BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

ಭಟ್ ಅವರನ್ನು ಗೆಲ್ಲಿಸಲೇಬೇಕಾದ ಅನಿವಾರ್ಯತೆ ನನ್ನಂತಹ ಅದೆಷ್ಟೋ ಕಾರ್ಯಕರ್ತರಿಗಿದೆ...

Team Udayavani, May 30, 2024, 7:37 PM IST

1-qwewqew

ಉಡುಪಿ: ‘ಬಿಜೆಪಿ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಸ್ವೀಕಾರಾರ್ಹ ಮತ್ತು ಸ್ವಾಗತಾರ್ಹ’ ಎಂದು ಮಹೇಶ್ ಠಾಕೂರ್ ಗುರುವಾರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

‘ಕಳೆದ 23 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕೆ. ರಘುಪತಿ ಭಟ್ ಆವರ ಮೂಲಕವೇ ರಾಜಕೀಯ ಪ್ರವೇಶಿಸಿದವನು. ಈ ತನಕವೂ ಮೇರು ಧುರೀಣರೂ, ಪ್ರಾತಃ ಸ್ಮರಣೀಯರೂ ಆದ ಡಾ. ವಿ.ಎಸ್. ಆಚಾರ್ಯರೂ ಸೇರಿದಂತೆ ಪಕ್ಷದ ಅನೇಕ ನಾಯಕರ ಮಾರ್ಗದರ್ಶನ,ಪ್ರೋತ್ಸಾಹದಿಂದ ಮೂರು ಬಾರಿ ನಗರಸಭಾ ಸದಸ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ನಗರಾಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದಕ್ಕೆ ಅತ್ಯಂತ ಅಭಾರಿಯಾಗಿದ್ದೇನೆ. ನನಗೆ ಪಕ್ಷ ಮತ್ತು ಮುಖಂಡರ ಶಿಫಾರಸ್ಸಿನಂತೆ ನೀಡಿದ ಎಲ್ಲ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಶಿರಸಾ ವಹಿಸಿ ನಿರ್ವಹಿಸಿರುವ ಬಗ್ಗೆ ನನಗೆ ಅತೀವ ಸಂತೃಪ್ತಿ ಇದೆ. ಇದೀಗ ಪಕ್ಷ ತೆಗೆದುಕೊಂಡು ನಿರ್ಣಯದಂತೆ ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ಜಿಲ್ಲಾ ಉಪಾಧ್ಯಕ್ಷ ಸ್ಥಾನದಿಂದ ವಜಾ ಮಾಡಿರುವುದನ್ನೂ ಅಷ್ಟೇ ವಿನಯವಾಗಿ ಸ್ವಾಗತಿಸುತ್ತೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

‘ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಸಂದರ್ಭ ಪಕ್ಷದ ರಾಜ್ಯಮಟ್ಟದ ನಾಯಕರು ಕರಾವಳಿಯ ಪ್ರಬುದ್ಧ ಮತದಾರರ ಆಶಯಕ್ಕೆ ವಿರುದ್ಧ ವಾಗಿ ಕೈಗೊಂಡಿರುವ ತೀರ್ಮಾನ ಮತ್ತು ಮಾಜಿ ಶಾಸಕರೂ, ನಮ್ಮ ಮಾರ್ಗದರ್ಶಕರೂ, ಮೂರು ಬಾರಿ ಶಾಸಕರಾಗಿ ‘ನವ ಉಡುಪಿಯ ಅಭಿವೃದ್ಧಿಯ ಹರಿಕಾರ’ರೆಂದೇ ಜನಮನ್ನಣೆ ಪಡೆದ ಮಗುವಿನಂತಹ ಮನಸ್ಸುಳ್ಳ ಸದಾ ಅಭಿವೃದ್ಧಿಯ ಮಂತ್ರವನ್ನೇ ಜಪಿಸುವ ಕೆ. ರಘುಪತಿ ಭಟ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡದೇ ವಂಚಿಸಿರುವುದು ಅರಗಿಸಿಕೊಳ್ಳಲು ಕಷ್ಟಸಾಧ್ಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಭಟ್ ಅವರಿಗೆ ವಂಚನೆಯಾದಾಗ ಪಕ್ಷದ ಹಿತದೃಷ್ಟಿಯಿಂದ ಬಂಡಾಯ ಏಳದೇ ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಿದ್ದೇವೆ. ಆದರೆ ಎರಡನೇ ಬಾರಿ ಪಕ್ಷದ ನಾಯಕರಿಂದ ಆಗಿರುವ ತೀವ್ರ ತಪ್ಪು ಅತ್ಯಂತ ವಿಷಾದನೀಯ’ ಎಂದು ಹೇಳಿದ್ದಾರೆ.

