Karwar; ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಸರ್ಕಾರಕ್ಕೆ ಒತ್ತಾಯ
Team Udayavani, Aug 18, 2023, 3:50 PM IST
ಕಾರವಾರ: ಅತ್ಯಂತ ಕಡುಬಡತನ ಮತ್ತು ಅಲೆಮಾರಿ ಜನಾಂಗವಾಗಿರುವ ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ ಎಂದು ಉತ್ತರ ಕನ್ನಡ ಜೋಗಿ ಸಮಾಜದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಒತ್ತಾಯಿಸಿದರು.
ಈ ಸಂಬಂಧ ಶುಕ್ರವಾರ ಅವರು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 12 ವರ್ಷಗಳ ಹಿಂದೆ ಜೋಗಿ ಸಮಾಜದ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಸಹ ನಡೆದಿದೆ. ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು ಜೋಗಿ ಸಮಾಜದ ಸಮುದಾಯ ಅಲೆಮಾರಿ ಜನಾಂಗ ಉಳಿಯಲು ಸ್ವಂತ ಮನೆ ಇಲ್ಲ. ಉಳಿಯಲು ಭೂಮಿ ಇಲ್ಲ. ಸಾಕ್ಷರತೆ 00.01 ಇದೆ .ಮೂಡನಂಬಿಕೆ, ಕಂದಾಚಾರ ಸಮಾಜದಲ್ಲಿ ತುಂಬಿದೆ. ಹಾಗಾಗಿ ನಮಗೂ ಗೌರವದ ಬದುಕು ಕೊಡಲು ಸರ್ಕಾರ ನಮ್ಮ ಜೋಗಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಅಖಿಲ ಕರ್ನಾಟಕ ಜೋಗಿ ಸಮಾಜ ಮಹಾಮಂಡಳದ ಗೌರವ ಸಲಹೆಗಾರ ಅಶೋಕ ಎಂ.ಜೋಗಿ ಸಿದ್ದಾಪುರ ಅವರು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದರು.
12 ವರ್ಷದ ಹಿಂದೆ ಸರ್ಕಾರ ಜೋಗಿ ಸಮಾಜದ ಸ್ಥಿತಿ ಗತಿ, ಅಲಮಾರಿತನ, ಆಚರಣೆ, ಸಂಪ್ರದಾಯ, ಆಹಾರ ಪದ್ಧತಿ, ವೃತ್ತಿಯ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿದೆ. ಹಾಗಾಗಿ ಸರ್ಕಾರ ಆ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಜೋಗಿ ಸಮಾಜ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಜೋಗಿ ಸಮಾಜದ ಸದಸ್ಯರಾದ ವೆಂಕಟೇಶ ಜೋಗಿ, ಶಿರಸಿ ತಾಲೂಕಾ ಅಧ್ಯಕ್ಷ ಅಣ್ಣಪ್ಪ ಜೋಗಿ ಈ ಸಂದರ್ಭದಲ್ಲಿ ಒತ್ತಾಯಿಸಿದರು
ಕಾರ್ಯದರ್ಶಿ ಲಕ್ಷ್ಮಣ ಜೋಗಿ, ಗಿರೀಶ ಜೋಗಿ, ಕಾರವಾರ ಜಿಲ್ಲಾ ಜೋಗಿ ಸಮಾಜದ ದುರ್ಗಾ ಎಂ.ಮಧುರಕರ್, ವಿಶ್ವನಾಥ ಈರಣ್ಣ ಜೋಗಿ, ಮಂಜುನಾಥ ಜೋಗಿ, ಸೋನು ಮೋರೆ, ದೇವಣ್ಣ ಬಾಬನಿ ಹಾಗೂ ಸಮಾಜದ ಮಹಿಳೆಯರು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗೆ ಮನವಿ ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ
Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ
Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು
Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ
Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.