ಆಚಾರ್ಯ ಶಂಕರರ ಬಗ್ಗೆ ಉಪೇಕ್ಷೆ ಸಲ್ಲ


Team Udayavani, May 9, 2019, 4:35 PM IST

nc-1

ಶಿರಸಿ: ಆಚಾರ್ಯ ಶಂಕರ ಭಗವತ್ಪಾದರ ಬಗ್ಗೆ ನಮ್ಮ ದೇಶದಲ್ಲಿ ಉಪೇಕ್ಷೆ ಇದೆ. ತಾಟಸ್ಥ್ಯವೂ ಇದೆ. ಇದು ಸರಿಯಲ್ಲ ಎಂದು ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ನಗರದ ಯೋಗ ಮಂದಿರದಲ್ಲಿ ಬುಧವಾರ ಶಂಕರ ಜಯಂತಿ ಹಿನ್ನೆಲೆಯಲ್ಲಿ ನೆಲಮಾವ ವೇದವಿದ್ಯಾ ಸಂಸ್ಕಾರ ಮತ್ತು ಸಂಶೋಧನಾ ಕೇಂದ್ರ ನೀಡುವ ಆಚಾರ್ಯ ಶಂಕರಶ್ರೀ ಪ್ರಶಸ್ತಿಯನ್ನು ವಿದ್ವಾನ್‌ ಮಂಜುನಾಥ ಭಟ್ಟ ಕೊಡ್ಲೇಕೆರೆ ಅವರಿಗೆ ಪ್ರದಾನ ಮಾಡಿ ಅವರು ಆಶೀರ್ವಚನ ನುಡಿದರು.

ರಾಜ್ಯ ಸರಕಾರ ಹದಿನೈದು ವರ್ಷಗಳ ನಿರಂತರ ಆಗ್ರಹದಿಂದ ಶಂಕರ ಜಯಂತಿಯನ್ನು ದಾರ್ಶನಿಕರ ದಿನ ಎಂದು ಆಚರಿಸುತ್ತಿದೆ. ಇದು ಒಂದಡೆಗೆ ಖುಷಿ ತಂದರೂ ನಮ್ಮಲ್ಲಿ ಶಂಕರರ ಬಗ್ಗೆ, ಅವರ ಶ್ರೀಶೈಲದ ಬಗ್ಗೆ ಇರುವ ಉಪೇಕ್ಷೆ ಬೇಸರ ತರಿಸುತ್ತದೆ ಎಂದ ಅವರು, ರಾಮಕೃಷ್ಣ ಪರಮಹಂಸರೇ ಹಿಂದೆ ಲೋಕ ಶಿಕ್ಷಣ ನೀಡಲು ಭಗವಂತನಿಂದಲೇ ಶಕ್ತಿ ಹಾಗೂ ಪ್ರೇರಣೆ ಪಡೆದು ಬಂದವರು ಎಂದು ಶಂಕರರ ಬಗ್ಗೆ ಹೇಳಿದ್ದಾರೆ. ರಾಮಕೃಷ್ಣರು ಇನ್ನಾರ ಬಗ್ಗೆಯೂ ಈ ಮಾತು ಆಡಿಲ್ಲ. ಅದಕ್ಕೆ ಶಂಕರರ ಮೇರು ಸದೃಶ್ಯ ವ್ಯಕ್ವಿತ್ವ ಕಾರಣ ಎಂದರು.

ಆಚಾರ್ಯರು ಎಂದರೆ ವೇದ ಶಾಸ್ತ್ರಗಳ ಜ್ಞಾನವನ್ನು ಗಳಿಸುತ್ತಲೇ ಇರುವವನು. ಅದನ್ನು ಶಿಷ್ಯರಿಗೆ ಆಚರಿಸಲು ಹೇಳುತ್ತಲೇ ಇರುವವನು ಹಾಗೂ ಸ್ವತಃ ಆಚರಿಸುವವನು. ಅಂತರ ಸಾಧಕರು ಶಂಕರರಾಗಿದ್ದರು ಎಂದೂ ಬಣ್ಣಿಸಿದರು.

