ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ


Team Udayavani, Oct 10, 2024, 1:20 PM IST

5-dandeli

ದಾಂಡೇಲಿ: ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.

ಕಾಂತಾರ ಖ್ಯಾತಿಯ ಮಾನಸಿ ಸುಧೀರ್ ಅವರ ನೃತ್ಯನಿಕೇತನ ಕೊಡವೂರು ಕಲಾತಂಡದಿಂದ ನಡೆದ ನಾರಸಿಂಹ ನೃತ್ಯರೂಪಕ ಕಾರ್ಯಕ್ರಮ ಅಪಾರ ಜನಾಕರ್ಷಣೆಗೆ ಪಾತ್ರವಾಯಿತು. ಧಾರ್ಮಿಕ ಜಾಗೃತಿಯ ಜೊತೆಗೆ ಮಾನವೀಯ ಮೌಲ್ಯಗಳ ಹೊತ್ತ ಸಂದೇಶ ಇವರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಡಕವಾಗಿದ್ದವು.

ಕಾರ್ಯಕ್ರಮದ ಕೊನೆಯಲ್ಲಿ ಸುಧೀರ್ ಹಾಗೂ ಮಾನಸಿ ಸುಧೀರ್ ಅವರನ್ನು ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಪರವಾಗಿ ಸನ್ಮಾನಿಸಲಾಯಿತು. ‌

ಇದೇ ಸಂದರ್ಭದಲ್ಲಿ ಈ ನೃತ್ಯ ತಂಡದ ಎಲ್ಲಾ ಕಲಾವಿದರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೊಲೀಸ್ ನಿರೀಕ್ಷಕರಾದ ಭೀಮಣ್ಣ ಎಂ. ಸೂರಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾನಸಿ ಸುಧೀರ್ ಹಾಗೂ ಸುಧೀರ್‌, ಹಸಿರುನಗರ ದಾಂಡೇಲಿಯಲ್ಲಿ ಕಾರ್ಯಕ್ರಮ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಅನಂತ ವಂದನೆಗಳು. ಇಲ್ಲಿಯ ಪ್ರೇಕ್ಷಕರು ನೀಡಿದ ಪ್ರೋತ್ಸಾಹ, ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯವರ ಸಹಕಾರ ಸದಾ ಸ್ಮರಣೀಯವಾಗಿದೆ. ಸರ್ವರ ಸಹಕಾರವಿದ್ದಾಗ ಕಲೆ ಮತ್ತು ಕಲಾವಿದ ಬೆಳೆಯಲು ಸಾಧ್ಯ ಎಂದರು.

ಕಲಾವಿದರನ್ನು ಸನ್ಮಾನಿಸಿ ಮಾತನಾಡಿದ ನವರಾತ್ರಿ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸುನೀಲ ಹೆಗಡೆ, ನಮ್ಮ ದೇಶದ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಹಾಗೂ ಆಚಾರ ವಿಚಾಗಳನ್ನು ಸದಾ ಉಳಿಸಿ ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿದೆ. ನವರಾತ್ರಿ ಉತ್ಸವ ದೇವಿಯ ಆರಾಧನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಆಯೋಜನೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಟಿ.ಎಸ್. ಬಾಲಮಣಿ, ಪ್ರಧಾನ ಕಾರ್ಯದರ್ಶಿ ನರೇಂದ್ರ ಚೌಹ್ವಾಣ್, ಖಜಾಂಚಿ ಅಶುತೋಷ ಕುಮಾರ್ ರಾಯ್, ಪ್ರಮುಖರುಗಳಾದ ಶ್ರೀಪತಿ ಭಟ್, ಸುವರ್ಣಾ ಸುನೀಲ ಹೆಗಡೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ಕಲಾವಿದರನ್ನು ಪರಿಚಯಿಸಿದರು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Bellary: ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

Mangaluru: ಬಿಲ್ಡರ್, ಮನೆಯವರ ಮೇಲೆ ಹಲ್ಲೆ… ಬರ್ಕೆ ಪೊಲೀಸರಿಂದ ಇಬ್ಬರ ಬಂಧನ

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Newborn Baby: ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ, ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

Jimmy Tata: ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

Jimmy Tata:ಮೊಬೈಲ್‌ ಬಳಸದೇ 2BHK ಮನೆಯಲ್ಲಿ ವಾಸಿಸುವ ರತನ್‌ ಟಾಟಾ ಸಹೋದರನ ಬಗ್ಗೆ ಗೊತ್ತಾ?

1-tata-aa

Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ

10-sirsi

Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ

3-ankola

Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್‌ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kundapura: ಶಾಲಾ ಶಾರದೋತ್ಸವಕ್ಕೆ 100 ವರ್ಷ!

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

ಹುಬ್ಬಳ್ಳಿ: ರಾಜ್ಯದಲ್ಲೂ ದೇಸಿ ಹಸುವಿಗೆ “ರಾಜ್ಯಮಾತಾ’ ಸ್ಥಾನಕ್ಕೆ ಕೂಗು

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

5

Kateel: ಕಟೀಲಮ್ಮನ ಮಡಿಲಿನಲ್ಲಿ 2,000 ವೇಷಗಳ ನರ್ತನ

Sangeetha Santhosha Kannada Movie

Sangeetha Santhosha: ನವತಂಡದ ಸಂತೋಷದ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.