Udupi: ಇಂದಿನಿಂದ ವಿಶ್ವ ಬಂಟರ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ


Team Udayavani, Oct 28, 2023, 12:06 AM IST

Udupi: ಇಂದಿನಿಂದ ವಿಶ್ವ ಬಂಟರ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೇತೃತ್ವದ ವಿಶ್ವ ಬಂಟರ ಸಮ್ಮೇಳನಕ್ಕೆ ಇಂದು (ಅ. 28) ಚಾಲನೆ ಸಿಗಲಿದೆ. ದಿನ ಪೂರ್ತಿ ವಿವಿಧ ಕ್ರೀಡಾಕೂಟಗಳು ನಡೆಯಲಿವೆ. ಅ. 29ರಂದು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮ್ಮೇಳನದ ಮೆರುಗು ಹೆಚ್ಚಿಸಲಿವೆ.

ಶನಿವಾರ ಬೆಳಗ್ಗೆ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ “ಕ್ರೀಡಾ ಸಂಗಮ’ ಆರಂಭವಾಗಲಿದೆ. ಟ್ರ್ಯಾಕ್‌, ಕಬಡ್ಡಿ ಪಂದ್ಯಾಟಕ್ಕೆ ಕ್ರೀಡಾಂ ಗಣ ಸಜ್ಜುಗೊಂಡಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 1 ಗಂಟೆಗೆ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ನೀಡುವರು.

ಕ್ರೀಡಾಕೂಟ ಚಾಲನೆಗೂ ಮುನ್ನ ಬೆಳಗ್ಗೆ 9ಕ್ಕೆ ನಗರದ ಬೋರ್ಡ್‌ ಹೈಸ್ಕೂಲ್‌ನಿಂದ ಬೃಹತ್‌ ಸಾಲಂಕೃತ ಮೆರವಣಿಗೆ ಆರಂಭಗೊಂಡು ಕೆ.ಎಂ. ಮಾರ್ಗದ ಮೂಲಕ ಹಳೆ ಡಯಾನ ವೃತ್ತ ಮಾರ್ಗವಾಗಿ ಅಜ್ಜರಕಾಡು ಮೈದಾನದವರೆಗೆ ಸಾಗಲಿದೆ. 100ಕ್ಕೂ ಅಧಿಕ ಬಂಟರ ಸಂಘದ ಸಾವಿರಾರು ಮಂದಿ ಪಾಲ್ಗೊಳ್ಳುವರು.

ಜನಪದ ಕಲಾತಂಡಗಳು, ಉಡುಪಿಯ ಕಡೆಗೋಲು ಕೃಷ್ಣ, ಕಟೀಲು ದುರ್ಗಾ ಪರಮೇಶ್ವರಿ ಸಹಿತ ವಿವಿಧ ಸ್ತಬ್ಧ ಚಿತ್ರಗಳು, ಕಂಬಳದ ಕೋಣಗಳುಹುಲಿ ವೇಷ, ಕೀಲುಕುದುರೆ ಗೊಂಬೆಗಳು ಇತ್ಯಾದಿ ಮೆರವಣಿಗೆಗೆ ಕಳೆ ತುಂಬಲಿವೆ. ಬಳಿಕ ಅಜ್ಜರಕಾಡು ಮೈದಾನದಲ್ಲಿ ಬಂಟರ ಸಂಘಗಳ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಲಿದೆ.

ಪ್ರೊ ಕಬಡ್ಡಿ
ಕ್ರೀಡೋತ್ಸವದಲ್ಲಿ ವಿಶೇಷವಾಗಿ ಮಧ್ಯಾಹ್ನ 3ರಿಂದ ರಾತ್ರಿ 11ರ ವರೆಗೆ ಪ್ರೊ ಕಬಡ್ಡಿ ಮಾದರಿಯಲ್ಲಿ 8 ತಂಡಗಳ ಪಂದ್ಯಾಟ ನಡೆಯಲಿದೆ. ಎಲ್ಲ ವಯೋಮಾನದವರಿಗೆಆ್ಯತ್ಲೆಟಿಕ್‌ ಜತೆಗೆ ವಾಲಿಬಾಲ್‌, ಹಗ್ಗ ಜಗ್ಗಾಟ, ತ್ರೋಬಾಲ… ಮತ್ತಿತರ ಪಂದ್ಯಗಳಿವೆ. 2 ಸಾವಿರಕ್ಕೂ ಅಧಿಕ ಕ್ರೀಡಾಳುಗಳು ಭಾಗವಹಿಸುವರು.

ವಾಹನ ನಿಲುಗಡೆ
ಅಜ್ಜರಕಾಡು ವಿವೇಕಾನಂದ ಸರಕಾರಿ ಶಾಲೆ ಮತ್ತು ಸೈಂಟ್‌ ಸಿಸಿಲಿ ಶಾಲೆಯ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಸಾಂಸ್ಕೃತಿಕ ವೈಭವಕ್ಕೆ ಗುತ್ತಿನ ಮನೆ ವೇದಿಕೆ
ಅ. 29ರಂದು ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದ ಆವರಣದಲ್ಲಿ ತೆರೆದ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ ಜರಗಲಿದೆ. 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವರು. ಗುತ್ತಿನ ಮನೆ ಹೋಲುವ ಬೃಹತ್‌ ವೇದಿಕೆ ನಿರ್ಮಿಸಿದ್ದು. ಗುತ್ತಿನ ಮನೆಯ ಕಲಾಸ್ಪರ್ಶ ಸಮ್ಮೇಳನಕ್ಕೆ ಮೆರುಗು ನೀಡಲಿದೆ. ಕುಂದಾಪುರ, ಸುಳ್ಯ, ಉತ್ತರ ಕನ್ನಡ ಜಿಲ್ಲೆಯ 250 ವರ್ಷ ಹಿಂದಿನ ಗುತ್ತಿನ ಮನೆಗಳ ಕಂಬಗಳನ್ನು ಇದಕ್ಕೆ ಬಳಸಿರುವುದು ವಿಶೇಷ.

ಊಟೋಪಚಾರ
ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಸಸ್ಯಾಹಾರಿ, ಮಾಂಸಹಾರಿ ಭೋಜನ, ಸಂಜೆ ಉಪಾ ಹಾರ, ರಾತ್ರಿ ಭೋಜನ ವ್ಯವಸ್ಥೆ ಮಾಡಲಾಗಿದೆ. ನೂರಾರು ಬಾಣಸಿ ಗರು ಶುಕ್ರವಾರದಿಂದಲೇ ಅಡುಗೆ ತಯಾರಿಯಲ್ಲಿದ್ದಾರೆ. ಕುಡಿಯುವ ನೀರು, ಸುಲಭ ಶೌಚಾಲಯ ಸಹಿತ ಅಗತ್ಯ ಮೂಲಸೌಕರ್ಯವನ್ನು ಅಜ್ಜರಕಾಡು ಮೈದಾನದಲ್ಲಿ ರೂಪಿಸಲಾಗಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.