ಬೆಂಗಳೂರಿನ ರಾಮಕೃಷ್ಣ ವಿದ್ಯಾರ್ಥಿ ಮಂದಿರದ ಮುಖ್ಯಸ್ಥ ಶ್ರೀ ಸ್ವಾಮಿ ಶ್ರೀ ತದ್ಯುಕ್ತಾನಂದಜಿ ಮಹಾರಾಜ್‌ ಮಾತನಾಡಿ, ಭಾರತ ದೇಶದ ಸನಾತನ ಸಂಸ್ಕೃತಿ, ಸಂಸ್ಕೃತ ಭಾಷೆಯ ಪುನರುತ್ಥಾನವನು ಆಚಾರ್ಯ ಶಂಕರಾಚಾರ್ಯರು ಮಾಡಿದ್ದರು. ನಾಲ್ಕು ದಿಕ್ಕುಗಳಲ್ಲಿ ಮಠ ಸ್ಥಾಪಿಸಿ ವೇದಗಳು ಸಮಾಜದಿಂದ ಕಣ್ಮರೆಯಾಗದಂತೆ ನೋಡಿಕೊಂಡರು. ಶಂಕರರು 32ವರ್ಷ ಬದುಕಿದರೂ ಸಾವಿರ ವರ್ಷ ಬದುಕಿದರೆನೋ ಎನ್ನುವಷ್ಟು ರೀತಿಯಲ್ಲಿ ಕಾರ್ಯ ಮಾಡಿದರು. ಪೀಠಗಳ ಸ್ಥಾಪನೆಯಿಂದ ಮನುಕುಲಕ್ಕೆ ಬೇಕಾದ ವೇದಗಳು ನಿರಂತರವಾಗಿ ಮುನ್ನಡೆದುಕೊಂಡು ಬಂದವು. ಅವರು ಸ್ಥಾಪಿಸಿದ ವೇದಾಂತ ತತ್ವ 1300ವರ್ಷಗಳ ನಂತರವೂ ದೇಶವಷ್ಟೇ ಅಲ್ಲದೇ ಜಗತ್ತಿನಾದ್ಯಂತ ಐಕ್ಯತೆಗೆ ಪ್ರಸ್ತುತವಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಜಿ.ಎನ್‌.ಭಟ್ಟ ಹರಿಗಾರ ಪ್ರಸ್ತಾವಿಕ ಮಾತನಾಡಿದರು. ಮಠದ ಅಧ್ಯಕ್ಷ ವಿ.ಎನ್‌.ಹೆಗಡೆ ಬೊಮ್ಮನಳ್ಳಿ ಇದ್ದರು. ಶ್ರೀ ಸ್ವರ್ಣವಲ್ಲೀ ಸಂಸ್ಥಾನ, ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಯೋಗ ಮಂದಿರ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿತ್ತು.

ಇಂದು ಶಂಕರ ಜಯಂತಿ

ಹೊನ್ನಾವರ: ಹಡಿನಬಾಳದ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ರಾಗಶ್ರೀ ಸಂಗೀತ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ವಿಷ್ಣುಮೂರ್ತಿ ಸೇವಾ ಮಂಡಳಿ ಇದರ ಆಶ್ರಯದಲ್ಲಿ ಶಂಕರ ಜಯಂತಿ, ಸಂಗೀತ ಕಾರ್ಯಕ್ರಮ ಹಾಗೂ ವಸಂತ ಪೂಜೆ ಕಾರ್ಯಕ್ರಮ ಮೇ 9ರಂದು 5.30ಕ್ಕೆ ನಡೆಯಲಿದೆ. ನಾರಾಯಣ ಶಾಸ್ತ್ರೀ ಜಮಖಂಡಿಯವರು ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಸೀತಾರಾಮ ಹೆಗಡೆ ಹಡಿನಬಾಳ ಹಾಗೂ ಪ್ರೊ| ನಾಗರಾಜ ಹೆಗಡೆ ಅಪಗಾಲ ಭಾಗವಹಿಸುವರು. ನಂತರ ವಸಂತ ಭಟ್ಟ ಗುಂಡಿಬೈಲ್ ಅವರು ಭಜನೆ ಹಾಗೂ ಅಬಂಗ ಗಾಯನವನ್ನು ಪ್ರಸ್ತುತಪಡಿಸುವರು. ತದನಂತರ ರಾಗಶ್ರೀ ವಿದ್ಯಾರ್ಥಿಗಳು ನಡೆಯುವ ಸಂಗೀತ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ಶಂಕರ ಸ್ತೋತ್ರ ಪ್ರಸ್ತುತ ಪಡಿಸುವರು. ಇವರಿಗೆ ವಿದ್ವಾನ್‌ ಎನ್‌.ಜಿ. ಹೆಗಡೆ ಕಪ್ಪೆಕೇರಿ ಹಾಗೂ ಹರಿಶ್ಚಂದ್ರ ನಾಯ್ಕ ತಬಲ ಹಾಗೂ ಸಂವಾದಿನಿ ಸಾಥ್‌ ನೀಡಲಿದ್ದಾರೆ. ನಂತರ ಶ್ರೀ ದೇವರ ವಸಂತ ಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.