಬೇಕು. ಪರಿಪೂರ್ಣತೆಯಿದ್ದಂತೆ ಸಕಾರಾತ್ಮಕ ಚಿಂತನೆಗಳು ನಮ್ಮೆಡೆಗೆ ಬರುತ್ತವೆ. ಇನ್ನೊಬ್ಬರ ಕಾರಣದಿಂದ ನಮ್ಮೊಳಗೆ ನಾವು ಒತ್ತಡ ತಂದು ಕೊಳ್ಳಬಾರದು. ಇನ್ನೊಬ್ಬರಿಗೆ ನಾವೂಒತ್ತಡ ನೀಡಬಾರದು. ನಿತ್ಯ ಜೀವನದ ವ್ಯವಹಾರಿಕ ವಿಷಯಗಳು ನಮ್ಮ ಒತ್ತಡ ಹೆಚ್ಚಿಸದಂತೆ ನೋಡಿ ಕೊಳ್ಳಬೇಕು. ಎಲ್ಲ ಕಾಯಿಲೆಗಳನ್ನು ಬಗೆಹರಿಸಲು ವೈದ್ಯರು ಸಿಗುತ್ತಾರೆ. ಆದರೆ, ನಮ್ಮೊಳಗೆ ಭಾವನಾತ್ಮಕವಾಗಿ ಸುದೃಢ ಆರೋಗ್ಯ ಕಾಪಾಡಿಕೊಳ್ಳಲು ನಾವೇ ವೈದ್ಯರಾಗಬೇಕು. ನಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಬೇಕು. ಸಾಗುತ್ತಿರುವ ಮಾರ್ಗ ಸರಿಯಿಲ್ಲ ಎಂದಾಗ ತತ್‌ಕ್ಷಣವೇ ಯು-ಟರ್ನ್ ತೆಗೆದುಕೊಂಡು ಸರಿಯಾದ ಮಾರ್ಗದಲ್ಲಿ ಸಾಗಬೇಕು ಎಂದರು.

ಮಕ್ಕಳಲ್ಲಿ ಸಕಾರಾತ್ಮಕತೆ ಬೆಳೆಸಿ
ಪರೀಕ್ಷೆಯಲ್ಲಿ ಗಳಿಸುವ ಅಂಕದ ಕಾರಣಕ್ಕೆ ಎಲ್ಲವೂ ಸಾಧ್ಯವಾಗುತ್ತದೆ ಎಂದೇನೂ ಇಲ್ಲ. ಹೀಗಾಗಿ ಅಂಕಗಳ ಮೇಲೆ ಗಮನ ಮಾಡದೇ ಅವರಲ್ಲಿ ಪರೀಕ್ಷೆ ಭಯ ದೂರ ಮಾಡಬೇಕು. ವೃತ್ತಿಪರ ಏಳ್ಗೆಯ ಜತೆಗೆ ವೈಯಕ್ತಿಕ ಏಳ್ಗೆಯೂ ಅತಿ ಮುಖ್ಯ. ವೈಯಕ್ತಿಕವಾಗಿ ನಾವು ಬೆಳೆಯಬೇಕಾದರೆ ಬೌದ್ಧಿಕವಾಗಿ ಬೆಳೆಯಬೇಕು. ಮಕ್ಕಳಲ್ಲಿ ಸಕಾರಾತ್ಮಕ ಬೌದ್ಧಿಕತೆ/ಚಿಂತನೆ ತುಂಬಬೇಕು ಎಂದು ಸಲಹೆ ನೀಡಿದರು.

ಶಾಸಕ ಯಶ್‌ಪಾಲ್‌ ಎ. ಸುವರ್ಣ, ಐಎಂಎ ಉಡುಪಿ ಶಾಖೆ ಅಧ್ಯಕ್ಷೆ ಡಾ| ರಾಜಲಕ್ಷ್ಮೀ, ಮನೋವೈದ್ಯ ವಿರೂಪಾಕ್ಷ ದೇವರಮನೆ, ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ, ಎಂಎಂಎನ್‌ಎಲ್‌ನ ವನಿತಾ ಜಿ. ಪೈ, ಆಭರಣ ಸಮೂಹ ಸಂಸ್ಥೆಯ ಸಂಧ್ಯಾ ಕಾಮತ್‌, ಉದ್ಯಮಿಗಳಾದ ಅಜಯ್‌ ಪಿ. ಶೆಟ್ಟಿ, ರಮೇಶ್‌ ಬಂಗೇರ, ಬ್ರಹ್ಮಕುಮಾರೀಸ್‌ ಮಣಿಪಾಲ ಶಾಖೆಯ ಸಂಚಾಲಕಿ ಬಿ.ಕೆ.ಸೌರಭಾ, ಬಿ.ಕೆ. ಸುಜಾತಾ ಉಪಸ್ಥಿತರಿದ್ದರು. ಶ್ರೀನಿಧಿ ನಿರೂಪಿಸಿದರು.

ಟಾಪ್ ನ್ಯೂಸ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.