Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ
Team Udayavani, Oct 23, 2024, 11:49 PM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿನ ಭೂಮಿ ಮತ್ತು ಗುಡ್ಡ ಕುಸಿತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು 100 ಕೋಟಿ ರೂ. ಬಿಡುಗಡೆ ಮಾಡುವಂತೆ ಜಿಲ್ಲಾಡಳಿತ ಸರಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲೆಯಲ್ಲಿ 439 ಸ್ಥಳಗಳಲ್ಲಿ ಭೂ ಕುಸಿತದ ಅಪಾಯವಿದೆ ಎಂದು ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಜ್ಞರು ಗುರುತಿಸಿದ್ದಾರೆ.
ಇದರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಭೂ ಕುಸಿತ, ಗುಡ್ಡ ಕುಸಿತ ಪ್ರದೇಶಗಳಲ್ಲಿ ಸುರಕ್ಷಿತ ಕ್ರಮ, ತಡೆಗೋಡೆ ನಿರ್ಮಾಣವನ್ನು ಹೆದ್ದಾರಿ ಪ್ರಾಧಿಕಾರ, ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದ ಸಂಸ್ಥೆಗಳು ಮಾಡಲಿವೆ.
ರಾಜ್ಯ ಹೆದ್ದಾರಿ ಮತ್ತು ಕೆಲ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಅತಿ ಅಪಾಯದ ಸ್ಥಳದಲ್ಲಿ ಸುರಕ್ಷತ ಕ್ರಮಗಳನ್ನು ಜಿಲ್ಲಾಡಳಿತ ಮಾಡಲಿದೆ. ಈ ಕಾಮಗಾರಿಗಳ ತುರ್ತು ಕಾರ್ಯಕ್ಕೆ ಹಣಕಾಸಿನ ಪ್ರತ್ಯೇಕ ಅನುದಾನ ಬೇಕು. ಅದಕ್ಕಾಗಿ ಅಪರ ಕಾರ್ಯದರ್ಶಿಗಳಿಗೆ ಭೂ ಕುಸಿತ ತಡೆ ಯೋಜನೆಯ ಪ್ಲಾನ್ ಸಹಿತ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ
Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ
Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ
ಕಾಂಗ್ರೆಸ್ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ
Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.