ಯಶ್‌ಪಾಲ್‌ ಸುವರ್ಣ ಗೆಲುವು ಹಿಂದುತ್ವದ ಗೆಲುವು: ಶ್ರೀಕಾಂತ ಶೆಟ್ಟಿ

ತೆಂಕನಿಡಿಯೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ

Team Udayavani, May 5, 2023, 5:42 PM IST

1-ys

ಮಲ್ಪೆ: ಹಿಂದುತ್ವದ ನೆಲೆಯಲ್ಲಿ ರಾಷ್ಟ್ರೀಯವಾದಿ ನೆಲೆಗಟ್ಟಿನಲ್ಲಿ ಬೆಳೆದು ಬಂದ ಯುವ ನಾಯಕ ಯಶ್‌ಪಾಲ್‌ ಸುವರ್ಣ ಅವರ ಈ ಬಾರಿಯ ಗೆಲುವು ಹಿಂದುತ್ವದ ಗೆಲುವಾಗಲಿದೆ ಎಂದು ಧಾರ್ಮಿಕ ಮುಖಂಡ ಶ್ರೀಕಾಂತ್‌ ಶೆಟ್ಟಿ ಹೇಳಿದರು. ಅವರು ತೆಂಕನಿಡಿಯೂರು ಮತ್ತು ಬಡಾನಿಡಿಯೂರು ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿಯೇ ಮಾದರಿ ಕ್ಷೇತ್ರ
ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್‌ ಪಕ್ಷ ಹಿಂದೂ ಸಮಾಜದ ರಕ್ಷಣೆಗೆ ಪಣತೊಟ್ಟ ಭಜರಂಗದಳ ಸಂಘಟನೆಯನ್ನು ನಿಷೇಧಿಸಲು ಹೊರಟ ಈ ಕಾಲಘಟ್ಟದಲ್ಲಿ ಭಜರಂಗದಳದ ಜಿಲ್ಲಾ ಸಂಚಾಲಕರಾಗಿದ್ದ, ರಾಜಕೀಯ, ಸಹಕಾರ, ಧಾರ್ಮಿಕ ಕ್ಷೇತ್ರದಲ್ಲೂ ನಾಯಕರಾಗಿ ಗುರುತಿಸಿ ಕೊಂಡಿರುವ ದಿಟ್ಟ ನಿಲುವಿನ ಯಶ್‌ಪಾಲ್‌ ಸುವರ್ಣ ಈ ಬಾರಿ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಉಡುಪಿಯ ಜನತೆ ಈ ಬಾರಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡುವಂತೆ ಕರೆ ನೀಡಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕನಸಿನೊಂದಿಗೆ ಡಾ| ವಿ. ಎಸ್‌. ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಬೆಳೆದು ಬಂದ ಯಶ್‌ಪಾಲ್‌ ಸುವರ್ಣ ಉಡುಪಿ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲಿದ್ದಾರೆ ಎಂದರು.

ಶಾಸಕ ರಘುಪತಿ ಭಟ್‌ ಮಾತನಾಡಿ, ಶಾಸಕನಾಗಿ ತೆಂಕನಿಡಿಯೂರು ಮತ್ತು ಬಡಾನಿಡಿಯೂರು ಗ್ರಾಮಗಳಿಗೆ ಗರಿಷ್ಠ ಅನುದಾನ ಒದಗಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಅವರನ್ನು ಗೆಲ್ಲಿಸುವ ಮೂಲಕ ಮುಂದಿನ ದಿನಗಳಲ್ಲಿ ಗ್ರಾಮದ ನಿರಂತರ ಅಭಿವೃದ್ಧಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.

