Dandeli: ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್… ಸಾರಿಗೆ ಘಟಕದ ನಿರ್ಲಕ್ಷ್ಯಕ್ಕೆ ಆಕ್ರೋಶ


Team Udayavani, May 20, 2023, 7:51 PM IST

Dandeli: ಸಮಯಕ್ಕೆ ಸರಿಯಾಗಿ ಬಾರದ ಸಾರಿಗೆ ಬಸ್… ಸಾರಿಗೆ ಘಟಕದ ನಿರ್ಲಕ್ಷ್ಯಕ್ಕೆ ಆಕ್ರೋಶ

ದಾಂಡೇಲಿ: ಸಂಜೆ 4.30 ಗಂಟೆಗೆ ನಗರದ ಬಸ್ ನಿಲ್ದಾಣಕ್ಕೆ ಬರಬೇಕಾದ ಜೋಯಿಡಾ ತಾಲ್ಲೂಕಿನ ರಾಮನಗರಕ್ಕೆ ಹೋಗುವ ಬಸ್ ಸಂಜೆ 6 ಗಂಟೆಯವರೆಗೂ ಬಾರದೆ, ಪ್ರಯಾಣಿಕರು ಕಾದು ಕಾದು ಸುಸ್ತಾಗಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ದಾಂಡೇಲಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ.

ಜೋಯಿಡಾ ತಾಲ್ಲೂಕಿನ ಜಗಲಬೇಟ್ ಮೂಲಕವಾಗಿ ರಾಮನಗರಕ್ಕೆ ಪ್ರತಿದಿನ ಸಂಜೆ 4.30 ಗಂಟೆಗೆ ಸಾರಿಗೆ ಬಸ್ ಸಂಚಾರವಿದ್ದು, ಶನಿವಾರ ಮಾತ್ರ ಸಂಜೆ 4.30 ಗಂಟೆಗೆ ಬಸ್ ನಿಲ್ದಾಣದಿಂದ ರಾಮನಗರಕ್ಕೆ ಹೊರಡಬೇಕಾದ ಬಸ್, ಬಸ್ ನಿಲ್ದಾಣಕ್ಕೆ ಸಂಜೆ 6 ಗಂಟೆಯಾದರೂ ಬಂದಿರಲಿಲ್ಲ. ಪ್ರಯಾಣಿಕರು ಟಿಕೆಟ್ ಕಂಟ್ರೋಲರ್ ಬಳಿ ಬಸ್ ಯಾಕೆ ಬಂದಿಲ್ಲ ಎಂದು ಕೇಳಿದರೆ, ನಾನೇನು ಹೇಳಲಾಗದು, ನೀವು ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಕೇಳಿ ಎಂದಿದ್ದಾರೆ. ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಪ್ರಯಾಣಿಕರಿಗೆ ಸಾರಿಗೆ ಘಟಕ ವ್ಯವಸ್ಥಾಪಕರು ನೀವು ಏನು ಬೇಕಾದ್ರೂ ಮಾಡಿ, ಯಾರಿಗೆ ಬೇಕಾದರೂ ದೂರು ನೀಡಿ ಎಂದು ಉದ್ದಟತನದಿಂದ ಮಾತನಾಡಿದ್ದಾರೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ಬಸ್ ನಿಲ್ದಾಣದಲ್ಲಿ ಸಾರಿಗೆ ಘಟಕದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದರು.

ಈ ಸಂದರ್ಭದಲ್ಲಿ ಟಿಕೆಟ್ ಕಂಟ್ರೋಲರ್ ಲಿಂಗರಾಜು ಅವರನ್ನು ಮಾತನಾಡಿಸಿದಾಗ 4.30 ಗಂಟೆಗೆ ರಾಮನಗರಕ್ಕೆ ಹೋಗಬೇಕಾದ ಬಸ್ಸಿನ ಚಾಲಕ ರಜೆಯಲ್ಲಿರುವುದರಿಂದ ಈ ಸಮಸ್ಯೆಯಾಗಿದೆ. ಕೂಡಲೆ ಬದಲಿ ಬಸ್ ಬಿಡಲಾಗುವುದು ಎಂದಿದ್ದಾರೆ. ಇನ್ನೂ ರಾಮನಗರ-ಜಗಲಬೇಟ್ ಕಡೆ ಹೋಗಬೇಕಾಗಿದ್ದ ಸಿಇಟಿ ಪರೀಕ್ಷೆಗಾಗಿ ನಗರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗತೊಡಗಿದೆ. ರಾಮನಗರ-ಜಗಲಬೇಟ್ ಮೊದಲಾದ ಕಡೆಗಳಲ್ಲಿ ಬಸ್ಸಿನಿಂದ ಇಳಿದು ಕಾಡುದಾರಿಯಲ್ಲಿ ನಡೆದುಕೊಂಡು ಮನೆ ಸೇರಬೇಕಾದ ಸ್ಥಿತಿಯಿದ್ದು, ಮನೆ ಸೇರುವಾಗ ರಾತ್ರಿಯಾಗುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆಗೂ ತೀವ್ರ ತೊಂದರೆಯಾಗಬಹುದಾದ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಇದನ್ನೂ ಓದಿ: ತಾನು ಹುಟ್ಟಿ ಬೆಳೆದ ಚೆನ್ನೈ ಮನೆಯನ್ನೇ ಮಾರಾಟ ಮಾಡಿದ ಗೂಗಲ್‌ ಸಿಇಒ, ಕಣ್ಣೀರಿಟ್ಟ ತಂದೆ…

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.