‘ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ತೀರಾ ಆಘಾತಕಾರಿಯಾಗಿದೆ. ಇದಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳದೇ ಇದ್ದರೆ ಪಕ್ಷಕ್ಕೆೆ ದೊಡ್ಡ ಮಟ್ಟದ ಹಾನಿ ತಪ್ಪಿದ್ದಲ್ಲ. ಆದ್ದರಿಂದ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಪಕ್ಷದ ಒಳಿತಿಗಾಗಿ ಭಟ್ ಅವರನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿರುವ ಹಿನ್ನೆೆಲೆಯಲ್ಲಿ ಒತ್ತಡ, ಒತ್ತಾಯಕ್ಕೆ ಮಣಿದು ರಘುಪತಿ ಭಟ್ ಅವರು ಸ್ಪರ್ಧಿಸುತ್ತಿದ್ದಾರೆ. ಖಂಡಿತವಾಗಿಯೂ ಇದು ಪಕ್ಷದ ವಿರುದ್ಧವಲ್ಲ ಎನ್ನುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಭಟ್ ಅವರೊಡನೆ ನಿಂತು ಅವರನ್ನು ಗೆಲ್ಲಿಸಲೇ ಬೇಕಾದ ಅನಿವಾರ್ಯತೆ ನನ್ನಂತಹ ಅದೆಷ್ಟೋ ಕಾರ್ಯಕರ್ತರಿಗಿದೆ. ಈಗಲೂ ಹಾಗೂ ಚುನಾವಣೆಯಲ್ಲಿ ಗೆದ್ದ ಅನಂತರವೂ ಭಟ್ಟರೊಂದಿಗೆ ನಾವು ಮತ್ತೆ ಪಕ್ಷದವರೇ ಆಗಿದ್ದೇವೆ, ಆಗಿರುತ್ತೇವೆ’ ಎಂದು ಹೇಳಿದ್ದಾರೆ.

‘ಸದ್ಯದ ಪರಿಸ್ಥಿತಿಯಲ್ಲಿ ಕಠೋರ ವಾಸ್ತವವನ್ನು ಜಿಲ್ಲೆಯ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಇರುವುದರಿಂದ ಅವರ ತೀರ್ಮಾನವನ್ನು ಖಂಡಿತವಾಗಿಯೂ ಪ್ರಶ್ನಿಸುವುದಿಲ್ಲ. ಇದು ತಾತ್ಕಾಲಿಕವೂ ಆಗಿದೆ. ರಘುಪತಿ ಭಟ್ ಅವರ ವಿಜಯದೊಂದಿಗೆ ಕರಾವಳಿಯ ಸುಶಿಕ್ಷಿತರಿಗೆ ನ್ಯಾಯ ಒದಗಿಸಿದ ಬಳಿಕ ನಾಯಕರಿಗೆ ಜ್ಞಾನೋದಯವಾಗುವುದು ನಿಶ್ಚಿತ. ಆದ್ದರಿಂದ ಎಲ್ಲವೂ ಸುಖಾಂತ್ಯವಾಗಿ ಪಕ್ಷಕ್ಕೆ ರಾಜ್ಯದಲ್ಲಿ ಭವಿಷ್ಯವನ್ನು ಸುದೃಢಗೊಳಿಸುವ ನಿಟ್ಟಿನಿಲ್ಲಿ ಭಟ್ ಅವರು ಕೈಗೊಂಡ ತೀರ್ಮಾನವನ್ನು ಸಮ್ಮತಿಸಿ ಅವರೊಂದಿಗೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಪಕ್ಷ ನನ್ನ ಮೇಲೆ ಕೈಗೊಂಡ ತೀರ್ಮಾನವನ್ನು ಯಾವುದೇ ಮುನಿಸಿಲ್ಲದೆ ಮನಸಾರೆ ಒಪ್ಪಿ ಸ್ವೀಕರಿಸುತ್ತೇನೆ’ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.