ಬಿಜೆಪಿಗೆ ಮತ್ತೂಮ್ಮೆ ಅವಕಾಶದ ವಿಶ್ವಾಸ
ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ತಲುಪಿಸಿ ಮತದಾರರನ್ನು ದಿಕ್ಕು ತಪ್ಪಿಸಲು ಮುಂದಾಗಿರೋ ಕಾಂಗ್ರೆಸ್‌, ಇದೀಗ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಉಲ್ಲೇಖೀಸಿದ್ದು ಈ ಮೂಲಕ ಕಾಂಗ್ರೆಸ್‌ ಪಕ್ಷದ ಹಿಂದೂ ವಿರೋಧಿ ನಿಲುವು ಇದೀಗ ಬಯಲಾಗಿದೆ. ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ಮತ್ತು ರಾಷ್ಟÅವಾದಿ ಚಿಂತನೆಯ ಆಧಾರದಲ್ಲಿ ಈ ಬಾರಿ ಬಿಜೆಪಿ ಚುನಾವಣೆಯನ್ನು ಎದುರಿಸುತ್ತಿದ್ದು, ಕ್ಷೇತ್ರದ ಜನತೆ ಮತ್ತೂಮ್ಮೆ ಬಿಜೆಪಿಗೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಹೇಳಿದರು.

ಸಮೃದ್ಧ ಸುಂದರ ಉಡುಪಿ
ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಮಾತನಾಡಿ, ಕೀರ್ತಿಶೇಷ ಡಾ| ವಿ. ಎಸ್‌. ಆಚಾರ್ಯ ಅವರಿಂದ ಪ್ರಾರಂಭಗೊಂಡ ನವ ನಿರ್ಮಾಣಗೊಳ್ಳುತ್ತಿರುವ ಉಡುಪಿಯ ಅಭಿವೃದ್ಧಿಯ ಶಕೆಯನ್ನು ಶಾಸಕ ಕೆ. ರಘುಪತಿ ಭಟ್‌ ಮುಂದುವರಿಸಿ ಇನ್ನು ಮುಂದೆ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಸಮೃದ್ಧ ಸುಂದರ ಉಡುಪಿಯ ಕನಸು ನನಸಾಗಲಿದೆ ಎಂದು ಆಶಿಸಿದರು.

ಯಶ್‌ಪಾಲ್‌ ಗೆಲುವು ಸಂಸ್ಕೃತಿಯ ಗೆಲುವು
ಯಶ್‌ಪಾಲ್‌ ಸುವರ್ಣ ಅವರ ಗೆಲುವಿನಿಂದ ಗೋವುಗಳ ರಕ್ಷಣೆ ಸಾಧ್ಯ. ಮತಾಂತರ ನಿಷೇಧದ ಲಕ್ಷಣ, ಹೊಸ ಹೊಸ ಚಿಂತನೆಯನ್ನು ಮಾಡಲು ಸಾಧ್ಯ. ಕೇವಲ ಮೋದಿ ಅವರ ಭಾವಚಿತ್ರವನ್ನು ತೋರಿಸಿ, ಅವರ ಹೆಸರನ್ನು ಹೇಳುತ್ತಾ ಮತ ಪಡೆಯುವ ಬದಲಾಗಿ ಅದೇ ರೀತಿ ಪ್ರಾಮಾಣಿಕತೆಯಿಂದ ನಡೆಯುವಂತ ವ್ಯಕ್ತಿ ಯಶ್‌ಪಾಲ್‌. ದೇಶಭಕ್ತಿಯ ರೀತಿಯಲ್ಲಿ ಯಶ್‌ಪಾಲ್‌ ಅವರನ್ನು ಗೆಲ್ಲಿಸಿದರೆ ಉಡುಪಿ ಭ್ರಷ್ಟಾಚಾರ ರಹಿತ, ಆರೋಗ್ಯವಂತ ಉಡುಪಿ ಆಗಲು ಸಾಧ್ಯತೆ ಇದೆ ಎಂದು ನಗರಸಭಾ ಸದಸ್ಯ ವಿಜಯ ಕೊಡವೂರು ಹೇಳಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ, ತೆಂಕನಿಡಿಯೂರು ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಅರುಣ್‌ ಜತ್ತನ್‌, ಬಡಾನಿಡಿಯೂರು ಗ್ರಾ. ಪಂ. ಅಧ್ಯಕ್ಷ ಪ್ರಭಾಕರ್‌ ತಿಂಗಳಾಯ, ತಾ. ಪಂ. ಮಾಜಿ ಉಪಾಧ್ಯಕ್ಷ ಶರತ್‌ ಬೈಲಕೆರೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ್‌ ಪ್ರಕಾಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.