ಮರಾಠ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸಿ: ರಾಜ್ಯ ಸರ್ಕಾರಕ್ಕೆ ಮನವಿ

ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ ; ಹೋರಾಟದ ಎಚ್ಚರಿಕೆ

Team Udayavani, Dec 7, 2022, 3:45 PM IST

1-wq-wqewq

ಕಾರವಾರ: ಮರಾಠ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸಿ ಎಂದು ಜಿಲ್ಲೆಯ ಮರಾಠ ಸಮಾಜದ ವತಿಯಿಂದ ಕಾರವಾರದಲ್ಲಿ ಬುಧುವಾರ ಸಾಂಕೇತಿಕ ಪ್ರತಿಭಟನೆ ಮಾಡಿ, ರಾಜ್ಯ ಸರ್ಕಾರಕ್ಕೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ಮರಾಠ ಸಮಾಜದ 8 ಉಪ ವರ್ಗಗಳು 3 ಬಿ ಪಂಗಡದಲ್ಲಿವೆ. ಈ ಮರಾಠ ಉಪ ವರ್ಗಗಳನ್ನು 2 ಎ ಪಂಗಡಕ್ಕೆ ಸೇರಿಸಬೇಕು. ತಕ್ಷಣ ಈ ಸಂಬಂಧ ಕ್ರಮಗಳಾಗಬೇಕು . ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಕ್ಷತ್ರಿಯ ಮರಾಠ ಸಮಾಜದ ಜಿಲ್ಲಾಧ್ಯಕ್ಷ ಕುಮಾರ್ ಬೊಬಾಟೆ ಎಚ್ಚರಿಕೆ ನೀಡಿದರು. ಸರಕಾರಕ್ಕೆ ಮನವಿ ನೀಡಿದ ನಂತರ ಸಮುದಾಯದ ಮುಖಂಡರು ಹಾಗೂ ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿ ನಾವು ಏನನ್ನೇ ಪಡೆಯಲು ರಾಜಕೀಯ ನಾಯಕತ್ವ ಅಗತ್ಯ. ನಾವೇ ರಾಜಕೀಯ ಪ್ರಾತಿನಿಧ್ಯ ಪಡೆದರೆ ನಮ್ಮ ಬೇಡಿಕೆಗಳಿಗೆ ಯಾರ ಮುಂದೆಯೂ ಕೈಯೊಡ್ಡ ಬೇಕಿಲ್ಲ ಎಂದರು. ಮರಾಠರು ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಒಗ್ಗಟ್ಟಾಗುವ ಕಾಲ ಬಂದಿದೆ ಎಂದು ಅವರು ನುಡಿದರು. ಇನ್ನು ಹೋರಾಟಕ್ಕೆ ತಯಾರಾಗೋಣ. ಇವತ್ತಿನದು ಮೊದಲ ಹೆಜ್ಜೆ ಎಂದರು.

ಮರಾಠ ಸಮುದಾಯ ಬೇರೆ. ಮರಾಠಿ ಭಾಷೆ ಬೇರೆ. ಕನ್ನಡ ನಮ್ಮ ವ್ಯವಹಾರದ ಭಾಷೆ. ಮರಾಠಿ ಮನೆ ಭಾಷೆ. ಆದರೆ ಎಲ್ಲಾ ಭಾಷೆ ಮಾತನಾಡುವ ಮರಾಠ ಸಮುದಾಯವಿದೆ. ಅವರನ್ನು ಸಮುದಾಯದ ದೃಷ್ಟಿಯಿಂದ ಒಗ್ಗೂಡಿಸಬೇಕು. ಕರ್ನಾಟಕದಲ್ಲಿ ಇರುವ ಲಕ್ಷಾಂತರ ಮರಾಠ ಸಮುದಾಯ ಒಗ್ಗೂಡಿಸಿ ರಾಜಕೀಯ ಪ್ರಾತಿನಿಧ್ಯ ಪಡೆಯಬೇಕು ಎಂದರು.ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ

