ಅಧ್ಯಕ್ಷರಿಗೆ ಮೀಸಲಾತಿ ಚಿಂತೆ, ಉಪಾಧ್ಯಕ್ಷರಿಗೆ ನಿವೃತ್ತಿ ಬಯಕೆ

ಜಿ.ಪಂ. ಕ್ಷೇತ್ರ ಪುನರ್ವಿಂಗಡನೆ

Team Udayavani, Feb 20, 2021, 4:30 AM IST

ಅಧ್ಯಕ್ಷರಿಗೆ ಮೀಸಲಾತಿ ಚಿಂತೆ, ಉಪಾಧ್ಯಕ್ಷರಿಗೆ ನಿವೃತ್ತಿ ಬಯಕೆ

ಉಡುಪಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರ ಪುನರ್ವಿಂಡನೆ ಕಾರ್ಯ ಭರದಿಂದ ನಡೆಯುತ್ತಿದ್ದರೆ ಹಾಲಿ ಸದಸ್ಯರು ತಮ್ಮ ರಾಜಕೀಯ ಚೈತ್ರಯಾತ್ರೆ ಮುಂದೇನು ಎಂದು ಚಿಂತನೆ ನಡೆಸುತ್ತಿದ್ದಾರೆ. ಎಪ್ರಿಲ್‌ ಅಂತ್ಯದವರೆಗೆ ಜಿ.ಪಂ. ಮತ್ತು ತಾ.ಪಂ. ಆಡಳಿತದ ಅವಧಿ ಇದೆ. ಅಷ್ಟರೊಳಗೆ ಚುನಾವಣೆ ನಡೆಯಬೇಕು. ಇದಕ್ಕಾಗಿ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ.

ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರು ಉದ್ಯಾವರ ಜಿ.ಪಂ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದು ಪರಿಶಿಷ್ಟ ಜಾತಿ ಮೀಸಲಾತಿಯ ಕ್ಷೇತ್ರವಾಗಿದೆ. ಮೀಸಲಾತಿಯು ಬದಲಾವಣೆ ಆಗಲಿರುವ ಕಾರಣ ಈ ಕ್ಷೇತ್ರಕ್ಕೆ ಬೇರೆ ಮೀಸಲಾತಿ ಬರುವ ಸಾಧ್ಯತೆ ಇದೆ. ಹೀಗಾದರೆ ದಿನಕರ ಬಾಬು ಅವರು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲೂಬಹುದು, ಅಲ್ಲಿನ ಸ್ಥಳೀಯ ಉಮೇದುವಾರರು ಇದ್ದರೆ ದಿನಕರ ಬಾಬು ಅವರಿಗೆ ಮತ್ತೆ ಸ್ಪರ್ಧಿಸುವುದು ತಡೆಯಾಗಲೂಬಹುದು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿಯವರು ನಿವೃತ್ತಿ ಬಯಸುವ ಹಾಲಿ ಆಡಳಿತ ಮಂಡಳಿಯ 26 ಸದಸ್ಯರಲ್ಲಿ ಏಕೈಕ ಸದಸ್ಯೆ. ಇವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬ್ರಹ್ಮಾವರ. ಅವರಿಗೆ ಈಗ 74 ವರ್ಷ ವಯಸ್ಸು. “ಇನ್ನು ನನಗೆ ಚುನಾವಣೆ ಸ್ಪರ್ಧೆ ಬೇಡ. 40 ವರ್ಷ ರಾಜಕೀಯ ಕ್ಷೇತ್ರದಲ್ಲಿದ್ದೆ. ಈಗ ಮಕ್ಕಳೂ ಬೇಡವೆನ್ನುತ್ತಿದ್ದಾರೆ. ಮುಂದೆ ಮಹಿಳಾ ಮಂಡಲದಂತಹ ಕ್ಷೇತ್ರಗಳಲ್ಲಿ ಮಾತ್ರ ಇರುತ್ತೇನೆ’ ಎಂಬ ಅಭಿಪ್ರಾಯ ಅವರದು.

