Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು
Team Udayavani, Jun 25, 2024, 9:48 AM IST
ಭಟ್ಕಳ: ಮಾತನಾಡಲೆಂದು ದಾಂಡೇಲಿಯಿಂದ ಭಟ್ಕಳಕ್ಕೆ ಕರೆಯಿಸಿ ಏಳು ತಿಂಗಳ ಮಗುವನ್ನು ಅಪಹರಣ ಮಾಡಿರುವ ಘಟನೆಯೊಂದು ಭಟ್ಕಳದಲ್ಲಿ ನಡೆದಿದ್ದು ಈ ಕುರಿತು ಮಗುವಿನ ತಂದೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಾಗಿದೆ.
ಸೋಮವಾರ ಸಂಜೆ ನಗರ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ಓರ್ವ ಗಂಡಸು ಹಾಗೂ ಇಬ್ಬರು ಹೆಂಗಸರು ದಾಂಡೇಲಿಯ ನಮ್ಮ ಮನೆಗೆ ಬಂದು ತಮ್ಮ ಪರಿಚಯವನ್ನು ಮಾಡಿಕೊಂಡು ಹೋಗಿದ್ದರು. ಇದಾದ ನಂತರ ಅವರು ನನಗೆ ಕರೆ ಮಾಡಿ ಭಟ್ಕಳಕ್ಕೆ ಒಮ್ಮೆ ಬಂದು ಹೋಗುವಂತೆ ವತ್ತಾಯ ಮಾಡಿದ್ದಾರೆ ಅದರಂತೆ ನಾವು ಜೂನ್.೧೮ರಂದು ರಾತ್ರಿ ಭಟ್ಕಳದ ಆಲ್ ಖಲೀಜ್ ಹೋಟೆಲ್ ಬಳಿ ಬಂದು ದೂರವಾಣಿ ಕರೆ ಮಾಡಿದಾಗ ಮೂವರು ಬಂದು ನಮ್ಮನ್ನು ಮಾತನಾಡಿಸಿ ತನ್ನ ಹೆಂಡತಿ ಬಳಿ ಇದ್ದ 7 ತಿಂಗಳ ಮಗುವನ್ನು ಎತ್ತಿಕೊಂಡು ಈಗ ಬರುತ್ತೇವೆ ಎಂದು ಹೋದವರು ನಂತರ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ನಂತರ ನಮ್ಮ ಮೊಬೈಲ್ಗೆ ವಿಡಿಯೋ ಕರೆ ಮಾಡಿ ಮಗುವನ್ನು ತೊರಿಸಿ ಮಗು ಆರಾಮವಾಗಿ ಇರುವುದಾಗಿ ಹೇಳಿದ್ದು ಮಗುವನ್ನು ತಮಗೆ ಮರಳಿ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ಮಗುವಿನ ಅಪಹರಣ ಮಾಡಿರುವ ಕುರಿತು ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.