ಮರಾಠ ಸಮಾಜದ ಮುಖಂಡ ಎಲ್.ಟಿ.ಪಾಟೀಲ್ ಮಾತನಾಡಿ ಯಡಿಯೂರಪ್ಪ ಮುಖ್ಯಮಂತ್ರಿಯಾದ 24 ಗಂಟೆಯಲ್ಲಿ ಮರಾಠ ಸಮಾಜವನ್ನು 2 ಎ ಗುಂಪಿಗೆ ಸೇರಿಸುವ ಮಾತು ಕೊಟ್ಟಿದ್ದರು. ಆದರೆ ಮಾತು ಉಳಿಸಿಕೊಳ್ಳಲಿಲ್ಲ. ಬೊಮ್ಮಾಯಿ ಅವರು ನಮ್ಮ ಸಮಾಜದತ್ತ ತಿರುಗಿ ನೋಡಿಲ್ಲ.ಮರಾಠ ಸಮಾಜವನ್ನು ಮರಳಿ ಒಗ್ಗೂಡಿಸೋಣ. ಅದಕ್ಕಾಗಿ ನಾನು ರಾಜ್ಯ ಸುತ್ತಲು ಸಿದ್ದ ಎಂದರು. ನಮ್ಮನ್ನು ಇತ್ತ ಬಿಜೆಪಿಗರು ನಂಬುತ್ತಿಲ್ಲ‌. ನಮ್ಮನ್ನು ಕಾಂಗ್ರೆಸ್ ನವರು ಎಂದು ಬಿಂಬಿಸಲಾಗಿದೆ. ಕಾಂಗ್ರೆಸ್ ನವರು ನಮ್ಮನ್ನು ಬಿಜೆಪಿಯವರಂತೆ ಕಾಣುತ್ತಾರೆ. ಇದು ನಮ್ಮ ಸಂಕಟ. ನಮಗೆ ನಾವೇ ಈಗ ನಾಯಕರಾಗಬೇಕಿದೆ. ಘೋರ್ಪಡೆ ಕಾಲಕ್ಕೆ ಸಮಾಜ ಒಗ್ಗೂಡಲಿಲ್ಲ. ಪಿ.ಜಿ.ಆರ್ .ಸಿಂಧ್ಯಾ ಅವರ ಪ್ರಯತ್ನವೂ ಸಾಕಗಲಿಲ್ಲ. ಈಗ ನಾವು ಮತ್ತೆ ಪ್ರಯತ್ನಿಸೋಣ ಎಂದರು‌.

ಮರಾಠ ಸಮಾಜದ ರಾಜ್ಯ ಉಪಾಧ್ಯಕ್ಷ ನಾಗೇಂದ್ರ ಜೋವೂಜಿ ಮಾತನಾಡಿ, ನಮ್ಮ ಮೊದಲ ಬೇಡಿಕೆ 2 ಎ ಸಮಾಜಕ್ಕೆ ಸೇರ್ಪಡೆಯಾಗುವುದು. ನಾವು ಕೇಂದ್ರ , ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ ಎಂದರು.

ಎಸ್.ಕೆ.ಗೌಡ ಮಾತನಾಡಿ ಮರಾಠ ಸಮಾಜ ಒಗ್ಗೂಡಿ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ಇದು ಸಕಾಲ. ನಮ್ಮ ಸಮಾಜದ ವ್ಯಕ್ತಿಗೆ ಚುನಾವಣೆಯಲ್ಲಿ ಬೆಂಬಲ ನೀಡಬೇಕಿದೆ‌ ಎಂದರು.

ಮರಾಠ ಸಮಾಜದ ಮುಖಂಡರು ಸಭೆಯಲ್ಲಿ ಮಾತನಾಡಿ ಸರ್ಕಾರ ಮರಾಠರನ್ನು ನಿರ್ಲಕ್ಷಿಸಿದೆ ಎಂದು ಕಿಡಿಕಿಡಿಯಾದರು. ಸಮಾಜದ ಮುಖಂಡರಾದ ಉಡಚಪ್ಪ ಬೊಬಾಟೆ, ಸುಭಾಷ್ , ಮಹೇಶ್ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು. ಮನವಿ ನೀಡಿಕೆಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಹ ಎಲ್ .ಟಿ.ಪಾಟೀಲ್ ಮಾತನಾಡಿ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ, ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಲಾಗಯವುದು ಎಂದರು.ವೀರ ಮರಾಠ ಸೇನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.