ಬೈಂದೂರು ಈಗಿರುವ ಜಿ.ಪಂ. ಕ್ಷೇತ್ರಗಳಲ್ಲಿ ಒಂದು. ಆದರೆ ಈಗಾಗಲೇ ಬೈಂದೂರು ಪಟ್ಟಣ ಪಂಚಾಯತ್‌ ಆಗಿ ಘೋಷಣೆಯಾಗಿದೆ. ಆದ್ದರಿಂದ ಈ ವ್ಯಾಪ್ತಿಯಲ್ಲಿರುವ ಮತದಾರರು ಜಿ.ಪಂ. ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಲೆಕ್ಕಾಚಾರದಲ್ಲಿ ಬಾಬು ಶೆಟ್ಟಿ, ಸುರೇಶ ಬಟವಾಡಿ, ಶಂಕರ ಪೂಜಾರಿಯವರಿಗೆ ಜಿ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಆದರೆ ಇದೊಂದು ಗಂಭೀರ ಸಮಸ್ಯೆಯಲ್ಲ. ಇವರು ಬೇರೆ ಗ್ರಾಮಾಂತರದ ಮತಗಟ್ಟೆಗಳಲ್ಲಿ ಹೆಸರು ನೋಂದಾಯಿಸಬಹುದು.

ಬಾಬು ಶೆಟ್ಟಿಯವರು ವಂಡ್ಸೆ ಕ್ಷೇತ್ರದ ಸದಸ್ಯರು. ಇವರ ಹೆಸರು ಮತದಾರರ ಪಟ್ಟಿಯಲ್ಲಿರುವುದು ಬೈಂದೂರಿನಲ್ಲಿ. “ಪಕ್ಷ ಅವಕಾಶ ಕೊಟ್ಟರೆ ಬೇರೆಡೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಸ್ಪರ್ಧಿಸಬಹುದು’ ಎನ್ನುತ್ತಾರೆ ಶೆಟ್ಟಿಯವರು. ಸುರೇಶ ಬಟವಾಡಿಯವರು ಶಿರೂರು ಜಿ.ಪಂ. ಕ್ಷೇತ್ರದವರು. ಈ ಕ್ಷೇತ್ರದಲ್ಲಿದ್ದ ಪಡುವರಿ ಗ್ರಾಮವು ಬೈಂದೂರು ಪ.ಪಂ.ಗೆ ಹೋಗಿದೆ. ಇವರ ಮತ ಕ್ಷೇತ್ರ ಪಡುವರಿ. ಶಂಕರ ಪೂಜಾರಿ ಅವರು ಬೈಂದೂರು ಜಿ.ಪಂ. ಕ್ಷೇತ್ರದವರು. ಯಡ್ತರೆ, ಬೈಂದೂರು ಗ್ರಾಮವು ಪ.ಪಂ.ಗೆ ಹೋಗಿರುವುದರಿಂದ ಇವರೂ ಪಕ್ಕದಲ್ಲಿ ಸೃಷ್ಟಿಯಾಗಬಹುದಾದ ಕೊಲ್ಲೂರು ಕ್ಷೇತ್ರಕ್ಕೂ ಸ್ಪರ್ಧಿಸಬಹುದು. ಸುರೇಶ ಬಟವಾಡಿ ಮತ್ತು ಶಂಕರ ಪೂಜಾರಿ ಅವರೂ ಅಗತ್ಯವಿದ್ದರೆ ಗ್ರಾಮಾಂತರದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಸ್ಪರ್ಧಿಸಬಹುದು.

ಕ್ಷೇತ್ರಗಳು 30ಕ್ಕೇರಲಿವೆ :

ಕ್ಷೇತ್ರ ಬದಲಾವಣೆ ಮಾಡಬೇಕಾದರೆ ಆಕಾಂಕ್ಷಿಗಳಿಗೆ ಇನ್ನೊಂದು ವರದಾನವಿದೆ. ಇದೆಂದರೆ ಇದುವರೆಗೆ ಇದ್ದ 26 ಜಿ.ಪಂ. ಕ್ಷೇತ್ರಗಳು ಮುಂದೆ 30ಕ್ಕೇರಲಿವೆ. ಹೀಗಾಗಿ ಮೀಸಲಾತಿ ಬದಲಾದರೂ ಕ್ಷೇತ್ರಗಳು ಹೆಚ್ಚಿಗೆ ಆಗುವುದರಿಂದ ಅವಕಾಶಗಳು ಹೆಚ್ಚಿಗೆ ಇವೆ. ಮೀಸಲಾತಿ ಬದಲಾದಾಗ ಅದಕ್ಕೆ ಸೂಕ್ತ ಅಭ್ಯರ್ಥಿಗಳೂ ಪಕ್ಷಕ್ಕೆ ಅಗತ್ಯವಾಗುತ್ತದೆ. ಹೀಗಾಗಿ ಅದೇ ಕ್ಷೇತ್ರದಿಂದ ಹಾಲಿ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಸಿಗುವುದು ಕಷ್ಟಸಾಧ್ಯ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.